<p><strong>ಮೊಳಕಾಲ್ಮುರು: </strong>ಕೇಂದ್ರದ ಬಿಜೆಪಿ ಸರ್ಕಾರ ಹೆಚ್ಚು, ಹೆಚ್ಚು ಜನಪರ ಕಾರ್ಯಗಳನ್ನು ರೂಪಿಸುತ್ತಿರುವ ಕಾರಣ ದೇಶದಲ್ಲಿ ನರೇಂದ್ರಮೋದಿ ಹಾಗೂ ಬಿಜೆಪಿ ಅಲೆ ಇನ್ನಷ್ಟು ಹೆಚ್ಚಾಗುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಹೇಳಿದರು.</p>.<p>ತಾಲ್ಲೂಕಿನ ಬಿ.ಜಿ. ಕೆರೆಯಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಬಿಜೆಪಿ ಕಾರ್ಯಕಾರಿಣಿಯಲ್ಲಿ ಮಾತನಾಡಿದರು.</p>.<p>ಬಿಜೆಪಿ ಸರ್ಕಾರ ರಸ್ತೆ ನಿರ್ಮಾಣ, ಶುದ್ಧ ಕುಡಿಯುವ ನೀರು, ನಗರಗಳ ಅಭಿವೃದ್ಧಿಗಾಗಿ ಹೆಚ್ಚು ಒತ್ತು ನೀಡಿದೆ. ಗ್ರಾಮೀಣ ಮಟ್ಟಕ್ಕೆ ಪಕ್ಷದ ಸಾಧನೆತೆಗೆದುಕೊಂಡು ಹೋಗಲು<br />ಕಾರ್ಯಕರ್ತರು ಶ್ರಮಿಸಬೇಕು. ಯುವ<br />ಸಮೂಹ ಪಕ್ಷದ ಕಾರ್ಯಕ್ರಮಗಳನ್ನು ಒಪ್ಪಿ ಪಕ್ಷದ ಸಿದ್ಧಾಂತಗಳನ್ನು ಪಾಲಿಸುತ್ತಿದ್ದಾರೆಎಂದು ಹೇಳಿದರು.</p>.<p>ಶಾಸಕ ಚಂದ್ರಪ್ಪ, ‘ವಿಶ್ವದಲ್ಲಿ ಹೆಚ್ಚು ಕಾರ್ಯಕರ್ತರನ್ನು ಹೊಂದಿರುವ ಪಕ್ಷ ಬಿಜೆಪಿ. ಮುಖಂಡರು, ಕಾರ್ಯಕರ್ತರು ಜನರ ಸೇವಕರಾಗಿ ಕೆಲಸ ಮಾಡುತ್ತಿರುವುದು ಮುಖ್ಯ ಅಂಶ. ಮುಂಬರುವ ಗ್ರಾಮ ಪಂಚಾಯಿತಿ, ತಾಲ್ಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆತರಲು ಎಲ್ಲರೂ ಕೈಜೋಡಿಸಬೇಕು’ ಎಂದು ಹೇಳಿದರು.</p>.<p>ಶಾಸಕಿ ಪೂರ್ಣಿಮಾ ಶ್ರೀನಿವಾಸ್, ‘ಭದ್ರಾ ಮೇಲ್ದಂಡೆ ಯೋಜನೆ ಚುರುಕುಗೊಂಡಿದ್ದು ಬಿಜೆಪಿ ಅಧಿಕಾರ ಅವಧಿಯಲ್ಲಿ. ಕೆರೆಗಳಿಗೆ ನೀರು ತುಂಬಿದಲ್ಲಿ ಕೃಷಿ ಕಾರ್ಯಗಳು ಹೆಚ್ಚಿ ಜನರು ಸಮೃದ್ಧಿ ಜೀವನ ನಡೆಸುತ್ತಾರೆ. ವಾಣಿವಿಲಾಸ ಜಲಾಶಯಕ್ಕೂ ಈ ವರ್ಷ ಹೆಚ್ಚು ನೀರು ಬಂದಿದೆ’ ಎಂದರು.</p>.<p>ಶಾಸಕರಾದ ಜಿ.ಎಚ್. ತಿಪ್ಪಾರೆಡ್ಡಿ, ಗೂಳಿಹಟ್ಟಿ ಶೇಖರ್ ಮಾತನಾಡಿದರು.</p>.<p>ಜಿಲ್ಲಾಧ್ಯಕ್ಷ ಮುರಳಿ ಯಾದವ್, ಪ್ರಧಾನ ಕಾರ್ಯದರ್ಶಿ ಜಯಪಾಲಯ್ಯ, ಮಂಡಲಾಧ್ಯಕ್ಷರಾದ ಡಾ.ಪಿ.ಎಂ. ಮಂಜುನಾಥ್, ರಾಮರೆಡ್ಡಿ ಹಾಗೂ ವಿವಿಧಮೋರ್ಚಾಗಳ ಪದಾಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು: </strong>ಕೇಂದ್ರದ ಬಿಜೆಪಿ ಸರ್ಕಾರ ಹೆಚ್ಚು, ಹೆಚ್ಚು ಜನಪರ ಕಾರ್ಯಗಳನ್ನು ರೂಪಿಸುತ್ತಿರುವ ಕಾರಣ ದೇಶದಲ್ಲಿ ನರೇಂದ್ರಮೋದಿ ಹಾಗೂ ಬಿಜೆಪಿ ಅಲೆ ಇನ್ನಷ್ಟು ಹೆಚ್ಚಾಗುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಹೇಳಿದರು.</p>.<p>ತಾಲ್ಲೂಕಿನ ಬಿ.ಜಿ. ಕೆರೆಯಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಬಿಜೆಪಿ ಕಾರ್ಯಕಾರಿಣಿಯಲ್ಲಿ ಮಾತನಾಡಿದರು.</p>.<p>ಬಿಜೆಪಿ ಸರ್ಕಾರ ರಸ್ತೆ ನಿರ್ಮಾಣ, ಶುದ್ಧ ಕುಡಿಯುವ ನೀರು, ನಗರಗಳ ಅಭಿವೃದ್ಧಿಗಾಗಿ ಹೆಚ್ಚು ಒತ್ತು ನೀಡಿದೆ. ಗ್ರಾಮೀಣ ಮಟ್ಟಕ್ಕೆ ಪಕ್ಷದ ಸಾಧನೆತೆಗೆದುಕೊಂಡು ಹೋಗಲು<br />ಕಾರ್ಯಕರ್ತರು ಶ್ರಮಿಸಬೇಕು. ಯುವ<br />ಸಮೂಹ ಪಕ್ಷದ ಕಾರ್ಯಕ್ರಮಗಳನ್ನು ಒಪ್ಪಿ ಪಕ್ಷದ ಸಿದ್ಧಾಂತಗಳನ್ನು ಪಾಲಿಸುತ್ತಿದ್ದಾರೆಎಂದು ಹೇಳಿದರು.</p>.<p>ಶಾಸಕ ಚಂದ್ರಪ್ಪ, ‘ವಿಶ್ವದಲ್ಲಿ ಹೆಚ್ಚು ಕಾರ್ಯಕರ್ತರನ್ನು ಹೊಂದಿರುವ ಪಕ್ಷ ಬಿಜೆಪಿ. ಮುಖಂಡರು, ಕಾರ್ಯಕರ್ತರು ಜನರ ಸೇವಕರಾಗಿ ಕೆಲಸ ಮಾಡುತ್ತಿರುವುದು ಮುಖ್ಯ ಅಂಶ. ಮುಂಬರುವ ಗ್ರಾಮ ಪಂಚಾಯಿತಿ, ತಾಲ್ಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆತರಲು ಎಲ್ಲರೂ ಕೈಜೋಡಿಸಬೇಕು’ ಎಂದು ಹೇಳಿದರು.</p>.<p>ಶಾಸಕಿ ಪೂರ್ಣಿಮಾ ಶ್ರೀನಿವಾಸ್, ‘ಭದ್ರಾ ಮೇಲ್ದಂಡೆ ಯೋಜನೆ ಚುರುಕುಗೊಂಡಿದ್ದು ಬಿಜೆಪಿ ಅಧಿಕಾರ ಅವಧಿಯಲ್ಲಿ. ಕೆರೆಗಳಿಗೆ ನೀರು ತುಂಬಿದಲ್ಲಿ ಕೃಷಿ ಕಾರ್ಯಗಳು ಹೆಚ್ಚಿ ಜನರು ಸಮೃದ್ಧಿ ಜೀವನ ನಡೆಸುತ್ತಾರೆ. ವಾಣಿವಿಲಾಸ ಜಲಾಶಯಕ್ಕೂ ಈ ವರ್ಷ ಹೆಚ್ಚು ನೀರು ಬಂದಿದೆ’ ಎಂದರು.</p>.<p>ಶಾಸಕರಾದ ಜಿ.ಎಚ್. ತಿಪ್ಪಾರೆಡ್ಡಿ, ಗೂಳಿಹಟ್ಟಿ ಶೇಖರ್ ಮಾತನಾಡಿದರು.</p>.<p>ಜಿಲ್ಲಾಧ್ಯಕ್ಷ ಮುರಳಿ ಯಾದವ್, ಪ್ರಧಾನ ಕಾರ್ಯದರ್ಶಿ ಜಯಪಾಲಯ್ಯ, ಮಂಡಲಾಧ್ಯಕ್ಷರಾದ ಡಾ.ಪಿ.ಎಂ. ಮಂಜುನಾಥ್, ರಾಮರೆಡ್ಡಿ ಹಾಗೂ ವಿವಿಧಮೋರ್ಚಾಗಳ ಪದಾಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>