<p><strong>ಮೊಳಕಾಲ್ಮುರು</strong>: ಪಟ್ಟಣದ ವಿವಿಧ ರಸ್ತೆ ಬದಿ ಹೋಟೆಲ್, ಬೇಕರಿ, ತಿಂಡಿ ತಯಾರಿಕೆ ಘಟಕಗಳಿಗೆ ಬುಧವಾರ ಆರೋಗ್ಯ ಇಲಾಖೆ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.</p>.<p>ಪಟ್ಟಣ ಪಂಚಾಯಿತಿ ಮತ್ತು ಪೊಲೀಸ್ ಇಲಾಖೆ ಸಿಬ್ಬಂದಿ ಜಂಟಿಯಾಗಿ ದಾಳಿ ನಡೆಸಿದರು. ಈ ವೇಳೆ ಆವರಣದ ಸ್ವಚ್ಛತೆ, ಆಹಾರ ಸಾಮಗ್ರಿಗಳನ್ನು ತಯಾರಿಸುವ ಬಗ್ಗೆ, ಬಳಕೆ ಮಾಡುವ ಸಾಮಗ್ರಿಗಳ ಬಗ್ಗೆ, ಜಂಕ್ಫುಡ್ ಗಳಿಗೆ ಹೆಚ್ಚಿನ<br> ಬಣ್ಣ ಹಾಕುವ ಕುರಿತು, ಶುದ್ಧ ಕುಡಿಯುವ ನೀರು ನೀಡುತ್ತಿರುವ ಬಗ್ಗೆ, ತಟ್ಟೆ, ಲೋಟಗಳನ್ನು ಸ್ವಚ್ಛ ಮಾಡುವ ಬಗ್ಗೆ ಪರಿಶೀಲಿಸಿದರು.</p>.<p>ಕೆಲ ಬೇಕರಿಗಳಲ್ಲಿ ಕೇಕ್ ತಯಾರಿಕೆ ವೇಳೆ ನೂಸ್ ಪೇಪರ್ ಬಳಕೆ ಮಾಡುತ್ತಿರುವುದನ್ನು ನಿಲ್ಲಿಸುವಂತೆ ಸೂಚಿಸಲಾಯಿತು. ಗೋಬಿ, ಎಗ್ರೈಸ್, ಕಬಾಬ್ಗೆ ಹೆಚ್ಚಿನ ಬಣ್ಣ ಹಾಕುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.</p>.<p>ಈಗಾಗಲೇ ಎರಡು ಸಲ ಭೇಟಿ ನೀಡಿ ಸಲಹೆ , ಸೂಚನೆ ನೀಡಲಾಗಿದೆ. ಆದರೂ ತಪ್ಪುಗಳು ಮರುಕಳಿಸುತ್ತಿದ್ದು ಇದು ಮುಂದುವರಿದಲ್ಲಿ ಅಂಗಡಿಗಳ ಪರವಾನಗಿ ರದ್ದುಪಡಿಸುವುದಾಗಿ ಎಚ್ಚರಿಸಿದರು.</p>.<p>ಆಹಾರ ಸುರಕ್ಷತಾ ಅಧಿಕಾರಿ ಮಂಜುನಾಥ್, ಆರೋಗ್ಯ ನಿರೀಕ್ಷಕ ಟಿ. ಕುಮಾರ್, ಆರೋಗ್ಯ ಶಿಕ್ಷಣಾಧಿಕಾರಿ ಸಿದ್ದೇಶ್, ಪಟ್ಟಣ ಪಂಚಾಯಿತಿ ಆರೋಗ್ಯ ನಿಯಂತ್ರಣಾಧಿಕಾರಿ ಶ್ರೀನಿವಾಸ್, ಪೊಲೀಸ್ ಸಿಬ್ಬಂದಿ ಸತೀಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು</strong>: ಪಟ್ಟಣದ ವಿವಿಧ ರಸ್ತೆ ಬದಿ ಹೋಟೆಲ್, ಬೇಕರಿ, ತಿಂಡಿ ತಯಾರಿಕೆ ಘಟಕಗಳಿಗೆ ಬುಧವಾರ ಆರೋಗ್ಯ ಇಲಾಖೆ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.</p>.<p>ಪಟ್ಟಣ ಪಂಚಾಯಿತಿ ಮತ್ತು ಪೊಲೀಸ್ ಇಲಾಖೆ ಸಿಬ್ಬಂದಿ ಜಂಟಿಯಾಗಿ ದಾಳಿ ನಡೆಸಿದರು. ಈ ವೇಳೆ ಆವರಣದ ಸ್ವಚ್ಛತೆ, ಆಹಾರ ಸಾಮಗ್ರಿಗಳನ್ನು ತಯಾರಿಸುವ ಬಗ್ಗೆ, ಬಳಕೆ ಮಾಡುವ ಸಾಮಗ್ರಿಗಳ ಬಗ್ಗೆ, ಜಂಕ್ಫುಡ್ ಗಳಿಗೆ ಹೆಚ್ಚಿನ<br> ಬಣ್ಣ ಹಾಕುವ ಕುರಿತು, ಶುದ್ಧ ಕುಡಿಯುವ ನೀರು ನೀಡುತ್ತಿರುವ ಬಗ್ಗೆ, ತಟ್ಟೆ, ಲೋಟಗಳನ್ನು ಸ್ವಚ್ಛ ಮಾಡುವ ಬಗ್ಗೆ ಪರಿಶೀಲಿಸಿದರು.</p>.<p>ಕೆಲ ಬೇಕರಿಗಳಲ್ಲಿ ಕೇಕ್ ತಯಾರಿಕೆ ವೇಳೆ ನೂಸ್ ಪೇಪರ್ ಬಳಕೆ ಮಾಡುತ್ತಿರುವುದನ್ನು ನಿಲ್ಲಿಸುವಂತೆ ಸೂಚಿಸಲಾಯಿತು. ಗೋಬಿ, ಎಗ್ರೈಸ್, ಕಬಾಬ್ಗೆ ಹೆಚ್ಚಿನ ಬಣ್ಣ ಹಾಕುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.</p>.<p>ಈಗಾಗಲೇ ಎರಡು ಸಲ ಭೇಟಿ ನೀಡಿ ಸಲಹೆ , ಸೂಚನೆ ನೀಡಲಾಗಿದೆ. ಆದರೂ ತಪ್ಪುಗಳು ಮರುಕಳಿಸುತ್ತಿದ್ದು ಇದು ಮುಂದುವರಿದಲ್ಲಿ ಅಂಗಡಿಗಳ ಪರವಾನಗಿ ರದ್ದುಪಡಿಸುವುದಾಗಿ ಎಚ್ಚರಿಸಿದರು.</p>.<p>ಆಹಾರ ಸುರಕ್ಷತಾ ಅಧಿಕಾರಿ ಮಂಜುನಾಥ್, ಆರೋಗ್ಯ ನಿರೀಕ್ಷಕ ಟಿ. ಕುಮಾರ್, ಆರೋಗ್ಯ ಶಿಕ್ಷಣಾಧಿಕಾರಿ ಸಿದ್ದೇಶ್, ಪಟ್ಟಣ ಪಂಚಾಯಿತಿ ಆರೋಗ್ಯ ನಿಯಂತ್ರಣಾಧಿಕಾರಿ ಶ್ರೀನಿವಾಸ್, ಪೊಲೀಸ್ ಸಿಬ್ಬಂದಿ ಸತೀಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>