<p><strong>ಚಳ್ಳಕೆರೆ:</strong> ಮದ್ಯ ಅಕ್ರಮ ಮಾರಾಟ ನಿಷೇಧಕ್ಕೆ ಆಗ್ರಹಿಸಿ ತಾಲ್ಲೂಕಿನ ಪರಶುರಾಂಪುರ ಸಮೀಪದ ಟಿ.ಎನ್.ಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಮರಿಕಪಿಲೆ ಹಾಗೂ ಹೊನ್ನಯ್ಯನ ರೊಪ್ಪ ಗ್ರಾಮದ ಮಹಿಳೆಯರು ತಾಲ್ಲೂಕು ಕಚೇರಿಗೆ ಮನವಿ ಸಲ್ಲಿಸಿದರು.</p>.<p>ಗೂಡಂಗಡಿಗಳಲ್ಲಿ ನಿರಂತರವಾಗಿ ಮದ್ಯ ಮಾರಾಟವಾಗುತ್ತಿದ್ದು, ಗ್ರಾಮದ ಯುವಕರು ವ್ಯಸನಿಗಳಾಗುತ್ತಿದ್ದಾರೆ. ಹಲವು ಕುಟುಂಬಗಳು ಬೀದಿಪಾಲಾಗಿವೆ. ಕುಡಿದ ಅಮಲಿನಲ್ಲಿ ಮಹಿಳೆ, ಮಕ್ಕಳಿಗೆ ಮನಬಂದಂತೆ ನಿಂದಿಸುತ್ತಾರೆ ಎಂದು ಭದ್ರಮ್ಮ ಎಂಬವರು ಆರೋಪಿಸಿದರು. </p>.<p>ಮದ್ಯ ಅಕ್ರಮ ಮಾರಾಟ ಮಾಡುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದರ ಜತೆಗೆ ಅಂಗಡಿಯನ್ನು ಬಂದ್ ಮಾಡಬೇಕು ಎಂದು ಗ್ರಾಮದ ಮಹಿಳೆ ಅನಸೂಯಮ್ಮ ಒತ್ತಾಯಿಸಿದರು.</p>.<p>ಅಕ್ರಮ ಅಂಗಡಿ ಮಾಲೀಕರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ತಹಶೀಲ್ದಾರ್ ರೆಹಾನ್ ಪಾಷ ಎಚ್ಚರಿಕೆ ನೀಡಿದರು. ಅಕ್ರಮ ಮದ್ಯದಂಗಡಿಗಳನ್ನು ಬಂದ್ ಮಾಡುವಂತೆ ಪಿಡಿಒಗೆ ಸೂಚಿಸಲಾಗುವುದು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಚ್.ಶಶಿಧರ್ ಭರವಸೆ ನೀಡಿದರು. </p>.<p>ಸಿರಾದ ಕಪಿಲೆ ಗ್ರಾಮದ ಭಾರ್ಗವಿ, ತಿಮ್ಮರಾಯ, ಸುನೀತ, ಪುಷ್ಪಾ, ಯಶೋಧ, ವಿನೋದ, ಗೋವಿಂದರಾಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಳ್ಳಕೆರೆ:</strong> ಮದ್ಯ ಅಕ್ರಮ ಮಾರಾಟ ನಿಷೇಧಕ್ಕೆ ಆಗ್ರಹಿಸಿ ತಾಲ್ಲೂಕಿನ ಪರಶುರಾಂಪುರ ಸಮೀಪದ ಟಿ.ಎನ್.ಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಮರಿಕಪಿಲೆ ಹಾಗೂ ಹೊನ್ನಯ್ಯನ ರೊಪ್ಪ ಗ್ರಾಮದ ಮಹಿಳೆಯರು ತಾಲ್ಲೂಕು ಕಚೇರಿಗೆ ಮನವಿ ಸಲ್ಲಿಸಿದರು.</p>.<p>ಗೂಡಂಗಡಿಗಳಲ್ಲಿ ನಿರಂತರವಾಗಿ ಮದ್ಯ ಮಾರಾಟವಾಗುತ್ತಿದ್ದು, ಗ್ರಾಮದ ಯುವಕರು ವ್ಯಸನಿಗಳಾಗುತ್ತಿದ್ದಾರೆ. ಹಲವು ಕುಟುಂಬಗಳು ಬೀದಿಪಾಲಾಗಿವೆ. ಕುಡಿದ ಅಮಲಿನಲ್ಲಿ ಮಹಿಳೆ, ಮಕ್ಕಳಿಗೆ ಮನಬಂದಂತೆ ನಿಂದಿಸುತ್ತಾರೆ ಎಂದು ಭದ್ರಮ್ಮ ಎಂಬವರು ಆರೋಪಿಸಿದರು. </p>.<p>ಮದ್ಯ ಅಕ್ರಮ ಮಾರಾಟ ಮಾಡುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದರ ಜತೆಗೆ ಅಂಗಡಿಯನ್ನು ಬಂದ್ ಮಾಡಬೇಕು ಎಂದು ಗ್ರಾಮದ ಮಹಿಳೆ ಅನಸೂಯಮ್ಮ ಒತ್ತಾಯಿಸಿದರು.</p>.<p>ಅಕ್ರಮ ಅಂಗಡಿ ಮಾಲೀಕರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ತಹಶೀಲ್ದಾರ್ ರೆಹಾನ್ ಪಾಷ ಎಚ್ಚರಿಕೆ ನೀಡಿದರು. ಅಕ್ರಮ ಮದ್ಯದಂಗಡಿಗಳನ್ನು ಬಂದ್ ಮಾಡುವಂತೆ ಪಿಡಿಒಗೆ ಸೂಚಿಸಲಾಗುವುದು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಚ್.ಶಶಿಧರ್ ಭರವಸೆ ನೀಡಿದರು. </p>.<p>ಸಿರಾದ ಕಪಿಲೆ ಗ್ರಾಮದ ಭಾರ್ಗವಿ, ತಿಮ್ಮರಾಯ, ಸುನೀತ, ಪುಷ್ಪಾ, ಯಶೋಧ, ವಿನೋದ, ಗೋವಿಂದರಾಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>