ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಲರನ್ನು ಸಮಾನವಾಗಿ ಕಾಣುವ ಪಕ್ಷ ಬಿಜೆಪಿ

‘ಬಿಜೆಪಿ ಬೂತ್‌ ವಿಜಯ’ ಅಭಿಯಾನದಲ್ಲಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಹೇಳಿಕೆ
Last Updated 2 ಜನವರಿ 2023, 13:57 IST
ಅಕ್ಷರ ಗಾತ್ರ

ಚಿತ್ರದುರ್ಗ: ತಾಲ್ಲೂಕಿನ ಮಲ್ಲಾಪುರ ಗೊಲ್ಲರಹಟ್ಟಿಯಲ್ಲಿ ಬಿಜೆಪಿ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ‘ಬಿಜೆಪಿ ಬೂತ್‌ ವಿಜಯ’ ಅಭಿಯಾನಕ್ಕೆ ಸೋಮವಾರ ಚಾಲನೆ ದೊರಕಿತು.

ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ, ‘ಬಿಜೆಪಿ ಒಂದು ಜಾತಿ, ಧರ್ಮಕ್ಕೆ ಸಿಮೀತವಾಗದೆ ಎಲ್ಲರನ್ನೂ ಸಮಾನವಾಗಿ ಕಾಣುವ ಪಕ್ಷ. ಸದಾ ಒಂದಲ್ಲ ಒಂದು ಕಾರ್ಯಕ್ರಮದ ಮೂಲಕ ಜನರ ಮಧ್ಯೆ ಪಕ್ಷ ಕೆಲಸ ಮಾಡುತ್ತಿದೆ. ದೇಶದಲ್ಲಿ ಶಾಂತಿ ನೆಲೆಸಬೇಕೆಂದರೆ ಅದು ಬಿಜೆಪಿಯಿಂದ ಮಾತ್ರ ಸಾಧ್ಯ’ ಎಂದರು.

‘ಚಿತ್ರದುರ್ಗ ವಿಧಾನಸಭಾ ಕ್ಷೇತ್ರವನ್ನು ನೂರಾರು ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಗಿದೆ. ಸಿಸಿ ರಸ್ತೆ, ಉದ್ಯಾನ, ಚೆಕ್‌ಡ್ಯಾಂ, ಶಾಲಾ ಕಟ್ಟಡಗಳು ಹೀಗೆ ಸಾಕಷ್ಟು ಕೆಲಸಗಳು ನಡೆದಿವೆ’ ಎಂದು ಹೇಳಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎ.ಮುರುಳಿ, ‘ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಆಗಿರುವ ಅಭಿವೃದ್ಧಿ ಯೋಜನೆಗಳನ್ನು ಪ್ರತಿ ಮನೆಗೆ ತಲುಪಿಸುವ ಕೆಲಸವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕು. ಆಗ ಮಾತ್ರ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದು ವಿಜಯೋತ್ಸವ ಆಚರಿಸಲು ಸಾಧ್ಯ’ ಎಂದರು.‌

ಮಲ್ಲಾಪುರ ಗೊಲ್ಲರಹಟ್ಟಿಯ ಬೂತ್‌ ಅಧ್ಯಕ್ಷ ತಿಪ್ಪೇಸ್ವಾಮಿ ಅವರ ನಿವಾಸದ ಮೇಲೆ ಪಕ್ಷದ ಬಾವುಟ ಹಾರಿಸಲಾಯಿತು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಿ.ಟಿ.ಸುರೇಶ್‌, ಗ್ರಾಮಾಂತರ ಮಂಡಲ ಅಧ್ಯಕ್ಷ ಕಲ್ಲೇಶಯ್ಯ, ಉಪಾಧ್ಯಕ್ಷೆ ಚಂದ್ರಿಕಾ ಲೋಕನಾಥ್‌, ಮಂಡಲ ಉಸ್ತುವಾರಿಗಳಾದ ಎ.ರೇಖಾ, ಶಿವಣ್ಣಾಚಾರ್‌, ಪ್ರಧಾನ ಕಾರ್ಯದರ್ಶಿಗಳಾದ ವಸಂತ, ವೀರೇಶ್‌, ಮುಖಂಡ ಡಾ.ಸಿದ್ದಾರ್ಥ್‌ ಗುಂಡಾರ್ಪಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT