<p><strong>ನಾಯಕನಹಟ್ಟಿ</strong>: ನಾಯಕನಹಟ್ಟಿ ಸಮೀಪದ ದೊಡ್ಡಕೆರೆಯ ಏರಿಯ ಮೇಲಿಂದ ಬುಧವಾರ ಎತ್ತಿನ ಬಂಡಿಯೊಂದು ಉರುಳಿಬಿದ್ದು, 5 ಜನರು ಗಾಯಗೊಂಡಿದ್ದಾರೆ.</p>.<p>ಬೋಸೇದೇವರಹಟ್ಟಿ ಗ್ರಾಮದ ಬೋರಯ್ಯ, ಬೋರಮ್ಮ, ರವಿತೇಜ, ಗೋವಿಂದ ಗಾಯಗೊಂಡ ವ್ಯಕ್ತಿಗಳಾಗಿದ್ದು, ತೀವ್ರವಾಗಿ ಗಾಯಗೊಂಡಿರುವ ದಾಸರ ಬೋರಯ್ಯ ಎಂಬ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಚಿತ್ರದುರ್ಗ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದೆ. ಉಳಿದವರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಬೋಸೇದೇವರಹಟ್ಟಿ ಗ್ರಾಮದಿಂದ 2 ಎತ್ತಿನ ಗಾಡಿಗಳಲ್ಲಿ ಜನರು ಹಿರೆಕೆರೆ ಕಾವಲು ಪ್ರದೇಶದಲ್ಲಿ ಜರುಗುತ್ತಿದ್ದ ಚೌಡಮ್ಮನ ಜಾತ್ರೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ಒಂದು ಎತ್ತಿನಗಾಡಿ ಮತ್ತೊಂದು ಗಾಡಿಯನ್ನು ಹಿಂದಿಕ್ಕಲು ವೇಗವಾಗಿ ಸಂಚರಿಸಿದಾಗ ನಿಯಂತ್ರಣ ಕಳೆದುಕೊಂಡು ದೊಡ್ಡಕೆರೆ ಏರಿಯಿಂದ ಕೆಳಕ್ಕುರುಳಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ದಾಖ<br />ಲಿಸಲಾಗಿದೆ. ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಯಕನಹಟ್ಟಿ</strong>: ನಾಯಕನಹಟ್ಟಿ ಸಮೀಪದ ದೊಡ್ಡಕೆರೆಯ ಏರಿಯ ಮೇಲಿಂದ ಬುಧವಾರ ಎತ್ತಿನ ಬಂಡಿಯೊಂದು ಉರುಳಿಬಿದ್ದು, 5 ಜನರು ಗಾಯಗೊಂಡಿದ್ದಾರೆ.</p>.<p>ಬೋಸೇದೇವರಹಟ್ಟಿ ಗ್ರಾಮದ ಬೋರಯ್ಯ, ಬೋರಮ್ಮ, ರವಿತೇಜ, ಗೋವಿಂದ ಗಾಯಗೊಂಡ ವ್ಯಕ್ತಿಗಳಾಗಿದ್ದು, ತೀವ್ರವಾಗಿ ಗಾಯಗೊಂಡಿರುವ ದಾಸರ ಬೋರಯ್ಯ ಎಂಬ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಚಿತ್ರದುರ್ಗ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದೆ. ಉಳಿದವರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಬೋಸೇದೇವರಹಟ್ಟಿ ಗ್ರಾಮದಿಂದ 2 ಎತ್ತಿನ ಗಾಡಿಗಳಲ್ಲಿ ಜನರು ಹಿರೆಕೆರೆ ಕಾವಲು ಪ್ರದೇಶದಲ್ಲಿ ಜರುಗುತ್ತಿದ್ದ ಚೌಡಮ್ಮನ ಜಾತ್ರೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ಒಂದು ಎತ್ತಿನಗಾಡಿ ಮತ್ತೊಂದು ಗಾಡಿಯನ್ನು ಹಿಂದಿಕ್ಕಲು ವೇಗವಾಗಿ ಸಂಚರಿಸಿದಾಗ ನಿಯಂತ್ರಣ ಕಳೆದುಕೊಂಡು ದೊಡ್ಡಕೆರೆ ಏರಿಯಿಂದ ಕೆಳಕ್ಕುರುಳಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ದಾಖ<br />ಲಿಸಲಾಗಿದೆ. ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>