<p><strong>ಚಳ್ಳಕೆರೆ</strong>: ತಾಲ್ಲೂಕಿನ ಟಿ.ಎನ್. ಕೋಟಿ ಗ್ರಾಮದಲ್ಲಿ ಒತ್ತುವರಿಯಾಗಿರುವ ಸರ್ಕಾರಿ ಭೂಮಿ ತೆರವಿಗೆ ಆಗ್ರಹಿಸಿ ಗ್ರಾಮಸ್ಥರು ಸರ್ಕಾರ ಮತ್ತು ಅಧಿಕಾರಿಗಳ ವಿರುದ್ಧ ಘೊಷಣೆ ಕೂಗುತ್ತ ಸೋಮವಾರ ತಾಲ್ಲೂಕು ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು.</p>.<p>ನೇತೃತ್ವವಹಿಸಿದ್ದ ಗ್ರಾಮ ಪಂಚಾಯಿತಿ ಸದಸ್ಯ ಓಂಕಾರಮೂರ್ತಿ ಮಾತನಾಡಿ, ‘ಗ್ರಾಮದ ರಿಸನಂ 70ರಲ್ಲಿ 54.2 ಎಕರೆ, 71ರಲ್ಲಿ 23.37 ಎಕರೆ, 72ರಲ್ಲಿ 12.33ಎಕರೆ, 45ರಲ್ಲಿ 45.5 ಎಕರೆ ಸೇರಿ ಒಟ್ಟು 137.30 ಎಕರೆ ಪ್ರದೇಶ ಒತ್ತುವರಿಯಾಗಿದೆ. ಒತ್ತುವರಿ ಜಾಗ ತೆರವಿಗೆ ಆಗ್ರಹಿಸಿ 3– 4 ಬಾರಿ ಮನವಿ ಸಲ್ಲಿಸಿದ್ದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ತಿಪ್ಪೇಸ್ವಾಮಿ ಮಾತನಾಡಿ, ‘ಸರ್ಕಾರಿ ಜಾಗ ಒತ್ತುವರಿಯಾಗದಂತೆ ಎಚ್ಚರಿಕೆವಹಿಸಿ ಅದನ್ನು ಸಂರಕ್ಷಣೆ ಮಾಡುವುದು ಅಧಿಕಾರಿಗಳ ಕರ್ತವ್ಯ. ಈ ಬಗ್ಗೆ ಗಮನಕ್ಕೆ ತಂದಿದ್ದರೂ ತೆರವುಗೊಳಿಸುವಲ್ಲಿ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯವಹಿಸುತ್ತಿದ್ದಾರೆ. ಒತ್ತುವರಿಯಾಗಿರುವ ಸರ್ಕಾರಿ ಭೂಮಿಯನ್ನು ಕೂಡಲೆ ತೆರವುಗೊಳಿಸುವ ಮೂಲಕ ಗ್ರಾಮದ ವಸತಿ ರಹಿತ ಕುಟುಂಬಕ್ಕೆ ನಿವೇಶನ ನೀಡಲು ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಮಾಡಿದರು.</p>.<p>ಮನವಿ ಪರಿಶೀಲಿಸಿದ ತಹಶೀಲ್ದಾರ್ ರೇಹಾನ್ಪಾಷ, ಸರ್ಕಾರಿ ಭೂಮಿ ಒತ್ತುವರಿ ತೆರವುಗೊಳಿಸಿ ಆಶ್ರಯ ಯೋಜನೆಯಡಿ ನಿವೇಶನಕ್ಕಾಗಿ ಮೀಸಲಿರಿಸಲಾಗುವುದು. ಗ್ರಾಮದ ವಸತಿರಹಿತ ಕುಟುಂಬಗಳು ಬೇಡಿಕೆ ಸಲ್ಲಿಸಿದಲ್ಲಿ ಜಿಲ್ಲಾಧಿಕಾರಿ ಮಾರ್ಗದರ್ಶನದಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ ಸೌಲಭ್ಯ ಒದಗಿಸಲಾಗುವುದು ಎಂದು ತಹಶೀಲ್ದಾರ್ ರೇಹಾನ್ಪಾಷ ಭರವಸೆ ನೀಡಿದರು.</p>.<p>ಗ್ರಾಮದ ಮುಖಂಡ ನಾಗರಾಜ, ತಿಪ್ಪೇಸ್ವಾಮಿ, ಮಂಜುನಾಥ್, ತಿಮ್ಮಣ್ಣ, ಗಂಗಾಧರ, ಸತೀಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಳ್ಳಕೆರೆ</strong>: ತಾಲ್ಲೂಕಿನ ಟಿ.ಎನ್. ಕೋಟಿ ಗ್ರಾಮದಲ್ಲಿ ಒತ್ತುವರಿಯಾಗಿರುವ ಸರ್ಕಾರಿ ಭೂಮಿ ತೆರವಿಗೆ ಆಗ್ರಹಿಸಿ ಗ್ರಾಮಸ್ಥರು ಸರ್ಕಾರ ಮತ್ತು ಅಧಿಕಾರಿಗಳ ವಿರುದ್ಧ ಘೊಷಣೆ ಕೂಗುತ್ತ ಸೋಮವಾರ ತಾಲ್ಲೂಕು ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು.</p>.<p>ನೇತೃತ್ವವಹಿಸಿದ್ದ ಗ್ರಾಮ ಪಂಚಾಯಿತಿ ಸದಸ್ಯ ಓಂಕಾರಮೂರ್ತಿ ಮಾತನಾಡಿ, ‘ಗ್ರಾಮದ ರಿಸನಂ 70ರಲ್ಲಿ 54.2 ಎಕರೆ, 71ರಲ್ಲಿ 23.37 ಎಕರೆ, 72ರಲ್ಲಿ 12.33ಎಕರೆ, 45ರಲ್ಲಿ 45.5 ಎಕರೆ ಸೇರಿ ಒಟ್ಟು 137.30 ಎಕರೆ ಪ್ರದೇಶ ಒತ್ತುವರಿಯಾಗಿದೆ. ಒತ್ತುವರಿ ಜಾಗ ತೆರವಿಗೆ ಆಗ್ರಹಿಸಿ 3– 4 ಬಾರಿ ಮನವಿ ಸಲ್ಲಿಸಿದ್ದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ತಿಪ್ಪೇಸ್ವಾಮಿ ಮಾತನಾಡಿ, ‘ಸರ್ಕಾರಿ ಜಾಗ ಒತ್ತುವರಿಯಾಗದಂತೆ ಎಚ್ಚರಿಕೆವಹಿಸಿ ಅದನ್ನು ಸಂರಕ್ಷಣೆ ಮಾಡುವುದು ಅಧಿಕಾರಿಗಳ ಕರ್ತವ್ಯ. ಈ ಬಗ್ಗೆ ಗಮನಕ್ಕೆ ತಂದಿದ್ದರೂ ತೆರವುಗೊಳಿಸುವಲ್ಲಿ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯವಹಿಸುತ್ತಿದ್ದಾರೆ. ಒತ್ತುವರಿಯಾಗಿರುವ ಸರ್ಕಾರಿ ಭೂಮಿಯನ್ನು ಕೂಡಲೆ ತೆರವುಗೊಳಿಸುವ ಮೂಲಕ ಗ್ರಾಮದ ವಸತಿ ರಹಿತ ಕುಟುಂಬಕ್ಕೆ ನಿವೇಶನ ನೀಡಲು ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಮಾಡಿದರು.</p>.<p>ಮನವಿ ಪರಿಶೀಲಿಸಿದ ತಹಶೀಲ್ದಾರ್ ರೇಹಾನ್ಪಾಷ, ಸರ್ಕಾರಿ ಭೂಮಿ ಒತ್ತುವರಿ ತೆರವುಗೊಳಿಸಿ ಆಶ್ರಯ ಯೋಜನೆಯಡಿ ನಿವೇಶನಕ್ಕಾಗಿ ಮೀಸಲಿರಿಸಲಾಗುವುದು. ಗ್ರಾಮದ ವಸತಿರಹಿತ ಕುಟುಂಬಗಳು ಬೇಡಿಕೆ ಸಲ್ಲಿಸಿದಲ್ಲಿ ಜಿಲ್ಲಾಧಿಕಾರಿ ಮಾರ್ಗದರ್ಶನದಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ ಸೌಲಭ್ಯ ಒದಗಿಸಲಾಗುವುದು ಎಂದು ತಹಶೀಲ್ದಾರ್ ರೇಹಾನ್ಪಾಷ ಭರವಸೆ ನೀಡಿದರು.</p>.<p>ಗ್ರಾಮದ ಮುಖಂಡ ನಾಗರಾಜ, ತಿಪ್ಪೇಸ್ವಾಮಿ, ಮಂಜುನಾಥ್, ತಿಮ್ಮಣ್ಣ, ಗಂಗಾಧರ, ಸತೀಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>