‘ಜಿಲ್ಲೆಯಲ್ಲಿ ರೈಲ್ವೆ, ಅಂಚೆ, ಡಿಆರ್ಡಿಒ, ಇಸ್ರೊ ಸೇರಿ ಕೇಂದ್ರ ಸರ್ಕಾರಿ ಇಲಾಖೆ ಹಾಗೂ ಸಂಸ್ಥೆಗಳಿವೆ. ಇವುಗಳಲ್ಲಿ ಹೆಚ್ಚಿನ ನೌಕರರು ಕೆಲಸ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆ ಮಾಡುವಂತೆ ಕೋರಿಕೆ ಬಂದಿದೆ. ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರ ನಿರ್ದೇಶನದಂತೆ ಕೇಂದ್ರೀಯ ವಿದ್ಯಾಲಯ ಸ್ಥಾಪನೆಯ ಕುರಿತು ಸ್ಥಳ ಪರಿಶೀಲನೆ ನಡೆಸಲಾಗಿದೆ. ಎರಡು ದಿನಗಳಲ್ಲಿ ವರದಿ ಸಲ್ಲಿಸಲಾಗುವುದು’ ಎಂದು ಮಾಹಿತಿ ನೀಡಿದರು.