ಚಳ್ಳಕೆರೆ: ಖಚಿತ ಮಾಹಿತಿ ಮೇರೆಗೆ ಡಿವೈಎಸ್ಪಿ ಟಿ.ಬಿ.ರಾಜಣ್ಣ ಅವರ ಮಾರ್ಗದರ್ಶದಲ್ಲಿ ಪೊಲೀಸರು ಬುಧವಾರ ದಾಳಿ ನಡೆಸಿ ತಾಲ್ಲೂಕಿನ ನಗರಂಗೆರೆ ಗ್ರಾಮದ ಬಳಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ.
ಸರ್ಕಾರದಿಂದ ಪರವಾನಗಿ ಪಡೆಯದೇ ಹಳ್ಳದ ಮರಳನ್ನು ಲಾರಿಯ ಮೂಲಕ ಅಕ್ರಮವಾಗಿ ಸಾಗಿಸುತ್ತಿದ್ದರು. ಹೀಗಾಗಿ ಲಾರಿ ಮಾಲೀಕ ಹಾಗೂ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ನಿರೀಕ್ಷಕ ಕೆ.ಕುಮಾರ್ ತಿಳಿಸಿದ್ದಾರೆ.