<p><strong>ಚಿತ್ರದುರ್ಗ</strong>: ‘ಪರಿಶಿಷ್ಟ ಜಾತಿ ಸಮೀಕ್ಷೆಯಲ್ಲಿ ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ಎಂದು ಬರೆಸಿರುವವರು ಒಳಮೀಸಲಾತಿಯ ಲಾಭ ಪಡೆಯಲು ಕಡ್ಡಾಯವಾಗಿ ಜಾತಿ ಘೋಷಣೆ ಮಾಡಿಕೊಳ್ಳಬೇಕಿದೆ. ಹೊಲೆಯ– ಮಾದಿಗ ಸಮುದಾಯದವರು ಅದಲು–ಬದಲಾಗದಂತೆ ಎಚ್ಚರಿಕೆ ವಹಿಸಬೇಕಾಗಿದೆ’ ಎಂದು ಕೆಪಿಸಿಸಿ ಉಪಾಧ್ಯಕ್ಷ ಎಚ್.ಆಂಜನೇಯ ಹೇಳಿದರು.</p>.<p>‘ಜಾತಿ ಸೂಚಕ ವರ್ಗದಲ್ಲಿ ಎಕೆ, ಎಡಿ, ಎಎ ಎಂದು ಗುರುತಿಸಿಕೊಂಡವರು ‘ಎ’ ಅಥವಾ ‘ಬಿ’ ಗುಂಪಿನಲ್ಲಿ ಗುರುತಿಸಿಕೊಳ್ಳಬೇಕಾಗಿದೆ. ಈ ಪ್ರಕ್ರಿಯೆಯಲ್ಲಿ ಬೇರೆಯವರು ಕಳ್ಳದಾರಿಯಲ್ಲಿ ನಮ್ಮ ‘ಬಿ’ ಗುಂಪಿಗೆ ಪ್ರವೇಶಿಸಿದರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಅವರಿಗೆ ಶಿಕ್ಷೆಯಾಗುವವರೆಗೂ ಹೋರಾಟ ನಡೆಸುತ್ತೇವೆ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು.</p>.<p>‘ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬದ್ಧತೆಯಿಂದ ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆ ನಡೆಸುತ್ತಿದೆ. ಈ ಸಮೀಕ್ಷೆಯು ರಾಜ್ಯದ ಪ್ರಗತಿಗೆ ದಾರಿ ಮಾಡಿಕೊಡಲಿದೆ. ಯಾರೊಬ್ಬರೂ ಅಪಸ್ವರ ಮಾಡದೇ ಪಾಲ್ಗೊಳ್ಳಬೇಕು. ಯಾವುದೇ ರಾಜ್ಯ ಅಭಿವೃದ್ಧಿ ಕಾಣಬೇಕಾದರೆ ಅಲ್ಲಿನ ಜನರ ಸ್ಥಿತಿಗತಿ ಅರಿತುಕೊಳ್ಳಬೇಕು. ಸಮುದಾಯಗಳ ಜನಸಂಖ್ಯೆ, ಹಿಂದುಳಿದಿರುವಿಕೆ ಮಾಹಿತಿಯ ಅಗತ್ಯವಿದೆ. ಅ. 18ರವರೆಗೆ ಸಮೀಕ್ಷೆ ವಿಸ್ತರಣೆ ಮಾಡಿರುವುದು ಉತ್ತಮ ನಡೆಯಾಗಿದೆ’ ಎಂದರು.</p>.<p>‘ಕೆಲ ಸಂಘಟನೆಗಳು ಎಚ್.ಸಿ.ಮಹಾದೇವಪ್ಪ ಸೇರಿ ವಿವಿಧ ಮಂತ್ರಿಗಳ ಮನೆಗಳಿಗೆ ಮುತ್ತಿಗೆ ಹಾಕುವುದಾಗಿ ಹೇಳುತ್ತಿರುವುದು ಸರಿಯಲ್ಲ. ಈ ಹಿಂದೆ ಕಾಂತರಾಜ್ ಆಯೋಗ ವೈಜ್ಞಾನಿಕ ವರದಿ ನೀಡಿತ್ತು. ಆದರೆ, 10 ವರ್ಷ ಹಳೆಯದ್ದಾಗಿದೆ ಎಂಬ ಆರೋಪ ಕೇಳಿಬಂದ ಕಾರಣ ಮತ್ತೊಮ್ಮೆ ಸಮೀಕ್ಷೆ ನಡೆಯುತ್ತಿದೆ. ಈ ಕಾರ್ಯಕ್ಕೆ ಆರಂಭದಲ್ಲಿ ಕೆಲವರು ವಿರೋಧ ವ್ಯಕ್ತಪಡಿಸಿದ್ದರು. ಆದರೆ, ಈಗ ವಾಸ್ತವತೆ ಅರಿತು ಎಲ್ಲರೂ ಪಾಲ್ಗೊಳ್ಳುತ್ತಿರುವುದು ಸ್ವಾಗತರ್ಹ ನಡೆ’ ಎಂದರು.</p>.<p>‘ದಕ್ಷಿಣ ಕನ್ನಡ ಭಾಗದಲ್ಲಿ ಎಡಿ ಜಾತಿ ಸೂಚಕ ಜನರನ್ನು ಬಿ ಗುಂಪಿನಲ್ಲಿ ಗುರುತಿಸಲಾಗಿದೆ. ಒಳಮೀಸಲಾತಿ ವಿಷಯದಲ್ಲಿ ಯಾವುದೇ ಗೊಂದಲಗಳು ಇಲ್ಲ. ಅನಗತ್ಯವಾಗಿ ಸುಳ್ಳು ವದಂತಿಗಳಿಗೆ ಕಿವಿಗೊಡದೆ ಮೀಸಲು ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಲು ಮುಂದಾಗಬೇಕು. ಮಕ್ಕಳನ್ನು ಶಿಕ್ಷಣವಂತರನ್ನಾಗಿಸಿ, ಉದ್ಯೋಗಸ್ಥರನ್ನಾಗಿ ಮಾಡಲು ಶ್ರಮಿಸಬೇಕು’ ಎಂದರು.</p>.<p>‘ಕಾಡುಗೊಲ್ಲರು ಈಗ ಜಾಗೃತಗೊಂಡಿದ್ದು, ಅವರು ಜಾತಿ ಕಲಂನಲ್ಲಿ ಕಾಡುಗೊಲ್ಲ ಎಂದೇ ಬರೆಸುವಂತೆ ಜಾಗೃತಿ ಮೂಡಿಸುತ್ತಿದ್ದಾರೆ. ಅವರ ಈ ಕಾರ್ಯ ಸ್ವಾಗತರ್ಹ. ಸಮೀಕ್ಷೆ ಕಾರ್ಯದಲ್ಲಿ ಸಮುದಾಯಗಳ ಪ್ರತಿಯೊಬ್ಬ ವ್ಯಕ್ತಿಯೂ ಪಾಲ್ಗೊಳ್ಳಬೇಕು. ಹಳ್ಳಿ, ಕೊಳೆಗೇರಿ, ಮಾದಿಗರ ಹಟ್ಟಿಗಳಿಗೆ ತೆರಳಿ ಜಾಗೃತಿ ಮೂಡಿಸಬೇಕು’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಗೀತಾ ನಂದಿನಿಗೌಡ, ಮಾಜಿ ಸದಸ್ಯ ಆರ್.ನರಸಿಂಹರಾಜು, ಲಿಡ್ಕರ್ ಮಾಜಿ ಅಧ್ಯಕ್ಷ ಒ.ಶಂಕರ್, ವಕೀಲರಾದ ಶರಣಪ್ಪ, ಸಿ.ಎಸ್.ರವೀಂದ್ರ, ಅನಿಲ್ ಕೋಟಿ, ಚೇತನ್ ಎಚ್.ಬೋರೇನಹಳ್ಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ‘ಪರಿಶಿಷ್ಟ ಜಾತಿ ಸಮೀಕ್ಷೆಯಲ್ಲಿ ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ಎಂದು ಬರೆಸಿರುವವರು ಒಳಮೀಸಲಾತಿಯ ಲಾಭ ಪಡೆಯಲು ಕಡ್ಡಾಯವಾಗಿ ಜಾತಿ ಘೋಷಣೆ ಮಾಡಿಕೊಳ್ಳಬೇಕಿದೆ. ಹೊಲೆಯ– ಮಾದಿಗ ಸಮುದಾಯದವರು ಅದಲು–ಬದಲಾಗದಂತೆ ಎಚ್ಚರಿಕೆ ವಹಿಸಬೇಕಾಗಿದೆ’ ಎಂದು ಕೆಪಿಸಿಸಿ ಉಪಾಧ್ಯಕ್ಷ ಎಚ್.ಆಂಜನೇಯ ಹೇಳಿದರು.</p>.<p>‘ಜಾತಿ ಸೂಚಕ ವರ್ಗದಲ್ಲಿ ಎಕೆ, ಎಡಿ, ಎಎ ಎಂದು ಗುರುತಿಸಿಕೊಂಡವರು ‘ಎ’ ಅಥವಾ ‘ಬಿ’ ಗುಂಪಿನಲ್ಲಿ ಗುರುತಿಸಿಕೊಳ್ಳಬೇಕಾಗಿದೆ. ಈ ಪ್ರಕ್ರಿಯೆಯಲ್ಲಿ ಬೇರೆಯವರು ಕಳ್ಳದಾರಿಯಲ್ಲಿ ನಮ್ಮ ‘ಬಿ’ ಗುಂಪಿಗೆ ಪ್ರವೇಶಿಸಿದರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಅವರಿಗೆ ಶಿಕ್ಷೆಯಾಗುವವರೆಗೂ ಹೋರಾಟ ನಡೆಸುತ್ತೇವೆ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು.</p>.<p>‘ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬದ್ಧತೆಯಿಂದ ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆ ನಡೆಸುತ್ತಿದೆ. ಈ ಸಮೀಕ್ಷೆಯು ರಾಜ್ಯದ ಪ್ರಗತಿಗೆ ದಾರಿ ಮಾಡಿಕೊಡಲಿದೆ. ಯಾರೊಬ್ಬರೂ ಅಪಸ್ವರ ಮಾಡದೇ ಪಾಲ್ಗೊಳ್ಳಬೇಕು. ಯಾವುದೇ ರಾಜ್ಯ ಅಭಿವೃದ್ಧಿ ಕಾಣಬೇಕಾದರೆ ಅಲ್ಲಿನ ಜನರ ಸ್ಥಿತಿಗತಿ ಅರಿತುಕೊಳ್ಳಬೇಕು. ಸಮುದಾಯಗಳ ಜನಸಂಖ್ಯೆ, ಹಿಂದುಳಿದಿರುವಿಕೆ ಮಾಹಿತಿಯ ಅಗತ್ಯವಿದೆ. ಅ. 18ರವರೆಗೆ ಸಮೀಕ್ಷೆ ವಿಸ್ತರಣೆ ಮಾಡಿರುವುದು ಉತ್ತಮ ನಡೆಯಾಗಿದೆ’ ಎಂದರು.</p>.<p>‘ಕೆಲ ಸಂಘಟನೆಗಳು ಎಚ್.ಸಿ.ಮಹಾದೇವಪ್ಪ ಸೇರಿ ವಿವಿಧ ಮಂತ್ರಿಗಳ ಮನೆಗಳಿಗೆ ಮುತ್ತಿಗೆ ಹಾಕುವುದಾಗಿ ಹೇಳುತ್ತಿರುವುದು ಸರಿಯಲ್ಲ. ಈ ಹಿಂದೆ ಕಾಂತರಾಜ್ ಆಯೋಗ ವೈಜ್ಞಾನಿಕ ವರದಿ ನೀಡಿತ್ತು. ಆದರೆ, 10 ವರ್ಷ ಹಳೆಯದ್ದಾಗಿದೆ ಎಂಬ ಆರೋಪ ಕೇಳಿಬಂದ ಕಾರಣ ಮತ್ತೊಮ್ಮೆ ಸಮೀಕ್ಷೆ ನಡೆಯುತ್ತಿದೆ. ಈ ಕಾರ್ಯಕ್ಕೆ ಆರಂಭದಲ್ಲಿ ಕೆಲವರು ವಿರೋಧ ವ್ಯಕ್ತಪಡಿಸಿದ್ದರು. ಆದರೆ, ಈಗ ವಾಸ್ತವತೆ ಅರಿತು ಎಲ್ಲರೂ ಪಾಲ್ಗೊಳ್ಳುತ್ತಿರುವುದು ಸ್ವಾಗತರ್ಹ ನಡೆ’ ಎಂದರು.</p>.<p>‘ದಕ್ಷಿಣ ಕನ್ನಡ ಭಾಗದಲ್ಲಿ ಎಡಿ ಜಾತಿ ಸೂಚಕ ಜನರನ್ನು ಬಿ ಗುಂಪಿನಲ್ಲಿ ಗುರುತಿಸಲಾಗಿದೆ. ಒಳಮೀಸಲಾತಿ ವಿಷಯದಲ್ಲಿ ಯಾವುದೇ ಗೊಂದಲಗಳು ಇಲ್ಲ. ಅನಗತ್ಯವಾಗಿ ಸುಳ್ಳು ವದಂತಿಗಳಿಗೆ ಕಿವಿಗೊಡದೆ ಮೀಸಲು ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಲು ಮುಂದಾಗಬೇಕು. ಮಕ್ಕಳನ್ನು ಶಿಕ್ಷಣವಂತರನ್ನಾಗಿಸಿ, ಉದ್ಯೋಗಸ್ಥರನ್ನಾಗಿ ಮಾಡಲು ಶ್ರಮಿಸಬೇಕು’ ಎಂದರು.</p>.<p>‘ಕಾಡುಗೊಲ್ಲರು ಈಗ ಜಾಗೃತಗೊಂಡಿದ್ದು, ಅವರು ಜಾತಿ ಕಲಂನಲ್ಲಿ ಕಾಡುಗೊಲ್ಲ ಎಂದೇ ಬರೆಸುವಂತೆ ಜಾಗೃತಿ ಮೂಡಿಸುತ್ತಿದ್ದಾರೆ. ಅವರ ಈ ಕಾರ್ಯ ಸ್ವಾಗತರ್ಹ. ಸಮೀಕ್ಷೆ ಕಾರ್ಯದಲ್ಲಿ ಸಮುದಾಯಗಳ ಪ್ರತಿಯೊಬ್ಬ ವ್ಯಕ್ತಿಯೂ ಪಾಲ್ಗೊಳ್ಳಬೇಕು. ಹಳ್ಳಿ, ಕೊಳೆಗೇರಿ, ಮಾದಿಗರ ಹಟ್ಟಿಗಳಿಗೆ ತೆರಳಿ ಜಾಗೃತಿ ಮೂಡಿಸಬೇಕು’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಗೀತಾ ನಂದಿನಿಗೌಡ, ಮಾಜಿ ಸದಸ್ಯ ಆರ್.ನರಸಿಂಹರಾಜು, ಲಿಡ್ಕರ್ ಮಾಜಿ ಅಧ್ಯಕ್ಷ ಒ.ಶಂಕರ್, ವಕೀಲರಾದ ಶರಣಪ್ಪ, ಸಿ.ಎಸ್.ರವೀಂದ್ರ, ಅನಿಲ್ ಕೋಟಿ, ಚೇತನ್ ಎಚ್.ಬೋರೇನಹಳ್ಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>