<p><strong>ಚಳ್ಳಕೆರೆ</strong>: ಕನ್ನಡ ಚಲನಚಿತ್ರ ನಟ ದಿವಂಗತ ವಿಷ್ಣುವರ್ಧನ್ ಅವರ ಸಮಾಧಿಯನ್ನು ರಾತ್ರೋರಾತ್ರಿ ಧ್ವಂಸಗೊಳಿಸಿದ್ದನ್ನು ಖಂಡಿಸಿ ವಿಷ್ಣು ಸೇವಾ ಸಮಿತಿ ತಾಲ್ಲೂಕು ಘಟಕದ ಕಾರ್ಯಕರ್ತರು ಸೋಮವಾರ ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ ನಡೆಸಿದರು.</p>.<p>ನೇತೃತ್ವ ವಹಿಸಿದ್ದ ಸೇವಾ ಸಮಿತಿ ಅಧ್ಯಕ್ಷ ರಾಘವೇಂದ್ರ ಮಾತನಾಡಿ, ‘212 ಕನ್ನಡ ಸಿನಿಮಾದಲ್ಲಿ ನಟಿಸುವ ಮೂಲಕ ನಾಡಿನ ಸಾಂಸ್ಕೃತಿಕ ರಂಗವನ್ನು ಶ್ರೀಮಂತಗೊಳಿಸಿದ್ದ ವಿಷ್ಣುವರ್ಧನ್ ಅವರ ಸಮಾಧಿ ಧ್ವಂಸ ಮಾಡಿರುವುದು ಇಡೀ ನಾಡಿಗೆ ಅವಮಾನವಾಗಿದೆ. ಹೀಗಾಗಿ ವಿಷ್ಣುವರ್ಧನ್ ಅಭಿಮಾನಿಗಳು ತಲಾ ₹ 2 ಸಾವಿರ ದೇಣಿಗೆ ನೀಡುತ್ತೇವೆ ಅದೇ ಜಾಗದಲ್ಲಿ ವಿಷ್ಣುವರ್ಧನ್ ಅವರ ಸಮಾಧಿ ಹಾಗೂ ಸ್ಮಾರಕಕ್ಕೆ ಅವಕಾಶ ಮಾಡಿಕೊಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಚಳ್ಳಕೆರೆಯಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡುವ ಮೂಲಕ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ರೂಪಿಸಲಾಗುವುದು’ ಎಂದು ಎಚ್ಚರಿಸಿದರು.</p>.<p>ಉಪಾಧ್ಯಕ್ಷ ರವಿಕರ್ಣ ಮಾತನಾಡಿ, ‘ಅದೇ ಸ್ಥಳದಲ್ಲಿ ವಿಷ್ಣುವರ್ಧನ್ ಅವರ ಬೃಹತ್ ಸ್ಮಾರರ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು’ ಎಂದು ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದರು.</p>.<p>ನಂತರ ತಾಲ್ಲೂಕು ಕಚೇರಿಗೆ ತೆರಳಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.</p>.<p>ಸಮಿತಿ ಸದಸ್ಯ ಬೆಟ್ಟಪ್ಪ, ರಾಮಚಾರಿ, ಪ್ರಕಾಶ್, ತಿಪ್ಪೇಸ್ವಾಮಿ, ಪ್ರಹ್ಲಾದ್, ಶ್ರೀನಿವಾಸ್, ಮಂಜು, ಖಾದರ್, ನಾಗರಾಜ, ಇಬ್ರಾನ್, ಕಾಶಿನಾಥ್, ಬಾಷಾ ಮಾತನಾಡಿದರು.</p>.<p>ಸಂತೋಷ್, ಸಮೀವುಲ್ಲಾ, ಗಂಗಾಧರ, ರಮೇಶ್, ಸತೀಶ್, ಶಿವಣ್ಣ, ಪಾಂಡುರಂಗ, ಬಸವರಾಜ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಳ್ಳಕೆರೆ</strong>: ಕನ್ನಡ ಚಲನಚಿತ್ರ ನಟ ದಿವಂಗತ ವಿಷ್ಣುವರ್ಧನ್ ಅವರ ಸಮಾಧಿಯನ್ನು ರಾತ್ರೋರಾತ್ರಿ ಧ್ವಂಸಗೊಳಿಸಿದ್ದನ್ನು ಖಂಡಿಸಿ ವಿಷ್ಣು ಸೇವಾ ಸಮಿತಿ ತಾಲ್ಲೂಕು ಘಟಕದ ಕಾರ್ಯಕರ್ತರು ಸೋಮವಾರ ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ ನಡೆಸಿದರು.</p>.<p>ನೇತೃತ್ವ ವಹಿಸಿದ್ದ ಸೇವಾ ಸಮಿತಿ ಅಧ್ಯಕ್ಷ ರಾಘವೇಂದ್ರ ಮಾತನಾಡಿ, ‘212 ಕನ್ನಡ ಸಿನಿಮಾದಲ್ಲಿ ನಟಿಸುವ ಮೂಲಕ ನಾಡಿನ ಸಾಂಸ್ಕೃತಿಕ ರಂಗವನ್ನು ಶ್ರೀಮಂತಗೊಳಿಸಿದ್ದ ವಿಷ್ಣುವರ್ಧನ್ ಅವರ ಸಮಾಧಿ ಧ್ವಂಸ ಮಾಡಿರುವುದು ಇಡೀ ನಾಡಿಗೆ ಅವಮಾನವಾಗಿದೆ. ಹೀಗಾಗಿ ವಿಷ್ಣುವರ್ಧನ್ ಅಭಿಮಾನಿಗಳು ತಲಾ ₹ 2 ಸಾವಿರ ದೇಣಿಗೆ ನೀಡುತ್ತೇವೆ ಅದೇ ಜಾಗದಲ್ಲಿ ವಿಷ್ಣುವರ್ಧನ್ ಅವರ ಸಮಾಧಿ ಹಾಗೂ ಸ್ಮಾರಕಕ್ಕೆ ಅವಕಾಶ ಮಾಡಿಕೊಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಚಳ್ಳಕೆರೆಯಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡುವ ಮೂಲಕ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ರೂಪಿಸಲಾಗುವುದು’ ಎಂದು ಎಚ್ಚರಿಸಿದರು.</p>.<p>ಉಪಾಧ್ಯಕ್ಷ ರವಿಕರ್ಣ ಮಾತನಾಡಿ, ‘ಅದೇ ಸ್ಥಳದಲ್ಲಿ ವಿಷ್ಣುವರ್ಧನ್ ಅವರ ಬೃಹತ್ ಸ್ಮಾರರ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು’ ಎಂದು ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದರು.</p>.<p>ನಂತರ ತಾಲ್ಲೂಕು ಕಚೇರಿಗೆ ತೆರಳಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.</p>.<p>ಸಮಿತಿ ಸದಸ್ಯ ಬೆಟ್ಟಪ್ಪ, ರಾಮಚಾರಿ, ಪ್ರಕಾಶ್, ತಿಪ್ಪೇಸ್ವಾಮಿ, ಪ್ರಹ್ಲಾದ್, ಶ್ರೀನಿವಾಸ್, ಮಂಜು, ಖಾದರ್, ನಾಗರಾಜ, ಇಬ್ರಾನ್, ಕಾಶಿನಾಥ್, ಬಾಷಾ ಮಾತನಾಡಿದರು.</p>.<p>ಸಂತೋಷ್, ಸಮೀವುಲ್ಲಾ, ಗಂಗಾಧರ, ರಮೇಶ್, ಸತೀಶ್, ಶಿವಣ್ಣ, ಪಾಂಡುರಂಗ, ಬಸವರಾಜ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>