<p><strong>ನಾಯಕನಹಟ್ಟಿ: </strong>ಕುಡಿಯುವ ಹನಿ ನೀರಿಗೂ ಪರಾಡುವ ಸ್ಥಿತಿ ಇರುವ ನಾಯಕನಹಟ್ಟಿ ಪಟ್ಟಣದಲ್ಲಿ ಮೂರ್ನಾಲ್ಕು ದಿನಗಳಿಂದ ಮುಖ್ಯ ಪೈಪ್ಲೈನ್ ಒಡೆದು ಅಪಾರ ಪ್ರಮಾಣದ ನೀರು ಚರಂಡಿ ಪಾಲಾಗುತ್ತಿದ್ದರೂ ಕಂಡೂ ಕಾಣದಂತೆ ಸ್ಥಳೀಯ ಆಡಳಿತ ಕಣ್ಮುಚ್ಚಿ ಕುಳಿತಿದೆ.</p>.<p>ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 16 ವಾರ್ಡ್ಗಳಿದ್ದು, ಪ್ರತಿ ವಾರ್ಡ್ನಲ್ಲೂ ಕುಡಿಯುವ ನೀರಿಗೆ ಸಮಸ್ಯೆ ಇದೆ. ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬಹುತೇಕ ಕೊಳವೆಬಾವಿಗಳು ಪಟ್ಟಣಕ್ಕೆ ಹೊಂದಿಕೊಂಡಿರುವ ಚಿಕ್ಕಕೆರೆ ಮತ್ತು ಪಟ್ಟಣದಿಂದ 5 ಕಿ.ಮೀ ದೂರದಲ್ಲಿರುವ ದೊಡ್ಡಕೆರೆಯಲ್ಲಿವೆ.</p>.<p>5 ವರ್ಷಗಳಿಂದ ಸಕಾಲಕ್ಕೆ ಮಳೆ ಇಲ್ಲದೆ ಪಟ್ಟಣಕ್ಕೆ ಜೀವಜಲ ಪೂರೈಕೆಯ ಕೇಂದ್ರವಾದ ಚಿಕ್ಕಕೆರೆ ಮತ್ತು ದೊಡ್ಡಕೆರೆಗಳು ನೀರಿಲ್ಲದೆ ಬತ್ತಿ ಹೋಗಿದ್ದವು. ಆದರೆ, ಮೂರು ತಿಂಗಳಿಂದ ನಿರಂತರವಾಗಿ ಸುರಿದ ಮಳೆಯಿಂದ ಕೆರೆಗಳಲ್ಲಿ ನೀರು ಸಂಗ್ರಹವಾಗಿ ಅಂತರ್ಜಲ ಮಟ್ಟ ಹೆಚ್ಚಾಗಿದೆ. ಕೊಳವೆಬಾವಿಗಳಲ್ಲಿ ಜಲ ಮರುಪೂರಣವಾಗಿದೆ.</p>.<p>ಆದರೂ ಪಟ್ಟಣದ 6, 7, 8, 9 ಮತ್ತು 14ನೇ ವಾರ್ಡ್ಗಳಿಗೆ ನಾಲ್ಕು ದಿನಗಳಿಗೆ ಒಮ್ಮೆ ನೀರು ಪೂರೈಸಲಾಗುತ್ತಿದೆ. ಇದರಿಂದ ನಾಗರಿಕರು ಜೀವಜಲಕ್ಕಾಗಿ ಹಾತೊರೆಯುವಂತಾಗಿದೆ. ಇತ್ತೀಚಿನ ದಿನಗಳಲ್ಲಿ ಕೊಳವೆಬಾವಿಗಳಲ್ಲಿ ಸಾಕಷ್ಟು ನೀರಿದ್ದರೂ ಕ್ರಮಬದ್ಧವಾಗಿ ಮತ್ತು ನಿರಂತರವಾಗಿ ಎಲ್ಲ ವಾರ್ಡ್ಗಳಿಗೆ ನೀರು ಪೂರೈಸುವಲ್ಲಿ ಪಟ್ಟಣ ಪಂಚಾಯಿತಿ ವಿಫಲವಾಗಿದೆ.</p>.<p>ನೀರು ಪೂರೈಕೆ ವ್ಯವಸ್ಥೆಯಲ್ಲಿ ಹಲವು ಲೋಪದೋಷಗಳಿವೆ. ಕಳೆದ ಮೂರು ದಿನಗಳಿಂದ ಪಟ್ಟಣದ ಬೈಪಾಸ್ ರಸ್ತೆಯಲ್ಲಿ ಹಾದುಹೋಗಿರುವ 4 ಇಂಚಿನ ಮುಖ್ಯ ಪೈಪ್ಲೈನ್ ಒಡೆದು ಹೋಗಿದೆ. ಪರಿಣಾಮ ರಸ್ತೆಯ ಮೇಲೆ ಕುಡಿಯುವ ನೀರು ಹರಿದು ಚರಂಡಿ ಸೇರುತ್ತಿದೆ. ಜತೆಗೆ 7ನೇ ವಾರ್ಡ್ನಲ್ಲಿರುವ ಸೇತುವೆಯ ಕೆಳಗಡೆ ಇದೇ ಪೈಪ್ಲೈನ್ ಒಡೆದು ಅಪಾರ ಪ್ರಮಾಣದ ನೀರು ವ್ಯರ್ಥವಾಗಿ ಚರಂಡಿಗೆ ಹರಿಯುತ್ತಿದೆ.</p>.<p>‘ಇದರಿಂದ ಹಲವು ವಾರ್ಡ್ಗಳಿಗೆ ನಿಗದಿತ ಪ್ರಮಾಣದಲ್ಲಿ ನೀರು ತಲುಪುತ್ತಿಲ್ಲ. ಪಟ್ಟಣ ಪಂಚಾಯಿತಿಯು ಪೈಪ್ಲೈನ್ ದುರಸ್ತಿಗೆಂದು ವಾರ್ಷಿಕ ಬಜೆಟ್ನಲ್ಲಿ ಅನುದಾನ ಮೀಸಲಿಟ್ಟರೂ ಸಕಾಲಕ್ಕೆ ಪೈಪ್ಲೈನ್ ದುರಸ್ತಿಗೊಳಿಸುತ್ತಿಲ್ಲ. ಜತೆಗೆ ಕಳಪೆ ಗುಣಮಟ್ಟದ ಪೈಪ್ಗಳನ್ನು ಅಳವಡಿಸಿರುವುದರಿಂದ ಪದೇಪದೇ ಪೈಪ್ಲೈನ್ ಒಡೆದುಕೊಳ್ಳುತ್ತಿವೆ’ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>**</p>.<p>ಕಳಪೆ ಗುಣಮಟ್ಟದ ಪೈಪ್ಲೈನ್ ಅಳವಡಿಸಿರು ವುದರಿಂದ ಪದೇಪದೇ ಪೈಪ್ ಒಡೆದು ಹೋಗುತ್ತಿವೆ. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು</p>.<p>ಬೋರ್ವೆಲ್ ಮಂಜುನಾಥ, ಸ್ಥಳಿಯ ನಿವಾಸಿ</p>.<p>***</p>.<p>ಪ್ರಸ್ತುತ ನೀರು ಸರಬರಾಜು ನಿಲ್ಲಿಸಲಾಗಿದ್ದು, ತಕ್ಷಣವೇ ಪೈಪ್ಲೈನ್ ದುರಸ್ತಿಗೊಳಿಸಲು ಕ್ರಮಕೈಗೊಳ್ಳಲಾಗುವುದು</p>.<p>ಎಚ್.ಡಿ.ಲಿಂಗರಾಜು, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಯಕನಹಟ್ಟಿ: </strong>ಕುಡಿಯುವ ಹನಿ ನೀರಿಗೂ ಪರಾಡುವ ಸ್ಥಿತಿ ಇರುವ ನಾಯಕನಹಟ್ಟಿ ಪಟ್ಟಣದಲ್ಲಿ ಮೂರ್ನಾಲ್ಕು ದಿನಗಳಿಂದ ಮುಖ್ಯ ಪೈಪ್ಲೈನ್ ಒಡೆದು ಅಪಾರ ಪ್ರಮಾಣದ ನೀರು ಚರಂಡಿ ಪಾಲಾಗುತ್ತಿದ್ದರೂ ಕಂಡೂ ಕಾಣದಂತೆ ಸ್ಥಳೀಯ ಆಡಳಿತ ಕಣ್ಮುಚ್ಚಿ ಕುಳಿತಿದೆ.</p>.<p>ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 16 ವಾರ್ಡ್ಗಳಿದ್ದು, ಪ್ರತಿ ವಾರ್ಡ್ನಲ್ಲೂ ಕುಡಿಯುವ ನೀರಿಗೆ ಸಮಸ್ಯೆ ಇದೆ. ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬಹುತೇಕ ಕೊಳವೆಬಾವಿಗಳು ಪಟ್ಟಣಕ್ಕೆ ಹೊಂದಿಕೊಂಡಿರುವ ಚಿಕ್ಕಕೆರೆ ಮತ್ತು ಪಟ್ಟಣದಿಂದ 5 ಕಿ.ಮೀ ದೂರದಲ್ಲಿರುವ ದೊಡ್ಡಕೆರೆಯಲ್ಲಿವೆ.</p>.<p>5 ವರ್ಷಗಳಿಂದ ಸಕಾಲಕ್ಕೆ ಮಳೆ ಇಲ್ಲದೆ ಪಟ್ಟಣಕ್ಕೆ ಜೀವಜಲ ಪೂರೈಕೆಯ ಕೇಂದ್ರವಾದ ಚಿಕ್ಕಕೆರೆ ಮತ್ತು ದೊಡ್ಡಕೆರೆಗಳು ನೀರಿಲ್ಲದೆ ಬತ್ತಿ ಹೋಗಿದ್ದವು. ಆದರೆ, ಮೂರು ತಿಂಗಳಿಂದ ನಿರಂತರವಾಗಿ ಸುರಿದ ಮಳೆಯಿಂದ ಕೆರೆಗಳಲ್ಲಿ ನೀರು ಸಂಗ್ರಹವಾಗಿ ಅಂತರ್ಜಲ ಮಟ್ಟ ಹೆಚ್ಚಾಗಿದೆ. ಕೊಳವೆಬಾವಿಗಳಲ್ಲಿ ಜಲ ಮರುಪೂರಣವಾಗಿದೆ.</p>.<p>ಆದರೂ ಪಟ್ಟಣದ 6, 7, 8, 9 ಮತ್ತು 14ನೇ ವಾರ್ಡ್ಗಳಿಗೆ ನಾಲ್ಕು ದಿನಗಳಿಗೆ ಒಮ್ಮೆ ನೀರು ಪೂರೈಸಲಾಗುತ್ತಿದೆ. ಇದರಿಂದ ನಾಗರಿಕರು ಜೀವಜಲಕ್ಕಾಗಿ ಹಾತೊರೆಯುವಂತಾಗಿದೆ. ಇತ್ತೀಚಿನ ದಿನಗಳಲ್ಲಿ ಕೊಳವೆಬಾವಿಗಳಲ್ಲಿ ಸಾಕಷ್ಟು ನೀರಿದ್ದರೂ ಕ್ರಮಬದ್ಧವಾಗಿ ಮತ್ತು ನಿರಂತರವಾಗಿ ಎಲ್ಲ ವಾರ್ಡ್ಗಳಿಗೆ ನೀರು ಪೂರೈಸುವಲ್ಲಿ ಪಟ್ಟಣ ಪಂಚಾಯಿತಿ ವಿಫಲವಾಗಿದೆ.</p>.<p>ನೀರು ಪೂರೈಕೆ ವ್ಯವಸ್ಥೆಯಲ್ಲಿ ಹಲವು ಲೋಪದೋಷಗಳಿವೆ. ಕಳೆದ ಮೂರು ದಿನಗಳಿಂದ ಪಟ್ಟಣದ ಬೈಪಾಸ್ ರಸ್ತೆಯಲ್ಲಿ ಹಾದುಹೋಗಿರುವ 4 ಇಂಚಿನ ಮುಖ್ಯ ಪೈಪ್ಲೈನ್ ಒಡೆದು ಹೋಗಿದೆ. ಪರಿಣಾಮ ರಸ್ತೆಯ ಮೇಲೆ ಕುಡಿಯುವ ನೀರು ಹರಿದು ಚರಂಡಿ ಸೇರುತ್ತಿದೆ. ಜತೆಗೆ 7ನೇ ವಾರ್ಡ್ನಲ್ಲಿರುವ ಸೇತುವೆಯ ಕೆಳಗಡೆ ಇದೇ ಪೈಪ್ಲೈನ್ ಒಡೆದು ಅಪಾರ ಪ್ರಮಾಣದ ನೀರು ವ್ಯರ್ಥವಾಗಿ ಚರಂಡಿಗೆ ಹರಿಯುತ್ತಿದೆ.</p>.<p>‘ಇದರಿಂದ ಹಲವು ವಾರ್ಡ್ಗಳಿಗೆ ನಿಗದಿತ ಪ್ರಮಾಣದಲ್ಲಿ ನೀರು ತಲುಪುತ್ತಿಲ್ಲ. ಪಟ್ಟಣ ಪಂಚಾಯಿತಿಯು ಪೈಪ್ಲೈನ್ ದುರಸ್ತಿಗೆಂದು ವಾರ್ಷಿಕ ಬಜೆಟ್ನಲ್ಲಿ ಅನುದಾನ ಮೀಸಲಿಟ್ಟರೂ ಸಕಾಲಕ್ಕೆ ಪೈಪ್ಲೈನ್ ದುರಸ್ತಿಗೊಳಿಸುತ್ತಿಲ್ಲ. ಜತೆಗೆ ಕಳಪೆ ಗುಣಮಟ್ಟದ ಪೈಪ್ಗಳನ್ನು ಅಳವಡಿಸಿರುವುದರಿಂದ ಪದೇಪದೇ ಪೈಪ್ಲೈನ್ ಒಡೆದುಕೊಳ್ಳುತ್ತಿವೆ’ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>**</p>.<p>ಕಳಪೆ ಗುಣಮಟ್ಟದ ಪೈಪ್ಲೈನ್ ಅಳವಡಿಸಿರು ವುದರಿಂದ ಪದೇಪದೇ ಪೈಪ್ ಒಡೆದು ಹೋಗುತ್ತಿವೆ. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು</p>.<p>ಬೋರ್ವೆಲ್ ಮಂಜುನಾಥ, ಸ್ಥಳಿಯ ನಿವಾಸಿ</p>.<p>***</p>.<p>ಪ್ರಸ್ತುತ ನೀರು ಸರಬರಾಜು ನಿಲ್ಲಿಸಲಾಗಿದ್ದು, ತಕ್ಷಣವೇ ಪೈಪ್ಲೈನ್ ದುರಸ್ತಿಗೊಳಿಸಲು ಕ್ರಮಕೈಗೊಳ್ಳಲಾಗುವುದು</p>.<p>ಎಚ್.ಡಿ.ಲಿಂಗರಾಜು, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>