ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಬಸವರಾಜ ಎಸ್.ಚೇಗಾರೆಡ್ಡಿ ಮಾತನಾಡಿ, ‘15,090 ಸಿವಿಲ್ ಹಾಗೂ 15,952 ಕ್ರಿವಿನಲ್ ಸೇರಿ ಜಿಲ್ಲೆಯಲ್ಲಿ 31,042 ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ. ಲೋಕ ಅದಾಲತ್ನಲ್ಲಿ 4,087 ಪ್ರಕರಣಗಳನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲಾಗಿದೆ. ರಾಜಿ ಮಾಡಿಕೊಳ್ಳಬಹುದಾದ ಅಪರಾಧಿಕ ಪ್ರಕರಣ, ಚೆಕ್ಬೌನ್ಸ್, ಬ್ಯಾಂಕ್ ಪ್ರಕರಣ, ಹಣವಸೂಲಿ, ಅಪಘಾತ, ಜೀವನಾಂಶ, ವಿದ್ಯುತ್ ಸಂಬಂಧಿತ ವ್ಯಾಜ್ಯ, ಕಾರ್ಮಿಕ, ಸಿವಿಲ್ ಸೇರಿ ಹಲವು ಬಗೆಯ ಪ್ರಕರಣಗಳನ್ನು ಅದಾಲತ್ಗೆ ಶಿಫಾರಸು ಮಾಡಲಾಗಿದೆ. ಆಸಕ್ತರು ಪ್ರಾಧಿಕಾರ ಸಂಪರ್ಕಿಸಬಹುದು’ ಎಂದರು.