<p>ಸಿರಿಗೆರೆ: ಸಮೀಪದ ಬ್ಯಾಲಹಾಳ್ ಗ್ರಾಮದಲ್ಲಿ ಮೂರ್ನಾಲ್ಕು ತಿಂಗಳಿಂದ ಕುಡಿಯುವ ನೀರಿಗಾಗಿ ಪರಿತಪಿಸಿದ್ದ ಗ್ರಾಮದ ದಲಿತ ಕಾಲೊನಿ ನಿವಾಸಿಗಳು ಬುಧವಾರ ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಕುಡಿಯಲು ನೀರು ಪೂರೈಸಿ ಎಂದು ಆಗ್ರಹಿಸಿದರು.</p>.<p>‘ಹಲವು ಬಾರಿ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಹಾಗಾಗಿ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿದ್ದೇವೆ. ಗ್ರಾಮದ ಜನರಿಗೆ ನೀರು ಒದಗಿಸಲು 8 ಕೊಳವೆ ಬಾವಿಗಳಿವೆ. ಆದರೆ, ಸಮರ್ಪಕ ನೀರು ಸರಬರಾಜು ಮಾಡಲು ಪಂಚಾಯಿತಿ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ’ ಎಂದು ಗ್ರಾಮದ ದಲಿತ ಮುಖಂಡ ಬಿ.ಕೆ. ಬಸವರಾಜ್ ದೂರಿದರು.</p>.<p>‘ಗ್ರಾಮದಲ್ಲಿ ಓವರ್ಹೆಡ್ ಟ್ಯಾಂಕ್ ನಿರ್ಮಾಣ ಮಾಡಲಾಗಿದ್ದು, ಕೊಳವೆ ಬಾವಿಯ ನೀರನ್ನು ಇಲ್ಲಿ ಸಂಗ್ರಹಿಸಿ ಗ್ರಾಮದ ಜನರಿಗೆ ಪೂರೈಸಿದರೆ ಎಲ್ಲರಿಗೂ ನೀರು ಸಿಗುತ್ತದೆ. ಆದರೆ, ಅಧಿಕಾರಿಗಳು ಸಬೂಬು ಹೇಳುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ನಾಲ್ಕು ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ. ಓವರ್ಹೆಡ್ ಟ್ಯಾಂಕಿನಲ್ಲಿ ಸಂಗ್ರಹಿಸುವಷ್ಟು ನೀರಿನ ಒತ್ತಡ ಇಲ್ಲ. ಹಾಗಾಗಿ ತೆರೆದ ಪೈಪ್ಗಳಲ್ಲಿ ನೀರು ಪೂರೈಸುತ್ತಿದ್ದೇವೆ’ ಎಂದು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಆಸ್ಮಾ ತಿಳಿಸಿದರು.</p>.<p>‘ಗ್ರಾಮದ ಉಪ್ಪಿನ ಹಳ್ಳದಲ್ಲಿ ಸ್ವಲ್ಪಮಟ್ಟಿಗೆ ನೀರು ಸಿಗುತ್ತಿದೆ. ಸಮೀಪದ ಕಲ್ಕುಂಟೆ ರಸ್ತೆಯಲ್ಲಿನ ಕೊಳವೆ ಬಾವಿಗೆ ಮೋಟಾರು ಅಳವಡಿಸಿ ಪೈಪ್ಲೈನ್ ಮೂಲಕ ನೀರು ಒದಗಿಸಲು ಪ್ರಯತ್ನಿಸಲಾಗುವುದು’ ಎಂದರು.</p>.<p>ಮುಖಂಡರಾದ ಬಿ.ಕೆ. ಬಸವರಾಜ್, ವಿರೂಪಾಕ್ಷಪ್ಪ, ಶಾಂತಕುಮಾರ್. ಟಿ, ರಾಜಪ್ಪ ನಾಗರಾಜ್, ಹನುಮಂತಪ್ಪ, ಮಂಜಪ್ಪ ಡಿ, ಶ್ರೀನಿವಾಸ್, ವೆಂಕಟೇಶ್, ಆದರ್ಶ್, ದರ್ಶನ್, ಸಂತೋಷ್, ಅಜ್ಜಯ್ಯ, ಕೆಂಚಮ್ಮ, ಪ್ರೇಮಕ್ಕ, ಸರಿತಾ ಸೇರಿ ಹಲವರು ಭಾಗಿಯಾಗಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-44-922527896</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿರಿಗೆರೆ: ಸಮೀಪದ ಬ್ಯಾಲಹಾಳ್ ಗ್ರಾಮದಲ್ಲಿ ಮೂರ್ನಾಲ್ಕು ತಿಂಗಳಿಂದ ಕುಡಿಯುವ ನೀರಿಗಾಗಿ ಪರಿತಪಿಸಿದ್ದ ಗ್ರಾಮದ ದಲಿತ ಕಾಲೊನಿ ನಿವಾಸಿಗಳು ಬುಧವಾರ ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಕುಡಿಯಲು ನೀರು ಪೂರೈಸಿ ಎಂದು ಆಗ್ರಹಿಸಿದರು.</p>.<p>‘ಹಲವು ಬಾರಿ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಹಾಗಾಗಿ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿದ್ದೇವೆ. ಗ್ರಾಮದ ಜನರಿಗೆ ನೀರು ಒದಗಿಸಲು 8 ಕೊಳವೆ ಬಾವಿಗಳಿವೆ. ಆದರೆ, ಸಮರ್ಪಕ ನೀರು ಸರಬರಾಜು ಮಾಡಲು ಪಂಚಾಯಿತಿ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ’ ಎಂದು ಗ್ರಾಮದ ದಲಿತ ಮುಖಂಡ ಬಿ.ಕೆ. ಬಸವರಾಜ್ ದೂರಿದರು.</p>.<p>‘ಗ್ರಾಮದಲ್ಲಿ ಓವರ್ಹೆಡ್ ಟ್ಯಾಂಕ್ ನಿರ್ಮಾಣ ಮಾಡಲಾಗಿದ್ದು, ಕೊಳವೆ ಬಾವಿಯ ನೀರನ್ನು ಇಲ್ಲಿ ಸಂಗ್ರಹಿಸಿ ಗ್ರಾಮದ ಜನರಿಗೆ ಪೂರೈಸಿದರೆ ಎಲ್ಲರಿಗೂ ನೀರು ಸಿಗುತ್ತದೆ. ಆದರೆ, ಅಧಿಕಾರಿಗಳು ಸಬೂಬು ಹೇಳುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ನಾಲ್ಕು ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ. ಓವರ್ಹೆಡ್ ಟ್ಯಾಂಕಿನಲ್ಲಿ ಸಂಗ್ರಹಿಸುವಷ್ಟು ನೀರಿನ ಒತ್ತಡ ಇಲ್ಲ. ಹಾಗಾಗಿ ತೆರೆದ ಪೈಪ್ಗಳಲ್ಲಿ ನೀರು ಪೂರೈಸುತ್ತಿದ್ದೇವೆ’ ಎಂದು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಆಸ್ಮಾ ತಿಳಿಸಿದರು.</p>.<p>‘ಗ್ರಾಮದ ಉಪ್ಪಿನ ಹಳ್ಳದಲ್ಲಿ ಸ್ವಲ್ಪಮಟ್ಟಿಗೆ ನೀರು ಸಿಗುತ್ತಿದೆ. ಸಮೀಪದ ಕಲ್ಕುಂಟೆ ರಸ್ತೆಯಲ್ಲಿನ ಕೊಳವೆ ಬಾವಿಗೆ ಮೋಟಾರು ಅಳವಡಿಸಿ ಪೈಪ್ಲೈನ್ ಮೂಲಕ ನೀರು ಒದಗಿಸಲು ಪ್ರಯತ್ನಿಸಲಾಗುವುದು’ ಎಂದರು.</p>.<p>ಮುಖಂಡರಾದ ಬಿ.ಕೆ. ಬಸವರಾಜ್, ವಿರೂಪಾಕ್ಷಪ್ಪ, ಶಾಂತಕುಮಾರ್. ಟಿ, ರಾಜಪ್ಪ ನಾಗರಾಜ್, ಹನುಮಂತಪ್ಪ, ಮಂಜಪ್ಪ ಡಿ, ಶ್ರೀನಿವಾಸ್, ವೆಂಕಟೇಶ್, ಆದರ್ಶ್, ದರ್ಶನ್, ಸಂತೋಷ್, ಅಜ್ಜಯ್ಯ, ಕೆಂಚಮ್ಮ, ಪ್ರೇಮಕ್ಕ, ಸರಿತಾ ಸೇರಿ ಹಲವರು ಭಾಗಿಯಾಗಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-44-922527896</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>