<p>ಸಾಗರ<strong>: ಇಲ್ಲಿನ ರೈಲ್ವೆ ನಿಲ್ದಾಣ ಸಮೀಪದ ಅಜಿತ ಸಭಾಭವನದಲ್ಲಿ ಏ.2ರಂದು ಸಂಜೆ 6ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ‘ಬ್ರಾಹ್ಮಣ್ಯ’ ಕೃತಿ ಬಿಡುಗಡೆಗೊಳ್ಳಲಿದೆ ಎಂದು ಕೃತಿಯ ಕರ್ತೃ ಎಚ್.ಪಿ.ಮಂಜಪ್ಪ ತಿಳಿಸಿದರು.</strong></p>.<p><strong>ಲೇಖಕ ಜಯಪ್ರಕಾಶ್ ಮಾವಿನಕುಳಿ, ಡಾ.ವಿಘ್ನೇಶ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದು ಬ್ರಾಹ್ಮಣ್ಯ ಎಂಬ ವಿಷಯದ ಕುರಿತು ಸಂವಾದ ನಡೆಯಲಿದೆ ಎಂದು ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</strong></p>.<p><strong>‘ಬ್ರಾಹ್ಮಣ್ಯ ಎಂಬುದು ಒಂದು ಜಾತಿಯಲ್ಲ. ಅದೊಂದು ನಾಗರಿಕತೆಯ ಪರಾಕಾಷ್ಠೆಯಾಗಿದೆ. ಜಾತಿ, ಮತ, ಪಂಥ ಮೀರಿದ ಚಿಂತನೆ, ಜ್ಞಾನವನ್ನು ಹೊಂದಿರುವ ಕುರಿತು ಗಂಭೀರ ಚರ್ಚೆ ಮತ್ತು ಚಿಂತನೆಯ ಅಗತ್ಯವಿದೆ. ಈ ನಿಟ್ಟಿನಲ್ಲಿ ವಿಶೇಷ ಸಂವಾದ ನಡೆಯಲಿದೆ’ ಎಂದು ಅವರು ತಿಳಿಸಿದರು.</strong></p>.<p><strong>ಬ್ರಾಹ್ಮಣ್ಯದ ಅರ್ಥವನ್ನು ಸೀಮಿತ ಚೌಕಟ್ಟಿನಲ್ಲಿ ನೋಡಲಾಗುತ್ತಿದೆ. ಇದರ ವಿಶಾಲವಾದ ಅರ್ಥವನ್ನು ಎಲ್ಲರಿಗೂ ಮನವರಿಕೆ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ಬ್ರಾಹ್ಮಣ್ಯದ ಪರ ಮತ್ತು ವಿರುದ್ಧ ಇರುವವರು ಸಹ ಸಂವಾದದಲ್ಲಿ ಪಾಲ್ಗೊಳ್ಳಬಹುದು ಎಂದರು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಾಗರ<strong>: ಇಲ್ಲಿನ ರೈಲ್ವೆ ನಿಲ್ದಾಣ ಸಮೀಪದ ಅಜಿತ ಸಭಾಭವನದಲ್ಲಿ ಏ.2ರಂದು ಸಂಜೆ 6ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ‘ಬ್ರಾಹ್ಮಣ್ಯ’ ಕೃತಿ ಬಿಡುಗಡೆಗೊಳ್ಳಲಿದೆ ಎಂದು ಕೃತಿಯ ಕರ್ತೃ ಎಚ್.ಪಿ.ಮಂಜಪ್ಪ ತಿಳಿಸಿದರು.</strong></p>.<p><strong>ಲೇಖಕ ಜಯಪ್ರಕಾಶ್ ಮಾವಿನಕುಳಿ, ಡಾ.ವಿಘ್ನೇಶ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದು ಬ್ರಾಹ್ಮಣ್ಯ ಎಂಬ ವಿಷಯದ ಕುರಿತು ಸಂವಾದ ನಡೆಯಲಿದೆ ಎಂದು ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</strong></p>.<p><strong>‘ಬ್ರಾಹ್ಮಣ್ಯ ಎಂಬುದು ಒಂದು ಜಾತಿಯಲ್ಲ. ಅದೊಂದು ನಾಗರಿಕತೆಯ ಪರಾಕಾಷ್ಠೆಯಾಗಿದೆ. ಜಾತಿ, ಮತ, ಪಂಥ ಮೀರಿದ ಚಿಂತನೆ, ಜ್ಞಾನವನ್ನು ಹೊಂದಿರುವ ಕುರಿತು ಗಂಭೀರ ಚರ್ಚೆ ಮತ್ತು ಚಿಂತನೆಯ ಅಗತ್ಯವಿದೆ. ಈ ನಿಟ್ಟಿನಲ್ಲಿ ವಿಶೇಷ ಸಂವಾದ ನಡೆಯಲಿದೆ’ ಎಂದು ಅವರು ತಿಳಿಸಿದರು.</strong></p>.<p><strong>ಬ್ರಾಹ್ಮಣ್ಯದ ಅರ್ಥವನ್ನು ಸೀಮಿತ ಚೌಕಟ್ಟಿನಲ್ಲಿ ನೋಡಲಾಗುತ್ತಿದೆ. ಇದರ ವಿಶಾಲವಾದ ಅರ್ಥವನ್ನು ಎಲ್ಲರಿಗೂ ಮನವರಿಕೆ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ಬ್ರಾಹ್ಮಣ್ಯದ ಪರ ಮತ್ತು ವಿರುದ್ಧ ಇರುವವರು ಸಹ ಸಂವಾದದಲ್ಲಿ ಪಾಲ್ಗೊಳ್ಳಬಹುದು ಎಂದರು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>