<p><strong>ಚಿತ್ರದುರ್ಗ: </strong>‘ದೇಶದೊಳಗೆ ಬಿಜೆಪಿ ಹೆಮ್ಮರವಾಗಿ ಬೆಳೆದಿದೆ. ಆದರೂ ಮತ್ತಷ್ಟು ಬಲಪಡಿಸಬೇಕಾದ ಜವಾಬ್ದಾರಿ ಪಕ್ಷದಲ್ಲಿರುವ ಪ್ರತಿಯೊಬ್ಬರ ಕರ್ತವ್ಯವಾಗಿದೆ’ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಸಲಹೆ ನೀಡಿದರು.</p>.<p>ಬಿಜೆಪಿ ಗ್ರಾಮಾಂತರ ಮಂಡಲದಿಂದ ಹೊರವಲಯದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಮಂಡಲ ಪ್ರಶಿಕ್ಷಣ ವರ್ಗ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.</p>.<p>‘ಬಿಜೆಪಿಗೆ ದೇಶ ಮುಖ್ಯವೇ ಹೊರತು ಅಧಿಕಾರವಲ್ಲ. ಆದರೆ, ಸ್ವಾತಂತ್ರ್ಯಾ ನಂತರ ಒಂದು ಮನೆತನಕ್ಕೆ ಸೀಮಿತವಾಗಿರುವ ಕಾಂಗ್ರೆಸ್ಗೆ ಅಧಿಕಾರ ಇಲ್ಲದಿರುವುದೇ ದೊಡ್ಡ ಚಿಂತೆಯಾಗಿದೆ. ಹೀಗಾಗಿ, ಬಿಜೆಪಿ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿ ಕಾಲ ಕಳೆಯುತ್ತಿದ್ದಾರೆ. ನಮಗೂ ಅವರಿಗೂ ಇರುವಂತಹ ಅಜಗಜಾಂತರ ವ್ಯತ್ಯಾಸವಿದು’ ಎಂದರು.</p>.<p>‘ಸ್ವಾತಂತ್ರ ಪಡೆಯಲು ಸ್ಥಾಪನೆಗೊಂಡ ಕಾಂಗ್ರೆಸ್ ರಾಜಕೀಯ ಲಾಭ ಪಡೆಯಲು ಪಕ್ಷವಾಗಿ ಪರಿವರ್ತನೆಯಾಯಿತು. ಆದರೆ, ಆ ಪಕ್ಷಕ್ಕೀಗ ದೇಶದ ಜನರು ಮನ್ನಣೆ ನೀಡುತ್ತಿಲ್ಲ. ಪ್ರಸ್ತುತ ಬಿಜೆಪಿಯತ್ತ ಜನರ ಒಲವು ಹೆಚ್ಚುತ್ತಿದೆ. ಇಂತಹ ಉತ್ತಮ ಸಂದರ್ಭದಲ್ಲಿ ಬಿಜೆಪಿಯ ಜನಪರ ಕಾರ್ಯಕ್ರಮಗಳನ್ನು ಸಾರ್ವಜನಿಕರಿಗೆ ತಿಳಿಸುವ ಕೆಲಸ ಮಾಡಬೇಕಿದೆ’ ಎಂದು ಸಲಹೆ ನೀಡಿದರು.</p>.<p>‘ಶ್ಯಾಂಪ್ರಸಾದ್ ಮುಖರ್ಜಿ, ದೀನ್ ದಯಾಳ್ ಉಪಾಧ್ಯಾಯ ಪಕ್ಷ ಕಟ್ಟಿ ಬೆಳೆಸಿದ್ದಾರೆ. ಮಾಜಿ ಪ್ರಧಾನಿ ವಾಜಪೇಯಿ, ಮಾಜಿ ಉಪಪ್ರಧಾನಿ ಆಡ್ವಾಣಿ ಅವರು ಸಾವಿರಾರು ಕಿ.ಮೀ. ನಡೆದಾಡಿ ಸಂಘಟಿಸಿದ್ದಾರೆ. ಅನೇಕ ಹಿರಿಯರ ತ್ಯಾಗ, ಬಲಿದಾನ, ತತ್ವ-ಸಿದ್ಧಾಂತಗಳ ಮೇಲೆ ಪಕ್ಷ ನಿಂತಿದೆ. ಪ್ರಧಾನಿ ಮೋದಿ ಅವರು ಆಕ್ರಮಿತ ಕಾಶ್ಮೀರ ಪ್ರದೇಶವನ್ನು ವಶಕ್ಕೆ ಪಡೆಯಲು ತೀರ್ಮಾನಿಸಿದ್ದಾರೆ. ಇಂತಹ ಪಕ್ಷದಲ್ಲಿರುವುದೇ ಹೆಮ್ಮೆಯ ಸಂಗತಿ ಅಂದುಕೊಂಡು ಪಕ್ಷಕ್ಕಾಗಿ ದುಡಿಯೋಣ’ ಎಂದರು.</p>.<p>ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸುರೇಶ್ ಸಿದ್ದಾಪುರ, ‘ಪಕ್ಷದ ನಾಯಕರು ತಿಳಿಸುವ ವಿಚಾರಗಳನ್ನು ಬೂತ್ಮಟ್ಟಕ್ಕೆ ತಲುಪಿಸುವುದೇ ಪ್ರಶಿಕ್ಷಣ ವರ್ಗದ ಉದ್ದೇಶ. ಈ ಪ್ರಕ್ರಿಯೆ ಬೇರೆ ಪಕ್ಷಗಳಲ್ಲಿ ನಡೆಯುವುದಿಲ್ಲ. ಪಕ್ಷ ಸಂಘಟನೆಗಾಗಿ ಕಾರ್ಯಕರ್ತರು ಸಮಯ ಮೀಸಲಿಡಬೇಕು’ ಎಂದರು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎ.ಮುರಳಿ, ಮುಖಂಡರಾದ ಜಿ.ಎಂ.ಸುರೇಶ್, ನಂದಿ ನಾಗರಾಜ್, ಸಿದ್ದೇಶ್ ಯಾದವ್, ಕಲ್ಲಂ ಸೀತಾರಾಮರೆಡ್ಡಿ, ಭೀಮಸಮುದ್ರದ ಅನಿತ್, ವೀರೇಶ್, ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಟಿ.ಗುರುಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>‘ದೇಶದೊಳಗೆ ಬಿಜೆಪಿ ಹೆಮ್ಮರವಾಗಿ ಬೆಳೆದಿದೆ. ಆದರೂ ಮತ್ತಷ್ಟು ಬಲಪಡಿಸಬೇಕಾದ ಜವಾಬ್ದಾರಿ ಪಕ್ಷದಲ್ಲಿರುವ ಪ್ರತಿಯೊಬ್ಬರ ಕರ್ತವ್ಯವಾಗಿದೆ’ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಸಲಹೆ ನೀಡಿದರು.</p>.<p>ಬಿಜೆಪಿ ಗ್ರಾಮಾಂತರ ಮಂಡಲದಿಂದ ಹೊರವಲಯದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಮಂಡಲ ಪ್ರಶಿಕ್ಷಣ ವರ್ಗ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.</p>.<p>‘ಬಿಜೆಪಿಗೆ ದೇಶ ಮುಖ್ಯವೇ ಹೊರತು ಅಧಿಕಾರವಲ್ಲ. ಆದರೆ, ಸ್ವಾತಂತ್ರ್ಯಾ ನಂತರ ಒಂದು ಮನೆತನಕ್ಕೆ ಸೀಮಿತವಾಗಿರುವ ಕಾಂಗ್ರೆಸ್ಗೆ ಅಧಿಕಾರ ಇಲ್ಲದಿರುವುದೇ ದೊಡ್ಡ ಚಿಂತೆಯಾಗಿದೆ. ಹೀಗಾಗಿ, ಬಿಜೆಪಿ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿ ಕಾಲ ಕಳೆಯುತ್ತಿದ್ದಾರೆ. ನಮಗೂ ಅವರಿಗೂ ಇರುವಂತಹ ಅಜಗಜಾಂತರ ವ್ಯತ್ಯಾಸವಿದು’ ಎಂದರು.</p>.<p>‘ಸ್ವಾತಂತ್ರ ಪಡೆಯಲು ಸ್ಥಾಪನೆಗೊಂಡ ಕಾಂಗ್ರೆಸ್ ರಾಜಕೀಯ ಲಾಭ ಪಡೆಯಲು ಪಕ್ಷವಾಗಿ ಪರಿವರ್ತನೆಯಾಯಿತು. ಆದರೆ, ಆ ಪಕ್ಷಕ್ಕೀಗ ದೇಶದ ಜನರು ಮನ್ನಣೆ ನೀಡುತ್ತಿಲ್ಲ. ಪ್ರಸ್ತುತ ಬಿಜೆಪಿಯತ್ತ ಜನರ ಒಲವು ಹೆಚ್ಚುತ್ತಿದೆ. ಇಂತಹ ಉತ್ತಮ ಸಂದರ್ಭದಲ್ಲಿ ಬಿಜೆಪಿಯ ಜನಪರ ಕಾರ್ಯಕ್ರಮಗಳನ್ನು ಸಾರ್ವಜನಿಕರಿಗೆ ತಿಳಿಸುವ ಕೆಲಸ ಮಾಡಬೇಕಿದೆ’ ಎಂದು ಸಲಹೆ ನೀಡಿದರು.</p>.<p>‘ಶ್ಯಾಂಪ್ರಸಾದ್ ಮುಖರ್ಜಿ, ದೀನ್ ದಯಾಳ್ ಉಪಾಧ್ಯಾಯ ಪಕ್ಷ ಕಟ್ಟಿ ಬೆಳೆಸಿದ್ದಾರೆ. ಮಾಜಿ ಪ್ರಧಾನಿ ವಾಜಪೇಯಿ, ಮಾಜಿ ಉಪಪ್ರಧಾನಿ ಆಡ್ವಾಣಿ ಅವರು ಸಾವಿರಾರು ಕಿ.ಮೀ. ನಡೆದಾಡಿ ಸಂಘಟಿಸಿದ್ದಾರೆ. ಅನೇಕ ಹಿರಿಯರ ತ್ಯಾಗ, ಬಲಿದಾನ, ತತ್ವ-ಸಿದ್ಧಾಂತಗಳ ಮೇಲೆ ಪಕ್ಷ ನಿಂತಿದೆ. ಪ್ರಧಾನಿ ಮೋದಿ ಅವರು ಆಕ್ರಮಿತ ಕಾಶ್ಮೀರ ಪ್ರದೇಶವನ್ನು ವಶಕ್ಕೆ ಪಡೆಯಲು ತೀರ್ಮಾನಿಸಿದ್ದಾರೆ. ಇಂತಹ ಪಕ್ಷದಲ್ಲಿರುವುದೇ ಹೆಮ್ಮೆಯ ಸಂಗತಿ ಅಂದುಕೊಂಡು ಪಕ್ಷಕ್ಕಾಗಿ ದುಡಿಯೋಣ’ ಎಂದರು.</p>.<p>ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸುರೇಶ್ ಸಿದ್ದಾಪುರ, ‘ಪಕ್ಷದ ನಾಯಕರು ತಿಳಿಸುವ ವಿಚಾರಗಳನ್ನು ಬೂತ್ಮಟ್ಟಕ್ಕೆ ತಲುಪಿಸುವುದೇ ಪ್ರಶಿಕ್ಷಣ ವರ್ಗದ ಉದ್ದೇಶ. ಈ ಪ್ರಕ್ರಿಯೆ ಬೇರೆ ಪಕ್ಷಗಳಲ್ಲಿ ನಡೆಯುವುದಿಲ್ಲ. ಪಕ್ಷ ಸಂಘಟನೆಗಾಗಿ ಕಾರ್ಯಕರ್ತರು ಸಮಯ ಮೀಸಲಿಡಬೇಕು’ ಎಂದರು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎ.ಮುರಳಿ, ಮುಖಂಡರಾದ ಜಿ.ಎಂ.ಸುರೇಶ್, ನಂದಿ ನಾಗರಾಜ್, ಸಿದ್ದೇಶ್ ಯಾದವ್, ಕಲ್ಲಂ ಸೀತಾರಾಮರೆಡ್ಡಿ, ಭೀಮಸಮುದ್ರದ ಅನಿತ್, ವೀರೇಶ್, ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಟಿ.ಗುರುಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>