‘ಲೇಖಕರ ಈ ಪುಸ್ತಕ ಕೋವಿಡ್ ಸಂದಿಗ್ಧ ಪರಿಸ್ಥಿತಿಯಲ್ಲಿ ದೇಶದೊಳಗೆ ಉಂಟಾದ ತಲ್ಲಣ ಹಾಗೂ ಸರ್ಕಾರ ಕೈಗೊಂಡ ಕ್ರಮಗಳನ್ನು ವಿವರಿಸಿದೆ. ಆತ್ಮನಿರ್ಭರ ಭಾರತ ಅಭಿಯಾನದ ಬೇರುಗಳು ಹೇಗೆ ಗಾಂಧಿ, ಅಂಬೇಡ್ಕರ್ ಮತ್ತು ಜಾಗತಿಕ ಆರ್ಥಿಕ ತಜ್ಞರ ಜ್ಞಾನ ನೆಲೆಯಲ್ಲಿ ಹರಡಿಕೊಂಡಿದೆ ಎಂಬುದರ ಚಿತ್ರಣವೂ ಇದರಲ್ಲಿದೆ. ಹೀಗಾಗಿ, ವಿದ್ಯಾರ್ಥಿಗಳಿಗೆ ಆಕರ ಗ್ರಂಥವಾಗಿ, ಸ್ಪರ್ಧಾತ್ಮಕ ಪರೀಕ್ಷೆಗಳ ಅಭ್ಯರ್ಥಿಗಳಿಗೂ ಉಪಯುಕ್ತವಾಗಿದೆ’ ಎಂದು ಅಭಿಪ್ರಾಯಪಟ್ಟರು.