ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರಿಯೂರು | ಕಾರು ಡಿಕ್ಕಿ: ಬಾಲಕ ಸಾವು

Last Updated 8 ಜೂನ್ 2022, 8:29 IST
ಅಕ್ಷರ ಗಾತ್ರ

ಹಿರಿಯೂರು: ಶಾಲೆಗೆ ತೆರಳಲು ಆಟೊಗೆ ಕಾಯುತ್ತಿದ್ದ ಎರಡನೇ ತರಗತಿ ಬಾಲಕನಿಗೆ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ತಾಲ್ಲೂಕಿನ ಪಟ್ರೆಹಳ್ಳಿಯಲ್ಲಿ ಬುಧವಾರ ನಡೆದಿದೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಕಕ್ಕೇರಿ ಗ್ರಾಮದ ದುಗ್ಗಪ್ಪ ಎಂಬುವರ ಪುತ್ರ ಶರಣಬಸವ (7) ಮೃತ ಬಾಲಕ. ಮೂರು ವರ್ಷದ ಹಿಂದೆ ಹಿರಿಯೂರಿಗೆ ಉದ್ಯೋಗ ಅರಸಿ ಬಂದು ಮಗನನ್ನು ಕಳೆದುಕೊಂಡ ಪೋಷಕರು ಕಣ್ಣೀರ ಕಡಲಲ್ಲಿ ಮುಳುಗಿದ್ದಾರೆ.

ದುಗ್ಗಪ್ಪ ಎಂಬುವವರ ಮೂವರು ಮಕ್ಕಳಲ್ಲಿ ಶರಣಬಸವ ಒಬ್ಬರು. ಮತ್ತಿಬ್ಬರು ಮಕ್ಕಳಾದ ಯಲ್ಲಾಲಿಂಗ ಹಾಗೂ ಯಶೋದಳನ್ನು ಆಟೊಗೆ ಹತ್ತಿಸುವಾಗ, ರಸ್ತೆ ಬದಿಯಲ್ಲಿ ನಿಂತಿದ್ದ ಶರಣಬಸವನಿಗೆ ಹಿರಿಯೂರು ಕಡೆಯಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ತಲೆಗೆ ಬಲವಾದ ಹೊಡೆತ ಬಿದ್ದಿದ್ದರಿಂದ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ವಿದ್ಯಾರ್ಥಿ ಮೃತಪಟ್ಟಿದ್ದಾನೆ.

ಸ್ಥಳಕ್ಕೆ ಸಿಪಿಐ ಆನಂದ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT