<p><strong>ಚಿತ್ರದುರ್ಗ</strong>: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ‘ದಲಿತ’ ಸಮುದಾಯದವರ ಕುರಿತು ನೀಡಿರುವ ಹೇಳಿಕೆ ಖಂಡಿಸಿ ಬಿಜೆಪಿ ಎಸ್ಸಿ ಮೋರ್ಚಾದ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.</p>.<p>‘ದಲಿತ ಸಮುದಾಯದವರ ಕುರಿತು ಅವರಿಗೆ ಕಾಳಜಿ ಇಲ್ಲ. ಹೀಗಾಗಿಯೇ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆ’ ಎಂದು ಸಿದ್ದರಾಮಯ್ಯ ವಿರುದ್ಧ ಅಂಬೇಡ್ಕರ್ ವೃತ್ತದ ಎದುರು ಧಿಕ್ಕಾರ ಕೂಗಿದರು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎ. ಮುರಳಿ, ‘ದಲಿತ ಸಮುದಾಯದವರ ಮೇಲೆ ಕಾಂಗ್ರೆಸ್ನಿಂದ ಶೋಷಣೆ ಆಗುತ್ತಿದೆಯೇ ಹೊರತು ಬಿಜೆಪಿಯಿಂದ ಅಲ್ಲ. ಶ್ರೇಷ್ಠ ಸಂವಿಧಾನವನ್ನು ದೇಶಕ್ಕೆ ಕೊಡುಗೆಯಾಗಿ ನೀಡಿದ ಡಾ.ಬಿ.ಆರ್. ಅಂಬೇಡ್ಕರ್ ಅವರ ಸೋಲಿಗೆ ಕಾಂಗ್ರೆಸ್ ಕಾರಣ. ಆ ಪಕ್ಷದ ಮುಖಂಡರ ನಾಟಕೀಯ ಮಾತುಗಳು ಜನರಿಗೆ ಈಗಾಗಲೇ ಅರ್ಥವಾಗಿದೆ’ ಎಂದರು.</p>.<p>‘ಈ ಸಮುದಾಯದಿಂದ ಸ್ಪರ್ಧಿಸಿ ಗೆದ್ದ ಶಾಸಕರ, ಸಂಸದರ ಸಂಖ್ಯೆ ಹೆಚ್ಚಿರುವುದು ಬಿಜೆಪಿಯಲ್ಲಿ ಮಾತ್ರ. ಬೇರೆ ಯಾವ ಪಕ್ಷದಲ್ಲಿಯೂ ಇಲ್ಲ. ಇನ್ನಾದರೂ ಸಿದ್ದರಾಮಯ್ಯ ಅವರು ಹಗುರವಾಗಿ ಮಾತನಾಡುವುದನ್ನು ಬಿಟ್ಟು, ಬಹಿರಂಗವಾಗಿ ದಲಿತ ಸಮುದಾಯದವರಲ್ಲಿ ಕ್ಷಮೆ ಕೇಳಬೇಕು’ ಎಂದು ಒತ್ತಾಯಿಸಿದರು.</p>.<p>ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಭಾರ್ಗವಿ ದ್ರಾವಿಡ್, ‘ದಲಿತರ ಬಗ್ಗೆ ಸಿದ್ದರಾಮಯ್ಯ ಅವರು ಕೀಳಾಗಿ ಮಾತನಾಡಿದ್ದಾರೆ. ದಲಿತ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ತಪ್ಪಿಸಿದ್ದು ಇವರೇ. ಕಾಂಗ್ರೆಸ್ ಈ ಸಮುದಾಯಕ್ಕೆ ನೀಡಿರುವ ಕೊಡುಗೆ ಏನು’ ಎಂದು ಪ್ರಶ್ನಿಸಿದರು.</p>.<p>ಮುಖಂಡರಾದ ಪರಶುರಾಂ, ತಿಮ್ಮಣ್ಣ, ನಾಗರಾಜ್, ಸಿದ್ಧಾರ್ಥ, ಶಿವದತ್, ಜೈಪಾಲಯ್ಯ, ಎಚ್.ಬಿ. ನರೇಂದ್ರ, ವೆಂಕಟೇಶ್ ಯಾದವ್, ಸಂಪತ್, ಶೈಲಜಾ ರೆಡ್ಡಿ, ರೇಖಾ, ನಂದಿ ನಾಗರಾಜ್, ನಾಗರಾಜ್ ಬೇದ್ರೆ, ದಗ್ಗೆ ಶಿವಪ್ರಕಾಶ್, ಶಂಭು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ‘ದಲಿತ’ ಸಮುದಾಯದವರ ಕುರಿತು ನೀಡಿರುವ ಹೇಳಿಕೆ ಖಂಡಿಸಿ ಬಿಜೆಪಿ ಎಸ್ಸಿ ಮೋರ್ಚಾದ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.</p>.<p>‘ದಲಿತ ಸಮುದಾಯದವರ ಕುರಿತು ಅವರಿಗೆ ಕಾಳಜಿ ಇಲ್ಲ. ಹೀಗಾಗಿಯೇ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆ’ ಎಂದು ಸಿದ್ದರಾಮಯ್ಯ ವಿರುದ್ಧ ಅಂಬೇಡ್ಕರ್ ವೃತ್ತದ ಎದುರು ಧಿಕ್ಕಾರ ಕೂಗಿದರು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎ. ಮುರಳಿ, ‘ದಲಿತ ಸಮುದಾಯದವರ ಮೇಲೆ ಕಾಂಗ್ರೆಸ್ನಿಂದ ಶೋಷಣೆ ಆಗುತ್ತಿದೆಯೇ ಹೊರತು ಬಿಜೆಪಿಯಿಂದ ಅಲ್ಲ. ಶ್ರೇಷ್ಠ ಸಂವಿಧಾನವನ್ನು ದೇಶಕ್ಕೆ ಕೊಡುಗೆಯಾಗಿ ನೀಡಿದ ಡಾ.ಬಿ.ಆರ್. ಅಂಬೇಡ್ಕರ್ ಅವರ ಸೋಲಿಗೆ ಕಾಂಗ್ರೆಸ್ ಕಾರಣ. ಆ ಪಕ್ಷದ ಮುಖಂಡರ ನಾಟಕೀಯ ಮಾತುಗಳು ಜನರಿಗೆ ಈಗಾಗಲೇ ಅರ್ಥವಾಗಿದೆ’ ಎಂದರು.</p>.<p>‘ಈ ಸಮುದಾಯದಿಂದ ಸ್ಪರ್ಧಿಸಿ ಗೆದ್ದ ಶಾಸಕರ, ಸಂಸದರ ಸಂಖ್ಯೆ ಹೆಚ್ಚಿರುವುದು ಬಿಜೆಪಿಯಲ್ಲಿ ಮಾತ್ರ. ಬೇರೆ ಯಾವ ಪಕ್ಷದಲ್ಲಿಯೂ ಇಲ್ಲ. ಇನ್ನಾದರೂ ಸಿದ್ದರಾಮಯ್ಯ ಅವರು ಹಗುರವಾಗಿ ಮಾತನಾಡುವುದನ್ನು ಬಿಟ್ಟು, ಬಹಿರಂಗವಾಗಿ ದಲಿತ ಸಮುದಾಯದವರಲ್ಲಿ ಕ್ಷಮೆ ಕೇಳಬೇಕು’ ಎಂದು ಒತ್ತಾಯಿಸಿದರು.</p>.<p>ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಭಾರ್ಗವಿ ದ್ರಾವಿಡ್, ‘ದಲಿತರ ಬಗ್ಗೆ ಸಿದ್ದರಾಮಯ್ಯ ಅವರು ಕೀಳಾಗಿ ಮಾತನಾಡಿದ್ದಾರೆ. ದಲಿತ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ತಪ್ಪಿಸಿದ್ದು ಇವರೇ. ಕಾಂಗ್ರೆಸ್ ಈ ಸಮುದಾಯಕ್ಕೆ ನೀಡಿರುವ ಕೊಡುಗೆ ಏನು’ ಎಂದು ಪ್ರಶ್ನಿಸಿದರು.</p>.<p>ಮುಖಂಡರಾದ ಪರಶುರಾಂ, ತಿಮ್ಮಣ್ಣ, ನಾಗರಾಜ್, ಸಿದ್ಧಾರ್ಥ, ಶಿವದತ್, ಜೈಪಾಲಯ್ಯ, ಎಚ್.ಬಿ. ನರೇಂದ್ರ, ವೆಂಕಟೇಶ್ ಯಾದವ್, ಸಂಪತ್, ಶೈಲಜಾ ರೆಡ್ಡಿ, ರೇಖಾ, ನಂದಿ ನಾಗರಾಜ್, ನಾಗರಾಜ್ ಬೇದ್ರೆ, ದಗ್ಗೆ ಶಿವಪ್ರಕಾಶ್, ಶಂಭು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>