ಚಿತ್ರದುರ್ಗ: ಬಿಜೆಪಿ ಯುವ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಜ. 27ರಂದು ಚಿತ್ರದುರ್ಗದಲ್ಲಿ ನಡೆಯಲಿದೆ. ಮುಂದಿನ ಮೂರು ವರ್ಷಗಳ ಕಾರ್ಯಸೂಚಿ ಕಾರ್ಯಕಾರಿಣಿಯಲ್ಲಿ ನಿರ್ಧಾರ ವಾಗಲಿದೆ.
‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ಹಾಗೂ ಯುವ ಮೋರ್ಚಾ ಅಧ್ಯಕ್ಷ ಡಾ.ಸಂದೀಪ್ ಕಾರ್ಯಕಾರಿಣಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎ.ಮುರುಳಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.