<p><strong>ಪರಶುರಾಂಪುರ (ಚಿತ್ರದುರ್ಗ)</strong>: ಸಮೀಪದ ನಾಗಗೊಂಡನಹಳ್ಳಿಯ ರೈತ ಸಹೋದರರಾದ ಜಿ.ಸಿ.ನಾಗರಾಜ ಮತ್ತು ಜಿ.ಸಿ ಬಸವರಾಜ್ ಅವರು ಹೀರೇಕಾಯಿ, ಬೆಂಡೆಕಾಯಿ, ಸೋರೆಕಾಯಿ, ಕುಂಬಳಕಾಯಿ, ದಂಟಿನಸೊಪ್ಪು ಸೇರಿದಂತೆ ವಿವಿಧ ತರಕಾರಿ ಬೆಳೆಗಳನ್ನು ಬೆಳೆದು ಅವುಗಳ ಬೀಜ ಮಾರಾಟದಿಂದ ಕೈ ತುಂಬಾ ಆದಾಯ ಪಡೆಯುತ್ತಿದ್ದಾರೆ. </p>.<p>ಕಳೆದ 4 ವರ್ಷಗಳಿಂದ ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಹಾರ್ಟಿಕಲ್ಚರ್ ರಿಸರ್ಚ್ (ಐ.ಐ.ಎಚ್.ಆರ್.) ಸಂಸ್ಥೆ ಜೊತೆಗೆ ಒಪ್ಪಂದ ಮಾಡಿಕೊಂಡು ವಿವಿಧ ತರಕಾರಿ ಬೆಳೆ ಬೆಳೆದು, ಅದರಿಂದ ಬೀಜ ತೆಗೆದು ಸಂಸ್ಥೆಗೆ ಮಾರಾಟ ಮಾಡುತ್ತಾ ಉತ್ತಮ ಆದಾಯ ಪಡೆಯುತ್ತಿದ್ದಾರೆ.</p>.<p>ಒಟ್ಟು 12 ಎಕರೆ ಜಮೀನಿನಲ್ಲಿ 6 ಎಕರೆಯಲ್ಲಿ ಅಡಿಕೆ ಬೆಳೆದಿದ್ದಾರೆ. ಇದು ವಾರ್ಷಿಕ ಬೆಳೆಯಾಗಿದೆ. 5 ಎಕರೆಯಲ್ಲಿ ತಿಂಗಳ ಹಿಂದೆ ಹೀರೇಕಾಯಿ ಬೆಳೆ ನಾಟಿ ಮಾಡಲಾಗಿದೆ. ಹೀರೇಕಾಯಿ ಬಳ್ಳಿಯು ಉತ್ತಮವಾಗಿ ಬಂದಿದ್ದು, ಇನ್ನು 4 ತಿಂಗಳು ಕಳೆದರೆ ಕಟಾವಿಗೆ ಬರುತ್ತದೆ. 5 ಎಕರೆಯಲ್ಲಿ 10 ಕ್ವಿಂಟಲ್ಗೂ ಹೆಚ್ಚು ಇಳುವರಿ ಬರುವ ನಿರೀಕ್ಷೆ ಇದೆ. 1 ಕ್ವಿಂಟಲ್ ಹೀರೇಕಾಯಿ ಬೀಜಕ್ಕೆ ₹ 1 ಲಕ್ಷ ಬೆಲೆಯಿದ್ದು, ₹ 10 ಲಕ್ಷ ಆದಾಯ ಬರುತ್ತದೆ ಎನ್ನುತ್ತಾರೆ ರೈತ ಬಸವರಾಜ್.</p>.<p>‘ಸಂಸ್ಥೆಯಿಂದ ಬೀಜ ನೀಡುತ್ತಾರೆ. ಅದಕ್ಕೆ ಬೇಕಾದ ಗೊಬ್ಬರ, ಔಷಧ ಯಾವ ರೀತಿ, ಯಾವ ಪ್ರಮಾಣದಲ್ಲಿ ಹಾಕಬೇಕು ಎಂದು ಅವರೇ ಮಾರ್ಗದರ್ಶನ ನೀಡುತ್ತಾರೆ. ಅದರಂತೆ ನಾವು ನೋಡಿಕೊಳ್ಳಬೇಕು. ಕಾಲಕಾಲಕ್ಕೆ ನೀರು, ಔಷಧ, ಗೊಬ್ಬರವನ್ನು ನೀಡಿದರೆ ಉತ್ತಮ ಇಳುವರಿ ಪಡೆಯಬಹುದು’ ಎಂದು ಅವರು ತಿಳಿಸುತ್ತಾರೆ.</p>.<p>2022ರಲ್ಲಿ 2 ಎಕರೆಯಲ್ಲಿ ಉತ್ತಮ ರೀತಿಯಲ್ಲಿ ದಂಟಿನಸೊಪ್ಪನ್ನು ಬೆಳೆದಿದ್ದ ರೈತರ ಸಾಧನೆಯನ್ನು ಗುರುತಿಸಿ ಐ.ಐ.ಎಚ್.ಆರ್ ಸಂಸ್ಥೆ ರಾಷ್ಟ್ರಮಟ್ಟದ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು. ಸಂಸ್ಥೆಯು 2 ಎಕರೆಯಲ್ಲಿ 12 ಕ್ವಿಂಟಲ್ ದಂಟಿನ ಸೊಪ್ಪಿನ ಬೀಜ ಬೆಳೆಯುವ ಗುರಿ ನೀಡಿತ್ತು. ಬಸವರಾಜ್ ಅವರು 19 ಕ್ವಿಂಟಲ್ ಗೂ ಹೆಚ್ಚಿನ ಬೀಜವನ್ನು ಬೆಳೆದಿದ್ದರು. 1 ಕೆ.ಜಿ ದಂಟಿನಸೊಪ್ಪಿನ ಬೀಜದ ಬೆಲೆ ₹ 400 ಇದೆ. 1 ಕ್ವಿಂಟಲ್ಗೆ ₹ 40,000 ದಂತೆ ಒಟ್ಟು ₹ 7.60 ಲಕ್ಷ ಆದಾಯ ಗಳಿಸಿದ್ದರು.</p>.<div><blockquote>ಪ್ರತಿದಿನ ಬೆಳೆಯನ್ನು ಪರಿಶೀಲಿಸಬೇಕು. ಏನಾದರೂ ವ್ಯತ್ಯಾಸ ಕಂಡು ಬಂದರೆ ಕೂಡಲೇ ಐ.ಐ.ಎಚ್.ಆರ್ ಸಂಸ್ಥೆಯನ್ನು ಸಂಪರ್ಕಿಸಬೇಕು. ಅವರು ಸೂಚಿಸುವ ಔಷಧ ಬಳಸಬೇಕು</blockquote><span class="attribution">ಜಿ.ಸಿ.ಬಸವರಾಜ ರೈತ ನಾಗಗೊಂಡನಹಳ್ಳಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪರಶುರಾಂಪುರ (ಚಿತ್ರದುರ್ಗ)</strong>: ಸಮೀಪದ ನಾಗಗೊಂಡನಹಳ್ಳಿಯ ರೈತ ಸಹೋದರರಾದ ಜಿ.ಸಿ.ನಾಗರಾಜ ಮತ್ತು ಜಿ.ಸಿ ಬಸವರಾಜ್ ಅವರು ಹೀರೇಕಾಯಿ, ಬೆಂಡೆಕಾಯಿ, ಸೋರೆಕಾಯಿ, ಕುಂಬಳಕಾಯಿ, ದಂಟಿನಸೊಪ್ಪು ಸೇರಿದಂತೆ ವಿವಿಧ ತರಕಾರಿ ಬೆಳೆಗಳನ್ನು ಬೆಳೆದು ಅವುಗಳ ಬೀಜ ಮಾರಾಟದಿಂದ ಕೈ ತುಂಬಾ ಆದಾಯ ಪಡೆಯುತ್ತಿದ್ದಾರೆ. </p>.<p>ಕಳೆದ 4 ವರ್ಷಗಳಿಂದ ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಹಾರ್ಟಿಕಲ್ಚರ್ ರಿಸರ್ಚ್ (ಐ.ಐ.ಎಚ್.ಆರ್.) ಸಂಸ್ಥೆ ಜೊತೆಗೆ ಒಪ್ಪಂದ ಮಾಡಿಕೊಂಡು ವಿವಿಧ ತರಕಾರಿ ಬೆಳೆ ಬೆಳೆದು, ಅದರಿಂದ ಬೀಜ ತೆಗೆದು ಸಂಸ್ಥೆಗೆ ಮಾರಾಟ ಮಾಡುತ್ತಾ ಉತ್ತಮ ಆದಾಯ ಪಡೆಯುತ್ತಿದ್ದಾರೆ.</p>.<p>ಒಟ್ಟು 12 ಎಕರೆ ಜಮೀನಿನಲ್ಲಿ 6 ಎಕರೆಯಲ್ಲಿ ಅಡಿಕೆ ಬೆಳೆದಿದ್ದಾರೆ. ಇದು ವಾರ್ಷಿಕ ಬೆಳೆಯಾಗಿದೆ. 5 ಎಕರೆಯಲ್ಲಿ ತಿಂಗಳ ಹಿಂದೆ ಹೀರೇಕಾಯಿ ಬೆಳೆ ನಾಟಿ ಮಾಡಲಾಗಿದೆ. ಹೀರೇಕಾಯಿ ಬಳ್ಳಿಯು ಉತ್ತಮವಾಗಿ ಬಂದಿದ್ದು, ಇನ್ನು 4 ತಿಂಗಳು ಕಳೆದರೆ ಕಟಾವಿಗೆ ಬರುತ್ತದೆ. 5 ಎಕರೆಯಲ್ಲಿ 10 ಕ್ವಿಂಟಲ್ಗೂ ಹೆಚ್ಚು ಇಳುವರಿ ಬರುವ ನಿರೀಕ್ಷೆ ಇದೆ. 1 ಕ್ವಿಂಟಲ್ ಹೀರೇಕಾಯಿ ಬೀಜಕ್ಕೆ ₹ 1 ಲಕ್ಷ ಬೆಲೆಯಿದ್ದು, ₹ 10 ಲಕ್ಷ ಆದಾಯ ಬರುತ್ತದೆ ಎನ್ನುತ್ತಾರೆ ರೈತ ಬಸವರಾಜ್.</p>.<p>‘ಸಂಸ್ಥೆಯಿಂದ ಬೀಜ ನೀಡುತ್ತಾರೆ. ಅದಕ್ಕೆ ಬೇಕಾದ ಗೊಬ್ಬರ, ಔಷಧ ಯಾವ ರೀತಿ, ಯಾವ ಪ್ರಮಾಣದಲ್ಲಿ ಹಾಕಬೇಕು ಎಂದು ಅವರೇ ಮಾರ್ಗದರ್ಶನ ನೀಡುತ್ತಾರೆ. ಅದರಂತೆ ನಾವು ನೋಡಿಕೊಳ್ಳಬೇಕು. ಕಾಲಕಾಲಕ್ಕೆ ನೀರು, ಔಷಧ, ಗೊಬ್ಬರವನ್ನು ನೀಡಿದರೆ ಉತ್ತಮ ಇಳುವರಿ ಪಡೆಯಬಹುದು’ ಎಂದು ಅವರು ತಿಳಿಸುತ್ತಾರೆ.</p>.<p>2022ರಲ್ಲಿ 2 ಎಕರೆಯಲ್ಲಿ ಉತ್ತಮ ರೀತಿಯಲ್ಲಿ ದಂಟಿನಸೊಪ್ಪನ್ನು ಬೆಳೆದಿದ್ದ ರೈತರ ಸಾಧನೆಯನ್ನು ಗುರುತಿಸಿ ಐ.ಐ.ಎಚ್.ಆರ್ ಸಂಸ್ಥೆ ರಾಷ್ಟ್ರಮಟ್ಟದ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು. ಸಂಸ್ಥೆಯು 2 ಎಕರೆಯಲ್ಲಿ 12 ಕ್ವಿಂಟಲ್ ದಂಟಿನ ಸೊಪ್ಪಿನ ಬೀಜ ಬೆಳೆಯುವ ಗುರಿ ನೀಡಿತ್ತು. ಬಸವರಾಜ್ ಅವರು 19 ಕ್ವಿಂಟಲ್ ಗೂ ಹೆಚ್ಚಿನ ಬೀಜವನ್ನು ಬೆಳೆದಿದ್ದರು. 1 ಕೆ.ಜಿ ದಂಟಿನಸೊಪ್ಪಿನ ಬೀಜದ ಬೆಲೆ ₹ 400 ಇದೆ. 1 ಕ್ವಿಂಟಲ್ಗೆ ₹ 40,000 ದಂತೆ ಒಟ್ಟು ₹ 7.60 ಲಕ್ಷ ಆದಾಯ ಗಳಿಸಿದ್ದರು.</p>.<div><blockquote>ಪ್ರತಿದಿನ ಬೆಳೆಯನ್ನು ಪರಿಶೀಲಿಸಬೇಕು. ಏನಾದರೂ ವ್ಯತ್ಯಾಸ ಕಂಡು ಬಂದರೆ ಕೂಡಲೇ ಐ.ಐ.ಎಚ್.ಆರ್ ಸಂಸ್ಥೆಯನ್ನು ಸಂಪರ್ಕಿಸಬೇಕು. ಅವರು ಸೂಚಿಸುವ ಔಷಧ ಬಳಸಬೇಕು</blockquote><span class="attribution">ಜಿ.ಸಿ.ಬಸವರಾಜ ರೈತ ನಾಗಗೊಂಡನಹಳ್ಳಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>