ಗ್ರಾಮದ ಚಂದ್ರಪ್ಪ ಅವರ ಶೆಡ್ನಲ್ಲಿ ಮೂರು ದಿನಗಳ ಹಿಂದಷ್ಟೇ ನುಗ್ಗಿದ್ದ ಚಿರತೆ ಮೇಕೆಯನ್ನು ಹೊತ್ತೊಯ್ದು ಅರ್ಧ ಭಾಗವನ್ನು ತಿಂದು ಉಳಿದ ಅರ್ಧ ದೇಹವನ್ನು ಗ್ರಾಮದ ಹೊರವಲಯದಲ್ಲಿ ಬಿಟ್ಟು ಹೋಗಿತ್ತು. ಗಾಬರಿಗೊಂಡ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಬೋನು ಇಟ್ಟಿದ್ದರು.