ಗುರುವಾರ, 10 ಜುಲೈ 2025
×
ADVERTISEMENT
ADVERTISEMENT

28 ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳ ಗೆಲುವು ಖಚಿತ: ರಾಧಾಮೋಹನ್‌ ದಾಸ್‌

Published : 31 ಮಾರ್ಚ್ 2024, 16:08 IST
Last Updated : 31 ಮಾರ್ಚ್ 2024, 16:08 IST
ಫಾಲೋ ಮಾಡಿ
Comments
ರಾಜ್ಯದ 28 ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳ ಗೆಲುವು ಖಚಿತ. ನರೇಂದ್ರ ಮೋದಿ ಯಡಿಯೂರಪ್ಪ ದೇವೇಗೌಡರು ಕುಮಾರಣ್ಣ ಅವರ ಸಾಧನೆ ಜನರಿಗೆ ತಿಳಿಸುವ ಕೆಲಸ ಆಗಬೇಕು. ಅನ್ಯೋನ್ಯತೆಯಿಂದ ಕಾರಜೋಳ ಗೆಲುವಿಗೆ ಶ್ರಮಿಸೋಣ.
ತಿಪ್ಪೇಸ್ವಾಮಿ ವಿಧಾನಪರಿಷತ್‌ ಸದಸ್ಯ
ಬಿಜೆಪಿ ಜೆಡಿಎಸ್‌ ಮೈತ್ರಿ ಕಾಂಗ್ರೆಸ್ಸಿಗರ ಎದೆ ನಡುಗಿಸುವಂತಿದೆ. ಇಬ್ಬರೂ ಪ್ರಧಾನಿಗಳು ನಮಗಿದ್ದಾರೆ. ಒಂದು ಸೀಟು ಗೆದ್ದವರು 20 ಸೀಟು ಗೆಲ್ಲುವ ಹೇಳಿಕೆ ನೀಡುತ್ತಿರುವುದು ತಮಾಷೆಯಾಗಿದೆ. ಚುನಾವಣೆ ಬಳಿಕ ಮೈತ್ರಿ ಸರ್ಕಾರ ಬರಬೇಕು.
ಜಿ.ಎಚ್‌.ತಿಪ್ಪಾರೆಡ್ಡಿ ಮಾಜಿ ಶಾಸಕ
ಸಮನ್ವಯ ಸಭೆ ಬಳಿಕ ಗಲಾಟೆ
ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷದ ಕಾರ್ಯಕರ್ತರ ಸಮನ್ವಯ ಸಭೆ ಬಳಿಕ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆಯಿತು. ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ತುಮಕೂರು ಜಿಲ್ಲೆಯ ಪಾವಗಡ ಬಿಜೆಪಿ ಕಾರ್ಯಕರ್ತ ಚೈತನ್ಯ ಮೇಲೆ ಪಾವಗಡ ಬಿಜೆಪಿ ಯುವ ಮೋರ್ಚಾ ಮಾಜಿ ಅಧ್ಯಕ್ಷ ಮಧು ಹಲ್ಲೆ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧ ಪೋಸ್ಟ್ ಹಿನ್ನೆಲೆಯಲ್ಲಿ ಗಲಾಟೆ ನಡೆದಿದೆ. ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ತೆರಳಿದ ಬೆನ್ನಲ್ಲೇ ಪ್ರಾರಂಭವಾದ ಗಲಾಟೆ ಕೊನೆಗೆ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತು. ಗಲಾಟೆ ಗಮನಿಸಿದ ಮುಖಂಡರು ಇಬ್ಬರನ್ನೂ ಸಮಾಧಾನಪಡಿಸಿ ಕಳಹಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT