<p><strong>ಮೊಳಕಾಲ್ಮುರು</strong>: ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿರುವ ದ್ವೇಷ ಭಾಷಣ ಪ್ರತಿಬಂಧಕ ಕಾಯ್ದೆಗೆ ಅವಕಾಶ ನೀಡಬಾರದು ಎಂದು ಆಗ್ರಹಿಸಿ ಮಂಡಲ ಬಿಜೆಪಿ ನೇತೃತ್ವಲ್ಲಿ ಶುಕ್ರವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.</p>.<p>‘ಡಾ. ಬಿ.ಆರ್. ಅಂಬೇಡ್ಕರ್ ರಚಿತ ಸಂವಿಧಾನದಲ್ಲಿ ನೀಡಿರುವ ವಾಕ್ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುವ ಕೆಲಸಕ್ಕೆ ಕಾಂಗ್ರೆಸ್ ಮುಂದಾಗಿದೆ. ಸಮಾಜದಲ್ಲಿ ಆಗುವ ಅನಾಹುತಗಳ ಬಗ್ಗೆ ಮಾತನಾಡುವ ಹಕ್ಕನ್ನು ಕಿತ್ತುಕೊಳ್ಳುವ ಹುನ್ನಾರವೂ ಇದರಲ್ಲಿ ಅಡಗಿದೆ’ ಎಂದು ಮಂಡಲಾಧ್ಯಕ್ಷ ಕೆ.ಟಿ. ಶ್ರೀರಾಮರೆಡ್ಡಿ ದೂರಿದರು.</p>.<p>‘ಪೊಲೀಸರು ಮತ್ತು ಅಧಿಕಾರಿಗಳು ಅನುಮಾನಾಸ್ಪದ ವ್ಯಕ್ತಿ ಎಂದು ಮುಂಚಿತವಾಗಿ ಬಂಧಿಸುವ ಸಾಧ್ಯತೆ ಬಗ್ಗೆ ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ. ಈ ಅಂಶವು ಪ್ರತಿಭಟನೆ, ಸಮಾರಂಭ, ಸಮಾವೇಶಗಳನ್ನು ಹತ್ತಿಕ್ಕಲು ಒತ್ತು ನೀಡಿದೆ. ಅನ್ಯಾಯವಾದಾಗ ಹಾಗೂ ಸರ್ಕಾರದ ತಪ್ಪು ನಿರ್ಧಾರಗಳ ವಿರುದ್ಧ ಪ್ರತಿಭಟಿಸಲು ಹೋದಾಗ ಭಾವನಾತ್ಮಕ ಹಾನಿ ಎಂದು ಪ್ರಕರಣ ದಾಖಲಿಸಲು ಸಾಧ್ಯವಿದೆ. ಮಾಧ್ಯಮಗಳ ಸ್ವಾತಂತ್ರ್ಯವನ್ನೂ ಸಹ ಇದರಲ್ಲಿ ಕಡಿತ ಮಾಡಲಾಗಿದೆ’ ಎಂದು ದೂರಿದರು.</p>.<p>ಬೆಳಗಾವಿ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಿ ರಾಜ್ಯಪಾಲರಿಗೆ ಕಳಿಸಲಾಗಿದೆ. ರಾಜ್ಯಪಾಲರು ಯಾವ ಕಾರಣಕ್ಕೂ ಅಂಗೀಕಾರ ನೀಡಬಾರದು ಎಂದು ಆಗ್ರಹಿಸಿ ತಹಶೀಲ್ದಾರ್ ಟಿ. ಜಗದೀಶ್ ಅವರಿಗೆ ಮನವಿ ಸಲ್ಲಿಸಲಾಯಿತು.</p>.<p>ಪಕ್ಷದ ಮುಖಂಡರಾದ ಟಿ.ಟಿ. ರವಿಕುಮಾರ್, ಕೆ. ತಿಪ್ಪೇಸ್ವಾಮಿ, ನೇರ್ಲಹಳ್ಳಿ ಪ್ರಭಾಕರ್, ಸಂಜೀವಪ್ಪ, ಸಿದ್ದಣ್ಣ, ಮಂಜಣ್ಣ, ಲೋಕೇಶ್ ರೆಡ್ಡಿ, ಶಿವಣ್ಣ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು</strong>: ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿರುವ ದ್ವೇಷ ಭಾಷಣ ಪ್ರತಿಬಂಧಕ ಕಾಯ್ದೆಗೆ ಅವಕಾಶ ನೀಡಬಾರದು ಎಂದು ಆಗ್ರಹಿಸಿ ಮಂಡಲ ಬಿಜೆಪಿ ನೇತೃತ್ವಲ್ಲಿ ಶುಕ್ರವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.</p>.<p>‘ಡಾ. ಬಿ.ಆರ್. ಅಂಬೇಡ್ಕರ್ ರಚಿತ ಸಂವಿಧಾನದಲ್ಲಿ ನೀಡಿರುವ ವಾಕ್ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುವ ಕೆಲಸಕ್ಕೆ ಕಾಂಗ್ರೆಸ್ ಮುಂದಾಗಿದೆ. ಸಮಾಜದಲ್ಲಿ ಆಗುವ ಅನಾಹುತಗಳ ಬಗ್ಗೆ ಮಾತನಾಡುವ ಹಕ್ಕನ್ನು ಕಿತ್ತುಕೊಳ್ಳುವ ಹುನ್ನಾರವೂ ಇದರಲ್ಲಿ ಅಡಗಿದೆ’ ಎಂದು ಮಂಡಲಾಧ್ಯಕ್ಷ ಕೆ.ಟಿ. ಶ್ರೀರಾಮರೆಡ್ಡಿ ದೂರಿದರು.</p>.<p>‘ಪೊಲೀಸರು ಮತ್ತು ಅಧಿಕಾರಿಗಳು ಅನುಮಾನಾಸ್ಪದ ವ್ಯಕ್ತಿ ಎಂದು ಮುಂಚಿತವಾಗಿ ಬಂಧಿಸುವ ಸಾಧ್ಯತೆ ಬಗ್ಗೆ ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ. ಈ ಅಂಶವು ಪ್ರತಿಭಟನೆ, ಸಮಾರಂಭ, ಸಮಾವೇಶಗಳನ್ನು ಹತ್ತಿಕ್ಕಲು ಒತ್ತು ನೀಡಿದೆ. ಅನ್ಯಾಯವಾದಾಗ ಹಾಗೂ ಸರ್ಕಾರದ ತಪ್ಪು ನಿರ್ಧಾರಗಳ ವಿರುದ್ಧ ಪ್ರತಿಭಟಿಸಲು ಹೋದಾಗ ಭಾವನಾತ್ಮಕ ಹಾನಿ ಎಂದು ಪ್ರಕರಣ ದಾಖಲಿಸಲು ಸಾಧ್ಯವಿದೆ. ಮಾಧ್ಯಮಗಳ ಸ್ವಾತಂತ್ರ್ಯವನ್ನೂ ಸಹ ಇದರಲ್ಲಿ ಕಡಿತ ಮಾಡಲಾಗಿದೆ’ ಎಂದು ದೂರಿದರು.</p>.<p>ಬೆಳಗಾವಿ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಿ ರಾಜ್ಯಪಾಲರಿಗೆ ಕಳಿಸಲಾಗಿದೆ. ರಾಜ್ಯಪಾಲರು ಯಾವ ಕಾರಣಕ್ಕೂ ಅಂಗೀಕಾರ ನೀಡಬಾರದು ಎಂದು ಆಗ್ರಹಿಸಿ ತಹಶೀಲ್ದಾರ್ ಟಿ. ಜಗದೀಶ್ ಅವರಿಗೆ ಮನವಿ ಸಲ್ಲಿಸಲಾಯಿತು.</p>.<p>ಪಕ್ಷದ ಮುಖಂಡರಾದ ಟಿ.ಟಿ. ರವಿಕುಮಾರ್, ಕೆ. ತಿಪ್ಪೇಸ್ವಾಮಿ, ನೇರ್ಲಹಳ್ಳಿ ಪ್ರಭಾಕರ್, ಸಂಜೀವಪ್ಪ, ಸಿದ್ದಣ್ಣ, ಮಂಜಣ್ಣ, ಲೋಕೇಶ್ ರೆಡ್ಡಿ, ಶಿವಣ್ಣ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>