ಕಾನಹೋಸಹಳ್ಳಿ: ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಬೆಂಗಳೂರಿನಿಂದ ಸಿಂದಿಗಿ ಗ್ರಾಮಕ್ಕೆ ತೆರಳುತ್ತಿದ ಕಾರು ಸಮೀಪದ ಬಿಷ್ನಹಳ್ಳಿ ಬಳಿ ಸೇತುವೆಯಿಂದ ಪಲ್ಟಿಯಾದ ಘಟನೆ ಶನಿವಾರ ಸಂಜೆ ನಡೆದಿದೆ.
ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ. ಆದರೆ ಕಾರು ನಜ್ಜುಗುಜ್ಜಾಗಿದೆ. ಚಾಲಕ ಸಿದ್ದೇಶ್ ಆರೋಗ್ಯವಾಗಿದ್ದಾರೆ. ಪ್ರಯಾಣಿಕರಾದ ಬಸವರಾಜ್ ಹಾಗೂ ಬಿರಾದಾರ್ ಪುಂಡಲಿಕ್ ಅವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ತಿಳಿದುಬಂದಿದೆ. ಪ್ರಕರಣ ದಾಖಲಾಗಿಲ್ಲ. ಸ್ಥಳದಲ್ಲಿ ಸ್ಥಳೀಯ ಠಾಣೆಯ ಪಿಎಸ್ಐ ಎಚ್. ನಾಗರಾಜ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.