<p><strong>ಹೊಳಲ್ಕೆರೆ:</strong> ಕ್ಷೇತ್ರದ ಗಡಿ ಗ್ರಾಮಗಳಲ್ಲೂ ಮೂಲಸೌಕರ್ಯಕ್ಕೆ ಒತ್ತು ನೀಡಲಾಗಿದೆ ಎಂದು ಶಾಸಕ ಎಂ.ಚಂದ್ರಪ್ಪ ತಿಳಿಸಿದರು.</p>.<p>ತಾಲ್ಲೂಕಿನ ಕೊಮಾರನಹಳ್ಳಿಯಲ್ಲಿ ₹2.2 ಕೋಟಿ ವೆಚ್ಚದಲ್ಲಿ ನೂತನ ಆಶ್ರಯ ಬಡಾವಣೆ, ಕೋಮರನಹಳ್ಳಿಯಿಂದ ತೇಕಲವಟ್ಟಿವರೆಗೆ ಡಾಂಬರ್ ರಸ್ತೆ, ಗ್ರಾಮದ ಒಳಗೆ ಸಿ.ಸಿ. ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಭಾನುವಾರ ಚಾಲನೆ ನೀಡಿ ಮಾತನಾಡಿದರು.</p>.<p>ಕೊಮಾರನಹಳ್ಳಿ ಗಡಿ ಗ್ರಾಮವಾಗಿದ್ದು, ₹1 ಕೋಟಿ ವೆಚ್ಚದಲ್ಲಿ ವಸತಿ ಬಡಾವಣೆ ನಿರ್ಮಿಸಲಾಗುವುದು. ಗೌನಹಳ್ಳಿ ರಸ್ತೆ, ಕೆರೆಯಾಗಳ ಹಳ್ಳಿ ರಸ್ತೆ ನಿರ್ಮಿಸಲಾಗುವುದು. 2008ರಲ್ಲಿ ಇಲ್ಲಿಯೇ ಮತಗಟ್ಟೆ ಆರಂಭಿಸಿದ್ದೆ. ಆಂಜನೇಯಸ್ವಾಮಿ ದೇವಸ್ಥಾನಕ್ಕೆ ₹10 ಲಕ್ಷ ಅನುದಾನ ನೀಡಿದ್ದೇನೆ. ಪಕ್ಕದಲ್ಲೇ ಇರುವ ತೇಕಲವಟ್ಟಿಯಲ್ಲಿ ₹23 ಕೋಟಿ ವೆಚ್ಚದಲ್ಲಿ ಪವರ್ ಸ್ಟೇಷನ್ ನಿರ್ಮಾಣವಾಗುತ್ತಿದ್ದು, ಇನ್ನು ಎರಡು ತಿಂಗಳಲ್ಲಿ ಉದ್ಘಾಟಿಸುತ್ತೇನೆ ಎಂದರು.</p>.<p>‘ರೈತರಿಗೆ ಸಮರ್ಪಕ ವಿದ್ಯುತ್, ನೀರಾವರಿ ಕಲ್ಪಿಸಿದರೆ ದುಡಿದು ತಿನ್ನುತ್ತಾರೆ. ಶಾಸಕ ಎಂ.ಚoದ್ರಪ್ಪನ ವಿರೋಧ ಪಕ್ಷದಲ್ಲಿದ್ದರೂ, ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸಗಳು ನಿರಂತರವಾಗಿ ನಡೆಯುತ್ತಿವೆ’ ಎಂದು ಬಿಜೆಪಿ ಮುಖಂಡ ಟವಲ್ ಚಂದ್ರಪ್ಪ ಹೇಳಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೌರಮ್ಮ, ನಂದನ ಹೊಸೂರು ಪ್ರವೀಣ್, ಮಂಜುನಾಥ್, ರಾಜಣ್ಣ, ನಾಗರಾಜಪ್ಪ, ಮಾದಣ್ಣ, ಎಲೆ ರಾಜಪ್ಪ, ರಾಜಣ್ಣ, ಶ್ರೀನಿವಾಸ್ ಹಾಗೂ ಗ್ರಾಮಸ್ತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳಲ್ಕೆರೆ:</strong> ಕ್ಷೇತ್ರದ ಗಡಿ ಗ್ರಾಮಗಳಲ್ಲೂ ಮೂಲಸೌಕರ್ಯಕ್ಕೆ ಒತ್ತು ನೀಡಲಾಗಿದೆ ಎಂದು ಶಾಸಕ ಎಂ.ಚಂದ್ರಪ್ಪ ತಿಳಿಸಿದರು.</p>.<p>ತಾಲ್ಲೂಕಿನ ಕೊಮಾರನಹಳ್ಳಿಯಲ್ಲಿ ₹2.2 ಕೋಟಿ ವೆಚ್ಚದಲ್ಲಿ ನೂತನ ಆಶ್ರಯ ಬಡಾವಣೆ, ಕೋಮರನಹಳ್ಳಿಯಿಂದ ತೇಕಲವಟ್ಟಿವರೆಗೆ ಡಾಂಬರ್ ರಸ್ತೆ, ಗ್ರಾಮದ ಒಳಗೆ ಸಿ.ಸಿ. ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಭಾನುವಾರ ಚಾಲನೆ ನೀಡಿ ಮಾತನಾಡಿದರು.</p>.<p>ಕೊಮಾರನಹಳ್ಳಿ ಗಡಿ ಗ್ರಾಮವಾಗಿದ್ದು, ₹1 ಕೋಟಿ ವೆಚ್ಚದಲ್ಲಿ ವಸತಿ ಬಡಾವಣೆ ನಿರ್ಮಿಸಲಾಗುವುದು. ಗೌನಹಳ್ಳಿ ರಸ್ತೆ, ಕೆರೆಯಾಗಳ ಹಳ್ಳಿ ರಸ್ತೆ ನಿರ್ಮಿಸಲಾಗುವುದು. 2008ರಲ್ಲಿ ಇಲ್ಲಿಯೇ ಮತಗಟ್ಟೆ ಆರಂಭಿಸಿದ್ದೆ. ಆಂಜನೇಯಸ್ವಾಮಿ ದೇವಸ್ಥಾನಕ್ಕೆ ₹10 ಲಕ್ಷ ಅನುದಾನ ನೀಡಿದ್ದೇನೆ. ಪಕ್ಕದಲ್ಲೇ ಇರುವ ತೇಕಲವಟ್ಟಿಯಲ್ಲಿ ₹23 ಕೋಟಿ ವೆಚ್ಚದಲ್ಲಿ ಪವರ್ ಸ್ಟೇಷನ್ ನಿರ್ಮಾಣವಾಗುತ್ತಿದ್ದು, ಇನ್ನು ಎರಡು ತಿಂಗಳಲ್ಲಿ ಉದ್ಘಾಟಿಸುತ್ತೇನೆ ಎಂದರು.</p>.<p>‘ರೈತರಿಗೆ ಸಮರ್ಪಕ ವಿದ್ಯುತ್, ನೀರಾವರಿ ಕಲ್ಪಿಸಿದರೆ ದುಡಿದು ತಿನ್ನುತ್ತಾರೆ. ಶಾಸಕ ಎಂ.ಚoದ್ರಪ್ಪನ ವಿರೋಧ ಪಕ್ಷದಲ್ಲಿದ್ದರೂ, ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸಗಳು ನಿರಂತರವಾಗಿ ನಡೆಯುತ್ತಿವೆ’ ಎಂದು ಬಿಜೆಪಿ ಮುಖಂಡ ಟವಲ್ ಚಂದ್ರಪ್ಪ ಹೇಳಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೌರಮ್ಮ, ನಂದನ ಹೊಸೂರು ಪ್ರವೀಣ್, ಮಂಜುನಾಥ್, ರಾಜಣ್ಣ, ನಾಗರಾಜಪ್ಪ, ಮಾದಣ್ಣ, ಎಲೆ ರಾಜಪ್ಪ, ರಾಜಣ್ಣ, ಶ್ರೀನಿವಾಸ್ ಹಾಗೂ ಗ್ರಾಮಸ್ತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>