<p><strong>ಚಳ್ಳಕೆರೆ</strong>: ತಾಲ್ಲೂಕಿನ ಜಡೇಕುಂಟೆ ಗ್ರಾಮದ ಮುಖ್ಯರಸ್ತೆಗೆ ಹೊಂದಿಕೊಂಡಂತೆ ನಿರ್ಮಿಸಿದ್ದ ಕಾಂಪೌಂಡ್ ಅನ್ನು ಜೆಸಿಬಿ ಯಂತ್ರದ ಮೂಲಕ ಸೋಮವಾರ ತೆರವುಗೊಳಿಸಲಾಯಿತು.</p>.<p>ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದ್ದ ಕಾರಣ, ತಹಶೀಲ್ದಾರ್ ಮತ್ತು ಪೊಲೀಸ್ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿತು.</p>.<p>‘ಗ್ರಾಮದ ಕಿರಿದಾದ ರಸ್ತೆಯ ಎರಡೂ ಬದಿಯಲ್ಲಿ ಕೆಲವರು ಮನೆ ನಿರ್ಮಿಸಿಕೊಂಡಿದ್ದರು. ಅಲ್ಲದೇ ಅಕ್ರಮವಾಗಿ ಗೋಡೆ, ಶೌಚಾಲಯ, ಚರಂಡಿ ನಿರ್ಮಿಸಿಕೊಂಡಿದ್ದರು. ಇದರಿಂದ ಎತ್ತಿನ ಗಾಡಿ ಹಾಗೂ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿತ್ತು. ಆಗಿಂದಾಗ್ಗೆ ಅಪಘಾತಗಳು ಸಂಭವಿಸುತ್ತಿದ್ದವು. ಈ ಬಗ್ಗೆ ಗ್ರಾಮಸ್ಥರು ಗಮನಕ್ಕೆ ತಂದಿದ್ದರು. ತೆರವುಗೊಳಿಸಲು ಮನೆಯ ಮಾಲೀಕರಿಗೆ ಹಲವು ಬಾರಿ ನೋಟಿಸ್ ನೀಡಿದ್ದರೂ ಪ್ರಯೋಜನವಾಗಿರಲಿಲ್ಲ. ಹೀಗಾಗಿ ತೆರವು ಮಾಡಲಾಯಿತು’ ಎಂದು ತಹಶೀಲ್ದಾರ್ ರೇಹಾನ್ ಪಾಷ ತಿಳಿಸಿದರು.</p>.<p>ರಸ್ತೆ ಮಧ್ಯಭಾಗದಿಂದ 40 ಮೀಟರ್ ಅಳತೆ ಮಾಡಿ, ಚರಂಡಿ, ಗೋಡೆ, ಶೌಚಾಲಯ ನೆಲಸಮಗೊಳಿಸಲಾಗಿದೆ. ಅಕ್ರಮ ಕಟ್ಟಡ ನಿರ್ಮಾಣ ಮಾಡದಂತೆ ಗ್ರಾಮಸ್ಥರಿಗೆ ತಿಳಿವಳಿಕೆ ನೀಡಲಾಗಿದೆ ಎಂದು ಹೇಳಿದರು.</p>.<p>ಕಂದಾಯ ಅಧಿಕಾರಿ ತಿಪ್ಪೇಸ್ವಾಮಿ, ಗ್ರಾಮ ಲೆಕ್ಕಾಧಿಕಾರಿ ಆಚಾರಿ, ಗ್ರಾಮದ ಮುಖಂಡ ಮಹಾಲಿಂಗಪ್ಪ, ನಾಗರಾಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಳ್ಳಕೆರೆ</strong>: ತಾಲ್ಲೂಕಿನ ಜಡೇಕುಂಟೆ ಗ್ರಾಮದ ಮುಖ್ಯರಸ್ತೆಗೆ ಹೊಂದಿಕೊಂಡಂತೆ ನಿರ್ಮಿಸಿದ್ದ ಕಾಂಪೌಂಡ್ ಅನ್ನು ಜೆಸಿಬಿ ಯಂತ್ರದ ಮೂಲಕ ಸೋಮವಾರ ತೆರವುಗೊಳಿಸಲಾಯಿತು.</p>.<p>ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದ್ದ ಕಾರಣ, ತಹಶೀಲ್ದಾರ್ ಮತ್ತು ಪೊಲೀಸ್ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿತು.</p>.<p>‘ಗ್ರಾಮದ ಕಿರಿದಾದ ರಸ್ತೆಯ ಎರಡೂ ಬದಿಯಲ್ಲಿ ಕೆಲವರು ಮನೆ ನಿರ್ಮಿಸಿಕೊಂಡಿದ್ದರು. ಅಲ್ಲದೇ ಅಕ್ರಮವಾಗಿ ಗೋಡೆ, ಶೌಚಾಲಯ, ಚರಂಡಿ ನಿರ್ಮಿಸಿಕೊಂಡಿದ್ದರು. ಇದರಿಂದ ಎತ್ತಿನ ಗಾಡಿ ಹಾಗೂ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿತ್ತು. ಆಗಿಂದಾಗ್ಗೆ ಅಪಘಾತಗಳು ಸಂಭವಿಸುತ್ತಿದ್ದವು. ಈ ಬಗ್ಗೆ ಗ್ರಾಮಸ್ಥರು ಗಮನಕ್ಕೆ ತಂದಿದ್ದರು. ತೆರವುಗೊಳಿಸಲು ಮನೆಯ ಮಾಲೀಕರಿಗೆ ಹಲವು ಬಾರಿ ನೋಟಿಸ್ ನೀಡಿದ್ದರೂ ಪ್ರಯೋಜನವಾಗಿರಲಿಲ್ಲ. ಹೀಗಾಗಿ ತೆರವು ಮಾಡಲಾಯಿತು’ ಎಂದು ತಹಶೀಲ್ದಾರ್ ರೇಹಾನ್ ಪಾಷ ತಿಳಿಸಿದರು.</p>.<p>ರಸ್ತೆ ಮಧ್ಯಭಾಗದಿಂದ 40 ಮೀಟರ್ ಅಳತೆ ಮಾಡಿ, ಚರಂಡಿ, ಗೋಡೆ, ಶೌಚಾಲಯ ನೆಲಸಮಗೊಳಿಸಲಾಗಿದೆ. ಅಕ್ರಮ ಕಟ್ಟಡ ನಿರ್ಮಾಣ ಮಾಡದಂತೆ ಗ್ರಾಮಸ್ಥರಿಗೆ ತಿಳಿವಳಿಕೆ ನೀಡಲಾಗಿದೆ ಎಂದು ಹೇಳಿದರು.</p>.<p>ಕಂದಾಯ ಅಧಿಕಾರಿ ತಿಪ್ಪೇಸ್ವಾಮಿ, ಗ್ರಾಮ ಲೆಕ್ಕಾಧಿಕಾರಿ ಆಚಾರಿ, ಗ್ರಾಮದ ಮುಖಂಡ ಮಹಾಲಿಂಗಪ್ಪ, ನಾಗರಾಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>