<p><strong>ಚಳ್ಳಕೆರೆ</strong>: ರಾಷ್ಟ್ರೀಯ ಹೆದ್ದಾರಿ ವೀರದಿಮ್ಮನಹಳ್ಳಿ ಕ್ರಾಸ್ ಬಳಿ ಸೋಮವಾರ ಲಾರಿ ನಿಲ್ಲಿಸಿ ಶೌಚಾಲಯಕ್ಕೆ ತೆರಳುವ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಲಾರಿ ಕ್ಲೀನರ್ ಎಸ್. ಚಂದ್ರಣ್ಣ ಮೃತಪಟ್ಟಿದ್ದಾರೆ.</p>.<p>ಬ್ಯಾಡಗಿ ಮಾರುಕಟ್ಟೆಯಲ್ಲಿ ಮಣಿಸಿನಕಾಯಿ ಮಾರಾಟ ಮಾಡಿಕೊಂಡು, ಶಿವರಾಜ್, ಚಾಲಕ ನಾಗರಾಜ್ ಹಾಗೂ ಕ್ಲೀನರ್ ಚಂದ್ರಣ್ಣ ಲಾರಿಯಲ್ಲಿ ಮರಳುತ್ತಿದ್ದರು. ಈ ವೇಳೆ ಶೌಚಾಲಯಕ್ಕೆ ಎಂದು ಚಂದ್ರಣ್ಣ ಲಾರಿ ನಿಲ್ಲಿಸಿ ಹೋಗುತ್ತಿದ್ದಾಗ, ಚಳ್ಳಕೆರೆ ಕಡೆಯಿಂದ ಬಳ್ಳಾರಿ ಕಡೆಗೆ ಹೋಗುತ್ತಿದ್ದ ಕಾರು ವೇಗವಾಗಿ ಬಂದು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಚಂದ್ರಣ್ಣನಿಗೂ ಗುದ್ದಿ ಪಲ್ಟಿಯಾಗಿದೆ.</p>.<p>ಕ್ಲೀನರ್ ಚಂದ್ರಣ್ಣ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು, ಚಳ್ಳಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.</p>.<p>ಅಪಘಾತದಲ್ಲಿ ಕಾರು ಜಖಂಗೊಂಡಿದೆ. ಕಾರಿನಲ್ಲಿದ್ದ ನಾಯಕನಹಟ್ಟಿಯ ಶಿವಕುಮಾರ್, ಚಂದನ್ಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಳ್ಳಕೆರೆ</strong>: ರಾಷ್ಟ್ರೀಯ ಹೆದ್ದಾರಿ ವೀರದಿಮ್ಮನಹಳ್ಳಿ ಕ್ರಾಸ್ ಬಳಿ ಸೋಮವಾರ ಲಾರಿ ನಿಲ್ಲಿಸಿ ಶೌಚಾಲಯಕ್ಕೆ ತೆರಳುವ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಲಾರಿ ಕ್ಲೀನರ್ ಎಸ್. ಚಂದ್ರಣ್ಣ ಮೃತಪಟ್ಟಿದ್ದಾರೆ.</p>.<p>ಬ್ಯಾಡಗಿ ಮಾರುಕಟ್ಟೆಯಲ್ಲಿ ಮಣಿಸಿನಕಾಯಿ ಮಾರಾಟ ಮಾಡಿಕೊಂಡು, ಶಿವರಾಜ್, ಚಾಲಕ ನಾಗರಾಜ್ ಹಾಗೂ ಕ್ಲೀನರ್ ಚಂದ್ರಣ್ಣ ಲಾರಿಯಲ್ಲಿ ಮರಳುತ್ತಿದ್ದರು. ಈ ವೇಳೆ ಶೌಚಾಲಯಕ್ಕೆ ಎಂದು ಚಂದ್ರಣ್ಣ ಲಾರಿ ನಿಲ್ಲಿಸಿ ಹೋಗುತ್ತಿದ್ದಾಗ, ಚಳ್ಳಕೆರೆ ಕಡೆಯಿಂದ ಬಳ್ಳಾರಿ ಕಡೆಗೆ ಹೋಗುತ್ತಿದ್ದ ಕಾರು ವೇಗವಾಗಿ ಬಂದು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಚಂದ್ರಣ್ಣನಿಗೂ ಗುದ್ದಿ ಪಲ್ಟಿಯಾಗಿದೆ.</p>.<p>ಕ್ಲೀನರ್ ಚಂದ್ರಣ್ಣ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು, ಚಳ್ಳಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.</p>.<p>ಅಪಘಾತದಲ್ಲಿ ಕಾರು ಜಖಂಗೊಂಡಿದೆ. ಕಾರಿನಲ್ಲಿದ್ದ ನಾಯಕನಹಟ್ಟಿಯ ಶಿವಕುಮಾರ್, ಚಂದನ್ಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>