ತಾಲ್ಲೂಕಿನಲ್ಲಿ ದುಃಸ್ಥಿತಿಯಲ್ಲಿರುವ ಶಾಲಾ ಕಟ್ಟಡಗಳನ್ನು ಗುರುತಿಸಲಾಗಿದ್ದು ಇಲಾಖೆಯಿಂದ ಅನುದಾನ ಬಂದ ತಕ್ಷಣ ದುರಸ್ತಿ ಮಾಡಲಾಗುವುದು. ಶಾಲೆಗೆ ಮೂಲ ಸೌಲಭ್ಯ ಒದಗಿಸಲಾಗುವುದು.
ಕೆ.ಎಸ್.ಸುರೇಶ್ ಕ್ಷೇತ್ರ ಶಿಕ್ಷಣಾಧಿಕಾರಿ
ದುರಸ್ತಿಗೆ ರೈತ ಸಂಘ ಆಗ್ರಹ
‘ಶಾಲಾ ಕಟ್ಟಡ ನಿರ್ಮಿಸಿ 60 ವರ್ಷ ಕಳೆದಿದ್ದು ಕೊಠಡಿಗಳು ಸಂಪೂರ್ಣವಾಗಿ ಶಿಥಿಲಗೊಂಡಿವೆ. ಹಳೆ ಕಟ್ಟಡ ನೆಲಸಮಗೊಳಿಸಿ ಹೊಸ ಕಟ್ಟಡ ನಿರ್ಮಾಣಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ. ಹೊಸ ಕಟ್ಟಡ ನಿರ್ಮಾಣಕ್ಕೆ ಮುಂದಾಗದಿದ್ದರೆ ಜಿಲ್ಲಾ ಶಿಕ್ಷಣಾಧಿಕಾರಿ ಕಚೇರಿಗೆ ಗ್ರಾಮಸ್ಥರೊಡನೆ ಮುತ್ತಿಗೆ ಹಾಕಲಾಗುವುದು’ ಎಂದು ರೈತ ಸಂಘದವರು ಎಚ್ಚರಿಸಿದ್ದಾರೆ.