<p>ಚಳ್ಳಕೆರೆ: ‘ಚಳ್ಳಕೆರೆ ತಾಲ್ಲೂಕು ಕಾನೂನು ಸೇವಾ ಸಮಿತಿ, ತಾಲ್ಲೂಕು ವಕೀಲರ ಸಂಘ, ನಗರಸಭೆ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತಾ ಸೇವಾ ಅಭಿಯಾನಕ್ಕೆ ನ್ಯಾಯಾಧೀಶೆ ಎಚ್.ಆರ್. ಹೇಮಾ ಕಸಗುಡಿಸುವ ಮೂಲಕ ಶುಕ್ರವಾರ ಚಾಲನೆ ನೀಡಿದರು. </p>.<p>‘ಪರಿಸರ ಸ್ವಚ್ಛವಾಗಿದ್ದರೆ ಮನಸ್ಸು ಸಹ ಸ್ವಚ್ಛವಾಗಿರುತ್ತದೆ. ಹೀಗಾಗಿ ಮನೆಯ ಸುತ್ತಲಿನ ಆವರಣ ಸ್ವಚ್ಛವಾಗಿಸಿಕೊಳ್ಳುವುದಲ್ಲದೇ ಪ್ರತಿಯೊಬ್ಬ ನಾಗರಿಕರಲ್ಲಿಯೂ ಸ್ವಚ್ಛತೆಯ ಅರಿವು ಮೂಡಿಸುವ ಕೆಲಸ ಆಗಬೇಕು’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಶಮೀರ್ ಪಿ.ನಂದ್ಯಾಲ್ ಹೇಳಿದರು. </p>.<p>ವಕೀಲರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಂ.ನಾಗರಾಜ, ‘ಒಣಕಸ, ಹಸಿ ಕಸ ಪ್ರತ್ಯೇಕವಾಗಿರಿಸಿ ವಿಲೇವಾರಿ ಕೆಲಸಕ್ಕೆ ನಗರಸಭೆ ಜೊತೆ ಸಂಘ ಸಂಸ್ಥೆಗಳು ಕೈ ಜೋಡಿಸಬೇಕು. ಇದರಿಂದ ಇಡೀ ನಗರ ಸುಂದರವಾಗಿರುತ್ತದೆ’ ಎಂದು ಹೇಳಿದರು. </p>.<p>ಉಪಾಧ್ಯಕ್ಷ ಡಿ.ಪಾಲಯ್ಯ, ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಖಜಾಂಚಿ ರುದ್ರಯ್ಯ, ಪೌರಾಯುಕ್ತ ಜಗ್ಗರೆಡ್ಡಿ, ಪರಿಸರ ಎಂಜಿನಿಯರ್ ನರೇಂದ್ರಬಾಬು ಮಾತನಾಡಿದರು. </p>.<p>ಬೇವು, ಹೊಂಗೆ ಸೇರಿದಂತೆ ನ್ಯಾಯಾಲಯದ ಆವರಣದಲ್ಲಿ ನೂರಕ್ಕೂ ಹೆಚ್ಚು ಸಸಿಗಳನ್ನು ನೆಡಲಾಯಿತು.</p>.<p>ಆರೋಗ್ಯ ನಿರೀಕ್ಷಕ ಸುನಿಲ್, ಗಣೇಶ್, ಗೀತಾ, ವಕೀಲ ಒ.ಪಾಪಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಳ್ಳಕೆರೆ: ‘ಚಳ್ಳಕೆರೆ ತಾಲ್ಲೂಕು ಕಾನೂನು ಸೇವಾ ಸಮಿತಿ, ತಾಲ್ಲೂಕು ವಕೀಲರ ಸಂಘ, ನಗರಸಭೆ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತಾ ಸೇವಾ ಅಭಿಯಾನಕ್ಕೆ ನ್ಯಾಯಾಧೀಶೆ ಎಚ್.ಆರ್. ಹೇಮಾ ಕಸಗುಡಿಸುವ ಮೂಲಕ ಶುಕ್ರವಾರ ಚಾಲನೆ ನೀಡಿದರು. </p>.<p>‘ಪರಿಸರ ಸ್ವಚ್ಛವಾಗಿದ್ದರೆ ಮನಸ್ಸು ಸಹ ಸ್ವಚ್ಛವಾಗಿರುತ್ತದೆ. ಹೀಗಾಗಿ ಮನೆಯ ಸುತ್ತಲಿನ ಆವರಣ ಸ್ವಚ್ಛವಾಗಿಸಿಕೊಳ್ಳುವುದಲ್ಲದೇ ಪ್ರತಿಯೊಬ್ಬ ನಾಗರಿಕರಲ್ಲಿಯೂ ಸ್ವಚ್ಛತೆಯ ಅರಿವು ಮೂಡಿಸುವ ಕೆಲಸ ಆಗಬೇಕು’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಶಮೀರ್ ಪಿ.ನಂದ್ಯಾಲ್ ಹೇಳಿದರು. </p>.<p>ವಕೀಲರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಂ.ನಾಗರಾಜ, ‘ಒಣಕಸ, ಹಸಿ ಕಸ ಪ್ರತ್ಯೇಕವಾಗಿರಿಸಿ ವಿಲೇವಾರಿ ಕೆಲಸಕ್ಕೆ ನಗರಸಭೆ ಜೊತೆ ಸಂಘ ಸಂಸ್ಥೆಗಳು ಕೈ ಜೋಡಿಸಬೇಕು. ಇದರಿಂದ ಇಡೀ ನಗರ ಸುಂದರವಾಗಿರುತ್ತದೆ’ ಎಂದು ಹೇಳಿದರು. </p>.<p>ಉಪಾಧ್ಯಕ್ಷ ಡಿ.ಪಾಲಯ್ಯ, ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಖಜಾಂಚಿ ರುದ್ರಯ್ಯ, ಪೌರಾಯುಕ್ತ ಜಗ್ಗರೆಡ್ಡಿ, ಪರಿಸರ ಎಂಜಿನಿಯರ್ ನರೇಂದ್ರಬಾಬು ಮಾತನಾಡಿದರು. </p>.<p>ಬೇವು, ಹೊಂಗೆ ಸೇರಿದಂತೆ ನ್ಯಾಯಾಲಯದ ಆವರಣದಲ್ಲಿ ನೂರಕ್ಕೂ ಹೆಚ್ಚು ಸಸಿಗಳನ್ನು ನೆಡಲಾಯಿತು.</p>.<p>ಆರೋಗ್ಯ ನಿರೀಕ್ಷಕ ಸುನಿಲ್, ಗಣೇಶ್, ಗೀತಾ, ವಕೀಲ ಒ.ಪಾಪಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>