<p><strong>ಚಳ್ಳಕೆರೆ</strong>: ನಿವೇಶನ, ವಸತಿ, ದಾರಿ, ಸ್ಮಶಾನ ಭೂಮಿ ಮಂಜೂರು ಮುಂತಾದ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ವಿಮೋಚನಾ ಮಾನವ ಹಕ್ಕುಗಳ ವೇದಿಕೆ ಮತ್ತು ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ತಾಲ್ಲೂಕು ಕಚೇರಿ ಮುಂದೆ ಸೋಮವಾರ ಧರಣಿ ನಡೆಸಿದರು.</p>.<p>ತಾಲ್ಲೂಕಿನ ಯಲಗಟ್ಟೆ ಗ್ರಾಮದ ರಿಸನಂ 24ರಲ್ಲಿ 2 ಎಕರೆ ಸರ್ಕಾರಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ದಲಿತ ಕುಟುಂಬಗಳಿಗೆ ನಿವೇಶನ ನೀಡುವುದರ ಜತೆಗೆ ವಸತಿ ನಿರ್ಮಿಸಿಕೊಡಬೇಕು ಎಂದು ಒತ್ತಾಯಿಸಿದರು.</p>.<p>ನಾಯಕನಹಟ್ಟಿ ಹೋಬಳಿ ವ್ಯಾಪ್ತಿಯ ರಾಮದುರ್ಗ ಗ್ರಾಮದ ಮಹಿಳೆ ದುರುಗಮ್ಮ ಅವರ 40 ಗ್ರಾಂ ಚಿನ್ನ ಕಳವಾಗಿದ್ದು, ಅದನ್ನು ಪತ್ತೆ ಹಚ್ಚಬೇಕು. ಗೊರ್ಲಕಟ್ಟೆ ಗ್ರಾಮದಲ್ಲಿ ಅತಿಕ್ರಮಣ ಮಾಡಿರುವ ದಲಿತ ಕುಟುಂಬದ ನಿವೇಶನ ಬಿಡಿಸಿಕೊಡಬೇಕು ಎಂದು ಜಿಲ್ಲಾ ಸಂಚಾಲಕಿ ಪಿ.ರೇಣುಕಮ್ಮ ಮನವಿ ಮಾಡಿದರು.</p>.<p>ಚಿಕ್ಕಮ್ಮನಹಳ್ಳಿ ಗ್ರಾಮದ ರಿಸನಂ 13ರಲ್ಲಿ ಒತ್ತುವರಿಯಾಗಿರುವ ಸ್ಮಶಾನ ಜಾಗವನ್ನು ಕೂಡಲೇ ತೆರವುಗೊಳಿಸಬೇಕು. ಗ್ರಾಮದ ದರ್ಕಾಸ್ತು ಭೂಮಿಯಲ್ಲಿ ಓಡಾಡಲು ದಲಿತರಿಗೆ ದಾರಿ ಮಾಡಿಕೊಡಬೇಕು ಎಂದು ಎನ್.ಪ್ರಕಾಶ್ ಆಗ್ರಹಿಸಿದರು.</p>.<p>ಜಿಲ್ಲಾ ಸಂಚಾಲಕ ಎನ್.ಪ್ರಕಾಶ್, ಪಿ.ಜಯಣ್ಣ, ಮಾರುತಿ, ಮಂಜುನಾಥ್ ಮಾತನಾಡಿದರು. ತಾಲ್ಲೂಕು ಘಟಕದ ಸಂಚಾಲಕ ಬಿ.ಓ.ತಿರುಮಲೇಶ್, ಎಂ.ರಾಜಣ್ಣ, ಬೂದಿಹಳ್ಳಿ ಸತೀಶ್, ಪಾತಲಿಂಗಪ್ಪ, ಗೊರ್ಲಕಟ್ಟೆ ಮೈಲಾರಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಳ್ಳಕೆರೆ</strong>: ನಿವೇಶನ, ವಸತಿ, ದಾರಿ, ಸ್ಮಶಾನ ಭೂಮಿ ಮಂಜೂರು ಮುಂತಾದ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ವಿಮೋಚನಾ ಮಾನವ ಹಕ್ಕುಗಳ ವೇದಿಕೆ ಮತ್ತು ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ತಾಲ್ಲೂಕು ಕಚೇರಿ ಮುಂದೆ ಸೋಮವಾರ ಧರಣಿ ನಡೆಸಿದರು.</p>.<p>ತಾಲ್ಲೂಕಿನ ಯಲಗಟ್ಟೆ ಗ್ರಾಮದ ರಿಸನಂ 24ರಲ್ಲಿ 2 ಎಕರೆ ಸರ್ಕಾರಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ದಲಿತ ಕುಟುಂಬಗಳಿಗೆ ನಿವೇಶನ ನೀಡುವುದರ ಜತೆಗೆ ವಸತಿ ನಿರ್ಮಿಸಿಕೊಡಬೇಕು ಎಂದು ಒತ್ತಾಯಿಸಿದರು.</p>.<p>ನಾಯಕನಹಟ್ಟಿ ಹೋಬಳಿ ವ್ಯಾಪ್ತಿಯ ರಾಮದುರ್ಗ ಗ್ರಾಮದ ಮಹಿಳೆ ದುರುಗಮ್ಮ ಅವರ 40 ಗ್ರಾಂ ಚಿನ್ನ ಕಳವಾಗಿದ್ದು, ಅದನ್ನು ಪತ್ತೆ ಹಚ್ಚಬೇಕು. ಗೊರ್ಲಕಟ್ಟೆ ಗ್ರಾಮದಲ್ಲಿ ಅತಿಕ್ರಮಣ ಮಾಡಿರುವ ದಲಿತ ಕುಟುಂಬದ ನಿವೇಶನ ಬಿಡಿಸಿಕೊಡಬೇಕು ಎಂದು ಜಿಲ್ಲಾ ಸಂಚಾಲಕಿ ಪಿ.ರೇಣುಕಮ್ಮ ಮನವಿ ಮಾಡಿದರು.</p>.<p>ಚಿಕ್ಕಮ್ಮನಹಳ್ಳಿ ಗ್ರಾಮದ ರಿಸನಂ 13ರಲ್ಲಿ ಒತ್ತುವರಿಯಾಗಿರುವ ಸ್ಮಶಾನ ಜಾಗವನ್ನು ಕೂಡಲೇ ತೆರವುಗೊಳಿಸಬೇಕು. ಗ್ರಾಮದ ದರ್ಕಾಸ್ತು ಭೂಮಿಯಲ್ಲಿ ಓಡಾಡಲು ದಲಿತರಿಗೆ ದಾರಿ ಮಾಡಿಕೊಡಬೇಕು ಎಂದು ಎನ್.ಪ್ರಕಾಶ್ ಆಗ್ರಹಿಸಿದರು.</p>.<p>ಜಿಲ್ಲಾ ಸಂಚಾಲಕ ಎನ್.ಪ್ರಕಾಶ್, ಪಿ.ಜಯಣ್ಣ, ಮಾರುತಿ, ಮಂಜುನಾಥ್ ಮಾತನಾಡಿದರು. ತಾಲ್ಲೂಕು ಘಟಕದ ಸಂಚಾಲಕ ಬಿ.ಓ.ತಿರುಮಲೇಶ್, ಎಂ.ರಾಜಣ್ಣ, ಬೂದಿಹಳ್ಳಿ ಸತೀಶ್, ಪಾತಲಿಂಗಪ್ಪ, ಗೊರ್ಲಕಟ್ಟೆ ಮೈಲಾರಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>