ಬಿಜೆಪಿ ವಿಭಾಗೀಯ ಸಹ ಪ್ರಭಾರಿ ಜಿ.ಎಂ.ಸುರೇಶ್, ‘ಲೋಕಸಭಾ ಚುನಾವಣೆ ಅಂಗವಾಗಿ ಪಕ್ಷ ಹಲವು ಕಾರ್ಯಕ್ರಮಗಳನ್ನು ರೂಪಿಸಿದೆ. ಅವುಗಳನ್ನು ಯಶಸ್ವಿಗೊಳಿಸುವ ಹೊಣೆ ಪ್ರತಿಯೊಬ್ಬ ಕಾರ್ಯಕರ್ತರ ಮೇಲಿದೆ. ಫೆ.24ರಂದು ಆಕಾಶವಾಣಿಯಲ್ಲಿ ಪ್ರಸಾರವಾಗಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ‘ಮನದ ಮಾತು’ ತಲುಪಿಸುವ ವ್ಯವಸ್ಥೆ ಮಾಡಬೇಕಿದೆ. ಕಾರ್ಯಕರ್ತರು ಒಂದೆಡೆ ಸೇರಿ ಆಕಾಶವಾಣಿಯಲ್ಲಿ ಇದನ್ನು ಆಲಿಸಿ’ ಎಂದು ಮನವಿ ಮಾಡಿದರು.