ತಪ್ಪದ ಆತಂಕ: ‘ಹಿಂದಿನ ಹತ್ತು ದಿನದ ಅಂತರದಲ್ಲಿ 15ಕ್ಕೂ ಹೆಚ್ಚು ಸಾಕು ನಾಯಿಗಳನ್ನು, ಆರೇಳು ಕುರಿ ಮತ್ತು ಮೇಕೆ ಮರಿಗಳನ್ನು ಚಿರತೆ ತಿಂದು ಹಾಕಿತ್ತು. ಇದಲ್ಲದೆ ದೊಡ್ಡ ಹೆಣ್ಣು ಚಿರತೆ ಸೇರಿ ಇನ್ನೂ ಮೂರ್ನಾಲ್ಕು ಚಿರತೆಗಳಿವೆ. ಗಂಡು ಚಿರತೆಯನ್ನು ಸೆರೆ ಹಿಡಿದಿರುವ ಕಾರಣ ಉಳಿದಿರುವ ಚಿರತೆಗಳು ಎಲ್ಲಿ ಮನುಷ್ಯರ ಮೇಲೆ ದಾಳಿ ಮಾಡುತ್ತವೋ ಎಂದು ಭಯವಾಗುತ್ತಿದೆ’ ಎಂದು ಅರಣ್ಯದ ಅಂಚಿನ ಪ್ರದೇಶದ ನಿವಾಸಿ ರೈತ ಪರಶಿವಮೂರ್ತಿ ಆತಂಕ ವ್ಯಕ್ತಪಡಿಸಿದರು.