ಚಿತ್ರದುರ್ಗ: ಬಡವರ ಅನ್ನಕ್ಕೆ ಕನ್ನ ಹಾಕುವ ಪ್ರಶ್ನೆಯೇ ಇಲ್ಲ. ಡಿ.ಕೆ.ಶಿವಕುಮಾರ್ ಬಳಿ ದಾಖಲೆ ಇದ್ದರೆ ಬಹಿರಂಗಪಡಿಸಲಿ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಸವಾಲು ಹಾಕಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಡವರಿಗೆ ಆಹಾರ ತಲುಪಿಸುವಲ್ಲಿ ಸರ್ಕಾರ ಪ್ರಾಮಾಣಿಕವಾಗಿ ಶ್ರಮಿಸುತ್ತಿದೆ. ಕೆಲವರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.
ಪಾದರಾಯನಪುರ ಗಲಭೆ ಆರೋಪಿಗಳನ್ನು ಭದ್ರತಾ ದೃಷ್ಟಿಯಿಂದ ರಾಮನಗರಕ್ಕೆ ಸ್ಥಳಾಂತರ ಮಾಡಲಾಗಿತ್ತು. ರಾಮನಗರ ವಾತಾವರಣ ಹಾಳು ಮಾಡುವ ಉದ್ದೇಶ ಸರ್ಕಾರಕ್ಕೆ ಇರಲಿಲ್ಲ ಎಂದು ಹೇಳಿದರು.