ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ ಜಿರೋನಾ ಅಥವಾ ಹಿರೋನಾ ಎಂಬುದು ಗೊತ್ತಾಗಿದೆ. ಹಾನಗಲ್ ವಿಧಾನಸಭಾ ಕ್ಷೇತ್ರ ಗೆದ್ದ ಕಾಂಗ್ರೆಸ್, ಇಡೀ ದೇಶವನ್ನು ಗೆದ್ದಿರುವಂತೆ ಬೀಗುತ್ತಿದೆ. ಕಾಂಗ್ರೆಸ್, ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರನ್ನು ನೋಡಿ ಜನ ಮತ ನೀಡಿಲ್ಲ’ ಎಂದು ಹೇಳಿದರು.