ಮೊಳಕಾಲ್ಮುರು: ತಾಲ್ಲೂಕಿನ ತಮ್ಮೇನಹಳ್ಳಿ ಬಳಿ 150 ‘ಎ’ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಬೆಳಗಿವ ಜಾವ ಸರಕು ವಾಹನವೊಂದು ಲಾರಿಗೆ ಡಿಕ್ಕಿ ಹೊಡೆದು ಇಬ್ಬರು ರೈತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸೀಮಾಂಧ್ರದ ರಾಯದುರ್ಗ ತಾಲ್ಲೂಕು ಬೊಮ್ಮನಾಳ್ ಮಂಡಲ ಗೋವಿಂದವಾಡ ಗ್ರಾಮದ ದಾಸರಿ ಕೇಶಪ್ಪ (30) ಮತ್ತು ಯ ವಂಡ್ರಪ್ಪ (64) ಮೃತಪಟ್ಟವರು.
ಕುಮ್ಮರಿ ಸೋಮಣ್ಣ ಗಾಯಗೊಂಡಿದ್ದಾರೆ. ಅವರು ಸರಕು ವಾಹನದಲ್ಲಿ ತಮ್ಮ ಜಮೀನಿನಲ್ಲಿ ಬೆಳೆದಿದ್ದ ಮೆಣಸಿನಕಾಯಿಯನ್ನು ಮಾರಾಟ ಮಾಡಲು ಹಾವೇರಿ ಜಿಲ್ಲೆ ಬ್ಯಾಡಗಿ ಮಾರುಕಟ್ಟೆಗೆ ಹೋಗುತ್ತಿದ್ದರು.
ರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.