ರಾಜ್ಯದ 28 ಕ್ಷೇತ್ರಗಳಲ್ಲಿ ಎನ್ಡಿಎ ಅಭ್ಯರ್ಥಿಗಳ ಗೆಲುವು ಖಚಿತ. ನರೇಂದ್ರ ಮೋದಿ ಯಡಿಯೂರಪ್ಪ ದೇವೇಗೌಡರು ಕುಮಾರಣ್ಣ ಅವರ ಸಾಧನೆ ಜನರಿಗೆ ತಿಳಿಸುವ ಕೆಲಸ ಆಗಬೇಕು. ಅನ್ಯೋನ್ಯತೆಯಿಂದ ಕಾರಜೋಳ ಗೆಲುವಿಗೆ ಶ್ರಮಿಸೋಣ.
ತಿಪ್ಪೇಸ್ವಾಮಿ ವಿಧಾನಪರಿಷತ್ ಸದಸ್ಯ
ಬಿಜೆಪಿ ಜೆಡಿಎಸ್ ಮೈತ್ರಿ ಕಾಂಗ್ರೆಸ್ಸಿಗರ ಎದೆ ನಡುಗಿಸುವಂತಿದೆ. ಇಬ್ಬರೂ ಪ್ರಧಾನಿಗಳು ನಮಗಿದ್ದಾರೆ. ಒಂದು ಸೀಟು ಗೆದ್ದವರು 20 ಸೀಟು ಗೆಲ್ಲುವ ಹೇಳಿಕೆ ನೀಡುತ್ತಿರುವುದು ತಮಾಷೆಯಾಗಿದೆ. ಚುನಾವಣೆ ಬಳಿಕ ಮೈತ್ರಿ ಸರ್ಕಾರ ಬರಬೇಕು.
ಜಿ.ಎಚ್.ತಿಪ್ಪಾರೆಡ್ಡಿ ಮಾಜಿ ಶಾಸಕ
ಸಮನ್ವಯ ಸಭೆ ಬಳಿಕ ಗಲಾಟೆ
ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಮನ್ವಯ ಸಭೆ ಬಳಿಕ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆಯಿತು. ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ತುಮಕೂರು ಜಿಲ್ಲೆಯ ಪಾವಗಡ ಬಿಜೆಪಿ ಕಾರ್ಯಕರ್ತ ಚೈತನ್ಯ ಮೇಲೆ ಪಾವಗಡ ಬಿಜೆಪಿ ಯುವ ಮೋರ್ಚಾ ಮಾಜಿ ಅಧ್ಯಕ್ಷ ಮಧು ಹಲ್ಲೆ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧ ಪೋಸ್ಟ್ ಹಿನ್ನೆಲೆಯಲ್ಲಿ ಗಲಾಟೆ ನಡೆದಿದೆ. ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ತೆರಳಿದ ಬೆನ್ನಲ್ಲೇ ಪ್ರಾರಂಭವಾದ ಗಲಾಟೆ ಕೊನೆಗೆ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತು. ಗಲಾಟೆ ಗಮನಿಸಿದ ಮುಖಂಡರು ಇಬ್ಬರನ್ನೂ ಸಮಾಧಾನಪಡಿಸಿ ಕಳಹಿಸಿದರು.