<p><strong>ಚಳ್ಳಕೆರೆ:</strong> ಇಲ್ಲಿನ ವಾಲ್ಮೀಕಿ ನಗರದ ಬಳಿ ಸ್ಮಶಾನ ಜಾಗ ಒತ್ತುವರಿಯಾಗಿರುವುದನ್ನು ತೆರವುಗೊಳಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ನಾಗರಿಕರು ಅಧಿಕಾರಿಗಳನ್ನು ಆಗ್ರಹಿಸಿದರು. </p>.<p>ಸ್ಮಶಾನಕ್ಕಾಗಿ ಮೀಸಲಿರಿಸಿದ 10 ಎಕರೆ ಪ್ರದೇಶದಲ್ಲಿ 5 ಎಕರೆ ಒತ್ತುವರಿ ಮಾಡಿ ಮುಳ್ಳು ತಂತಿ ಹಾಗೂ ಕಳ್ಳಿ ಬೇಲಿ ನಿರ್ಮಿಸಲಾಗಿದೆ. ಇದರಿಂದ ಶವಸಂಸ್ಕಾರ ನಡೆಸಲು ತೊಂದರೆಯಾಗಿದೆ ಎಂದು ನಗರಸಭೆ ಸದಸ್ಯೆ ಪಾಲಮ್ಮ ದೂರಿದರು. </p>.<p>ಸ್ಮಶಾನ ಜಾಗ ಒತ್ತುವರಿ ತೆರವಿಗೆ ಒತ್ತಾಯಿಸಿ 3-4 ಬಾರಿ ಮನವಿ ಸಲ್ಲಿಸಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ನಗರಸಭೆ ಮಾಜಿ ಉಪಾಧ್ಯಕ್ಷೆ ಸುಮಾ ಆಕ್ರೋಶ ವ್ಯಕ್ತಪಡಿಸಿದರು.</p>.<p>ನಿರ್ವಹಣೆ ಕೊರತೆಯಿಂದ ಸ್ಮಶಾನ ಜಾಗದ ರಕ್ಷಣೆಗೆ ಹಾಕಿದ್ದ ಮುಳ್ಳುತಂತಿ ಬೇಕಿ ಕಿತ್ತು ಹೋಗಿದೆ. ಅಳವಡಿಸಿದ್ದ ಕಬ್ಬಿಣದ ಸರಳಿನ ಗೇಟ್ ಮುರಿದು ಬಿದ್ದಿದೆ. ಮುಳ್ಳುಗಿಡಗಳು ಬೆಳೆದಿವೆ. ಸ್ಮಶಾನ ಜಾಗವನ್ನು ಸ್ವಚ್ಛಗೊಳಿಸಿ, ಹದ್ದುಬಸ್ತು ಮಾಡಬೇಕು ಎಂದು ಆಗ್ರಹಿಸಿದರು.</p>.<p>ವಾಲ್ಮೀಕಿ ನಗರದ ವಾಸಿ ಮಂಜುನಾಥ, ನಾಗರಾಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಳ್ಳಕೆರೆ:</strong> ಇಲ್ಲಿನ ವಾಲ್ಮೀಕಿ ನಗರದ ಬಳಿ ಸ್ಮಶಾನ ಜಾಗ ಒತ್ತುವರಿಯಾಗಿರುವುದನ್ನು ತೆರವುಗೊಳಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ನಾಗರಿಕರು ಅಧಿಕಾರಿಗಳನ್ನು ಆಗ್ರಹಿಸಿದರು. </p>.<p>ಸ್ಮಶಾನಕ್ಕಾಗಿ ಮೀಸಲಿರಿಸಿದ 10 ಎಕರೆ ಪ್ರದೇಶದಲ್ಲಿ 5 ಎಕರೆ ಒತ್ತುವರಿ ಮಾಡಿ ಮುಳ್ಳು ತಂತಿ ಹಾಗೂ ಕಳ್ಳಿ ಬೇಲಿ ನಿರ್ಮಿಸಲಾಗಿದೆ. ಇದರಿಂದ ಶವಸಂಸ್ಕಾರ ನಡೆಸಲು ತೊಂದರೆಯಾಗಿದೆ ಎಂದು ನಗರಸಭೆ ಸದಸ್ಯೆ ಪಾಲಮ್ಮ ದೂರಿದರು. </p>.<p>ಸ್ಮಶಾನ ಜಾಗ ಒತ್ತುವರಿ ತೆರವಿಗೆ ಒತ್ತಾಯಿಸಿ 3-4 ಬಾರಿ ಮನವಿ ಸಲ್ಲಿಸಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ನಗರಸಭೆ ಮಾಜಿ ಉಪಾಧ್ಯಕ್ಷೆ ಸುಮಾ ಆಕ್ರೋಶ ವ್ಯಕ್ತಪಡಿಸಿದರು.</p>.<p>ನಿರ್ವಹಣೆ ಕೊರತೆಯಿಂದ ಸ್ಮಶಾನ ಜಾಗದ ರಕ್ಷಣೆಗೆ ಹಾಕಿದ್ದ ಮುಳ್ಳುತಂತಿ ಬೇಕಿ ಕಿತ್ತು ಹೋಗಿದೆ. ಅಳವಡಿಸಿದ್ದ ಕಬ್ಬಿಣದ ಸರಳಿನ ಗೇಟ್ ಮುರಿದು ಬಿದ್ದಿದೆ. ಮುಳ್ಳುಗಿಡಗಳು ಬೆಳೆದಿವೆ. ಸ್ಮಶಾನ ಜಾಗವನ್ನು ಸ್ವಚ್ಛಗೊಳಿಸಿ, ಹದ್ದುಬಸ್ತು ಮಾಡಬೇಕು ಎಂದು ಆಗ್ರಹಿಸಿದರು.</p>.<p>ವಾಲ್ಮೀಕಿ ನಗರದ ವಾಸಿ ಮಂಜುನಾಥ, ನಾಗರಾಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>