<p>ಚಳ್ಳಕೆರೆ: ಸತ್ಯ, ನ್ಯಾಯ, ನೀತಿ, ನಿಷ್ಠೆ ಹಾಗೂ ಧರ್ಮದಿಂದ ನಡೆಯುವ ಜನರನ್ನು ಸಮಾಜ ಗೌರವಿಸುವುದರ ಮೂಲಕ ಅವರಿಂದ ಸೇವೆಯನ್ನು ಸದಾ ಬಯಸುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.</p>.<p>ನಗರದ ಜೈನ್ ಟ್ರಸ್ಟ್ನಲ್ಲಿ ಪಾರ್ಶ್ವನಾಥ ಸ್ವಾಮಿ ದಿಗಂಬರ ಜೈನ ಸಮಾಜ ಹಾಗೂ ಮಹಾವೀರ ಸ್ವಾಮಿ ಜೈನ ಶ್ವೇತಾಂಬರ ಮೂರ್ತಿ ಪೂಜಿಕ್ ಸಂಘಗಳ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ ಮಹಾವೀರ ಸ್ವಾಮಿ ಪೂಜಾ ಕಾರ್ಯಕ್ರಮ ಮತ್ತು ಜನಪ್ರತಿನಿಧಿಗಳ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಇತರರಿಗೆ ಒಳಿತನ್ನು ಮಾಡುವುದೇ ನಿಜವಾದ ಧರ್ಮ. ಇದೇ ಬದುಕಿನಲ್ಲಿ ಸರಿಯಾದ ದಾರಿತೋರಿಸುತ್ತದೆ. ಅಹಿಂಸಾ ಪರಮೋಧರ್ಮ ಎಂದು ನಂಬಿ ಸಮಾಜ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡು ಬರುತ್ತಿರುವ ಜೈನ ಸಮುದಾಯದ ಕಾರ್ಯ ಶ್ಲಾಘನೀಯ ಎಂದು ಹೇಳಿದರು.</p>.<p>ಆಯ್ಕೆಯಾಗಿರುವ ಮೂವರು ಶಾಸಕರು ಚಳ್ಳಕೆರೆ ಮೂಲದವರಾಗಿದ್ದು, ಅವರೆಲ್ಲರ ಸಲಹೆ, ಸಹಕಾರ ಹಾಗೂ ಮಾರ್ಗದರ್ಶನ ಪಡೆದು ಕ್ಷೇತ್ರವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.</p>.<p>ಪುರಸಭೆ ಮಾಜಿ ಅಧ್ಯಕ್ಷ ಎನ್.ಜೆ.ವೆಂಕಟೇಶ್, ಜೈನ ಸಮಾಜದ ತಾಲ್ಲೂಕು ಅಧ್ಯಕ್ಷ ಅಂಬಣ್ಣ, ಕಾರ್ಯಧ್ಯಕ್ಷ ಪ್ರಭಾಕರ್, ಸಮುದಾಯದ ಹಿರಿಯ ಮುಖಂಡ ಭರತ್ರಾಜ್ ಮಾತನಾಡಿದರು. </p>.<p>ವೈದ್ಯ ಡಾ.ವಿಜಯೇಂದ್ರ, ಡಿ.ಪಾಶ್ವನಾಥ ಗೌರೀಪುರ, ಚಂಪಾಲಾಲ್, ಕುಂದನ್ ನವೀನ್, ರಾಜೇಶ್, ಹರ್ಷಿಣಿ ಡಿ.ಸುಧಾಕರ್, ಪರಶುರಾಂಪುರ ಹೋಬಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಟಿ.ಶಶಿಧರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಳ್ಳಕೆರೆ: ಸತ್ಯ, ನ್ಯಾಯ, ನೀತಿ, ನಿಷ್ಠೆ ಹಾಗೂ ಧರ್ಮದಿಂದ ನಡೆಯುವ ಜನರನ್ನು ಸಮಾಜ ಗೌರವಿಸುವುದರ ಮೂಲಕ ಅವರಿಂದ ಸೇವೆಯನ್ನು ಸದಾ ಬಯಸುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.</p>.<p>ನಗರದ ಜೈನ್ ಟ್ರಸ್ಟ್ನಲ್ಲಿ ಪಾರ್ಶ್ವನಾಥ ಸ್ವಾಮಿ ದಿಗಂಬರ ಜೈನ ಸಮಾಜ ಹಾಗೂ ಮಹಾವೀರ ಸ್ವಾಮಿ ಜೈನ ಶ್ವೇತಾಂಬರ ಮೂರ್ತಿ ಪೂಜಿಕ್ ಸಂಘಗಳ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ ಮಹಾವೀರ ಸ್ವಾಮಿ ಪೂಜಾ ಕಾರ್ಯಕ್ರಮ ಮತ್ತು ಜನಪ್ರತಿನಿಧಿಗಳ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಇತರರಿಗೆ ಒಳಿತನ್ನು ಮಾಡುವುದೇ ನಿಜವಾದ ಧರ್ಮ. ಇದೇ ಬದುಕಿನಲ್ಲಿ ಸರಿಯಾದ ದಾರಿತೋರಿಸುತ್ತದೆ. ಅಹಿಂಸಾ ಪರಮೋಧರ್ಮ ಎಂದು ನಂಬಿ ಸಮಾಜ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡು ಬರುತ್ತಿರುವ ಜೈನ ಸಮುದಾಯದ ಕಾರ್ಯ ಶ್ಲಾಘನೀಯ ಎಂದು ಹೇಳಿದರು.</p>.<p>ಆಯ್ಕೆಯಾಗಿರುವ ಮೂವರು ಶಾಸಕರು ಚಳ್ಳಕೆರೆ ಮೂಲದವರಾಗಿದ್ದು, ಅವರೆಲ್ಲರ ಸಲಹೆ, ಸಹಕಾರ ಹಾಗೂ ಮಾರ್ಗದರ್ಶನ ಪಡೆದು ಕ್ಷೇತ್ರವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.</p>.<p>ಪುರಸಭೆ ಮಾಜಿ ಅಧ್ಯಕ್ಷ ಎನ್.ಜೆ.ವೆಂಕಟೇಶ್, ಜೈನ ಸಮಾಜದ ತಾಲ್ಲೂಕು ಅಧ್ಯಕ್ಷ ಅಂಬಣ್ಣ, ಕಾರ್ಯಧ್ಯಕ್ಷ ಪ್ರಭಾಕರ್, ಸಮುದಾಯದ ಹಿರಿಯ ಮುಖಂಡ ಭರತ್ರಾಜ್ ಮಾತನಾಡಿದರು. </p>.<p>ವೈದ್ಯ ಡಾ.ವಿಜಯೇಂದ್ರ, ಡಿ.ಪಾಶ್ವನಾಥ ಗೌರೀಪುರ, ಚಂಪಾಲಾಲ್, ಕುಂದನ್ ನವೀನ್, ರಾಜೇಶ್, ಹರ್ಷಿಣಿ ಡಿ.ಸುಧಾಕರ್, ಪರಶುರಾಂಪುರ ಹೋಬಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಟಿ.ಶಶಿಧರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>