ಹೋಗುವ ಅನಿವಾರ್ಯತೆ ಎದುರಾಗಿತ್ತು. ವಿದ್ಯಾಭ್ಯಾಸಕ್ಕೆ ತೀವ್ರ ತೊಂದರೆಯಾಗುತ್ತಿತ್ತು. ಈ ಕುರಿತು ಫೆ. 21ರಂದು ಗ್ರಾಮದಲ್ಲಿ ನಡೆದಿದ್ದ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯದ ವೇಳೆ ಗ್ರಾಮಸ್ಥರು ಬಸ್ ಸೇವೆಗೆ ಮನವಿ ಮಾಡಿದ್ದರು. ತಕ್ಷಣದಿಂದ ಬಸ್ ಸೇವೆ ಆರಂಭಿಸಲಾಗಿತ್ತು. ಆದರೆ ಕೋವಿಡ್ ಲಾಕ್ಡೌನ್ ನಂತರ ಬಸ್ ಸ್ಥಗಿತವಾಗಿತ್ತು. ಈಗ ಶಾಲೆ-ಕಾಲೇಜು ಮರು ಆರಂಭವಾಗಿದ್ದು ವಿದ್ಯಾರ್ಥಿಗಳು ಬಸ್ ಬಾರದ ಪರಿಣಾಮ ನಡೆದುಕೊಂಡು ಶಾಲೆಗಳಿಗೆ ಹೋಗುವ ಸ್ಥಿತಿ ನಿರ್ಮಾಣವಾಗಿತ್ತು. ಈ ಕುರಿತು ಸೆ. 23ರಂದು ‘ಪ್ರಜಾವಾಣಿ’ಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು.