ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಧಾನಿ ಅವರ 71ನೇ ಜನ್ಮದಿನವನ್ನು ಸ್ಮರಣೀಯಗೊಳಿಸಲು ಜಿಲ್ಲೆಯ 71 ಸ್ಥಳಗಳಲ್ಲಿ ಸ್ವಚ್ಛತೆ ನಡೆಸಲಾಗುತ್ತಿದೆ. ಆಸ್ಪತ್ರೆ, ಉದ್ಯಾನ, ಶಾಲೆ, ಅಂಗನವಾಡಿ ಕೇಂದ್ರ ಹೀಗೆ ಹಲವು ಸ್ಥಳಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಬೂತ್, ಮಂಡಲ ಮತ್ತು ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮಗಳು ಜರುಗಲಿವೆ’ ಎಂದು ಮಾಹಿತಿ ನೀಡಿದರು.