<p>ಚಳ್ಳಕೆರೆ: ಬೇಸಿಗೆ ರಜೆ ಬಳಿಕ ಶಾಲೆಗಳು ಪುನರಾರಂಭಗೊಂಡಿದ್ದು, ಮೊದಲ ದಿನ ವಿದ್ಯಾರ್ಥಿಗಳನ್ನು ಶಿಕ್ಷಕರು ಹೂಗುಚ್ಛ, ಸಿಹಿ ನೀಡಿ ಬರಮಾಡಿಕೊಂಡರು.</p>.<p>ತಾಲ್ಲೂಕಿನ ರಾಮಜೋಗಿಹಳ್ಳಿ ಗ್ರಾಮಸ್ಥರು, ಸಿಂಗರಿಸಿದ್ದ ಎತ್ತಿನ ಬಂಡಿಯಲ್ಲಿ ಕೂರಿಸಿಕೊಂಡು ವಿದ್ಯಾರ್ಥಿಗಳನ್ನು ಕರೆತಂದರು. ಡೊಳ್ಳು, ಗೊಂಬೆ ಕುಣಿತ ಸೇರಿದಂತೆ ವಿವಿಧ ಕಲಾತಂಡಗಳೊಂದಿಗೆ ನಡೆದ ಮೆರವಣಿಗೆ ವೇಳೆ ಪೋಷಕರು ಸಂಭ್ರಮಿಸಿದರು.</p>.<p>ಶಾಲೆಯನ್ನು ಮದುವಣಗಿತ್ತಿಯಂತೆ ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಕೊಠಡಿಗಳನ್ನು ವಿವಿಧ ಬಣ್ಣದ ಬಲೂನ್, ಆವರಣವನ್ನು ಸುಂದರ ರಂಗೋಲಿಗಳಿಂದ ಅಲಂಕರಿಸಲಾಗಿತ್ತು.</p>.<p>ವಿದ್ಯಾರ್ಥಿಗಳು ಶಾಲೆಗೆ ಬರುತ್ತಿದ್ದಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ, ಶಿಕ್ಷಕರು, ಎಸ್ಡಿಎಂಸಿ ಅಧ್ಯಕ್ಷರು, ಸದಸ್ಯರು ಆರತಿ ಬೆಳಗಿ, ಹೂವು ಹಾಗೂ ಸಿಹಿ ತಿಂಡಿಗಳನ್ನು ನೀಡಿ ಸ್ವಾಗತಿಸಿದರು.</p>.<p>ಈ ವೇಳೆ ಪಠ್ಯಪುಸ್ತಕ, ಸಮವಸ್ತ್ರ ವಿತರಣೆ ಮಾಡಲಾಯಿತು. ನಂತರ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್ ಅವರು ವಿದ್ಯಾರ್ಥಿಗಳಿಗೆ ಸಿಹಿ ಊಟ ಬಡಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-44-1420638945</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಳ್ಳಕೆರೆ: ಬೇಸಿಗೆ ರಜೆ ಬಳಿಕ ಶಾಲೆಗಳು ಪುನರಾರಂಭಗೊಂಡಿದ್ದು, ಮೊದಲ ದಿನ ವಿದ್ಯಾರ್ಥಿಗಳನ್ನು ಶಿಕ್ಷಕರು ಹೂಗುಚ್ಛ, ಸಿಹಿ ನೀಡಿ ಬರಮಾಡಿಕೊಂಡರು.</p>.<p>ತಾಲ್ಲೂಕಿನ ರಾಮಜೋಗಿಹಳ್ಳಿ ಗ್ರಾಮಸ್ಥರು, ಸಿಂಗರಿಸಿದ್ದ ಎತ್ತಿನ ಬಂಡಿಯಲ್ಲಿ ಕೂರಿಸಿಕೊಂಡು ವಿದ್ಯಾರ್ಥಿಗಳನ್ನು ಕರೆತಂದರು. ಡೊಳ್ಳು, ಗೊಂಬೆ ಕುಣಿತ ಸೇರಿದಂತೆ ವಿವಿಧ ಕಲಾತಂಡಗಳೊಂದಿಗೆ ನಡೆದ ಮೆರವಣಿಗೆ ವೇಳೆ ಪೋಷಕರು ಸಂಭ್ರಮಿಸಿದರು.</p>.<p>ಶಾಲೆಯನ್ನು ಮದುವಣಗಿತ್ತಿಯಂತೆ ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಕೊಠಡಿಗಳನ್ನು ವಿವಿಧ ಬಣ್ಣದ ಬಲೂನ್, ಆವರಣವನ್ನು ಸುಂದರ ರಂಗೋಲಿಗಳಿಂದ ಅಲಂಕರಿಸಲಾಗಿತ್ತು.</p>.<p>ವಿದ್ಯಾರ್ಥಿಗಳು ಶಾಲೆಗೆ ಬರುತ್ತಿದ್ದಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ, ಶಿಕ್ಷಕರು, ಎಸ್ಡಿಎಂಸಿ ಅಧ್ಯಕ್ಷರು, ಸದಸ್ಯರು ಆರತಿ ಬೆಳಗಿ, ಹೂವು ಹಾಗೂ ಸಿಹಿ ತಿಂಡಿಗಳನ್ನು ನೀಡಿ ಸ್ವಾಗತಿಸಿದರು.</p>.<p>ಈ ವೇಳೆ ಪಠ್ಯಪುಸ್ತಕ, ಸಮವಸ್ತ್ರ ವಿತರಣೆ ಮಾಡಲಾಯಿತು. ನಂತರ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್ ಅವರು ವಿದ್ಯಾರ್ಥಿಗಳಿಗೆ ಸಿಹಿ ಊಟ ಬಡಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-44-1420638945</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>