ಕೋವಿಡ್ ಸಮಯದಲ್ಲಿ ಕಡಿತ ಮಾಡಲಾಗಿದ್ದ ಕಾಮಗಾರಿಗಳನ್ನು ಈ ವರ್ಷ ಹೆಚ್ಚುವರಿ ಸೇರಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ. ಉದ್ಯೋಗ ಖಾತ್ರಿ ಯೋಜನೆಗೆ ಹೆಚ್ಚು ಆದ್ಯತೆ ನೀಡಿದ್ದು, ಕಾಲ, ಕಾಲಕ್ಕೆ ಕೂಲಿ, ಸಾಮಗ್ರಿ ಹಣ ಬಿಡುಗಡೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಪಂಚಾಯಿತಿ ಅನುದಾನಕ್ಕೆಮನವಿ ಮಾಡಿದ ತಕ್ಷಣ ಅನುದಾನ ಬಿಡುಗಡೆ ಮಾಡುವ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಹೇಳಿದರು.