<p><strong>ಚಳ್ಳಕೆರೆ</strong>: ಮಹಿಳೆಯರು ಕುಟುಂಬದ ಶಕ್ತಿಯಾಗಿ, ಸಮಾಜದಲ್ಲಿ ಪ್ರೇರಣೆಯಾಗಿ ಹಾಗೂ ದೇಶದ ಪ್ರಗತಿಯ ಪ್ರಮುಖ ಶಕ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ವೇದ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಿ.ಟಿ ರವೀಂದ್ರ ಹೇಳಿದರು.</p>.<p>ಮಹಿಳಾ ದಿನಾಚರಣೆ ಅಂಗವಾಗಿ ಭಾನುವಾರ ಸಾಣಿಕೆರೆ ಬಳಿಯಿರುವ ವೇದ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮಹಿಳೆಯರಿಗೆ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಸಮಾಜದಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದ್ದು, ಅವರಿಗೆ ಪುರುಷರಷ್ಟೇ ಪ್ರಾಧಾನ್ಯತೆ ನೀಡಬೇಕು. ಮಹಿಳೆ ಅಡುಗೆ ಮನೆಗೆ ಸೀಮಿತವಲ್ಲ. ಪ್ರತಿತ್ರದಲ್ಲಿ ಅವಕಾಶ ಕೊಟ್ಟರೆ ಪುರುಷರಿಗಿಂತ ಹೆಚ್ಚು ಸಾಧನೆ ಮಾಡುತ್ತಾರೆ. ಕೋವಿಡ್ ಸಮಯದಲ್ಲಿ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ನರ್ಸ್ಗಳು ಜೀವ ಪಣಕ್ಕಿಟ್ಟು ಕೆಲಸ ಮಾಡಿರುವುದು ಶ್ಲಾಘನೀಯ ಎಂದರು.</p>.<p>ಗ್ರಾಮೀಣ ಭಾಗದಲ್ಲಿ ಈಗಲೂ ಯುವತಿಯರು ಪಿಯು ಮುಗಿಸಿದರೆ ಮದುವೆ ಮಾಡಲು ಮುಂದಾಗುತ್ತಾರೆ. ಪೋಷಕರು ಇಂತಹ ನಿರ್ಧಾರವನ್ನು ಬಿಟ್ಟು ಹೆಣ್ಣುಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಿ ಸ್ವಾವಲಂಬಿ ಬದುಕನ್ನು ನಿರ್ಮಿಸಿಕೊಳ್ಳಲು ನೆರವಾಗಬೇಕು ಎಂದು ಹೇಳಿದರು.</p>.<p>ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯೆ ಬಿ.ಟಿ ಲೋಲಾಕ್ಷಮ್ಮ, ಸುವರ್ಣ, ಪ್ರಾಂಶುಪಾಲರಾದ ಸಂದೀಪ್, ಪುಷ್ಪರಾಣಿ , ಸಂಸ್ಥೆಯ ಅಧೀಕ್ಷಕ ವಿರೂಪಾಕ್ಷಪ್ಪ. ಸಿ ಯೋಗೇಶ್ ದಯಾನಂದ್, ಸಾಗರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಳ್ಳಕೆರೆ</strong>: ಮಹಿಳೆಯರು ಕುಟುಂಬದ ಶಕ್ತಿಯಾಗಿ, ಸಮಾಜದಲ್ಲಿ ಪ್ರೇರಣೆಯಾಗಿ ಹಾಗೂ ದೇಶದ ಪ್ರಗತಿಯ ಪ್ರಮುಖ ಶಕ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ವೇದ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಿ.ಟಿ ರವೀಂದ್ರ ಹೇಳಿದರು.</p>.<p>ಮಹಿಳಾ ದಿನಾಚರಣೆ ಅಂಗವಾಗಿ ಭಾನುವಾರ ಸಾಣಿಕೆರೆ ಬಳಿಯಿರುವ ವೇದ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮಹಿಳೆಯರಿಗೆ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಸಮಾಜದಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದ್ದು, ಅವರಿಗೆ ಪುರುಷರಷ್ಟೇ ಪ್ರಾಧಾನ್ಯತೆ ನೀಡಬೇಕು. ಮಹಿಳೆ ಅಡುಗೆ ಮನೆಗೆ ಸೀಮಿತವಲ್ಲ. ಪ್ರತಿತ್ರದಲ್ಲಿ ಅವಕಾಶ ಕೊಟ್ಟರೆ ಪುರುಷರಿಗಿಂತ ಹೆಚ್ಚು ಸಾಧನೆ ಮಾಡುತ್ತಾರೆ. ಕೋವಿಡ್ ಸಮಯದಲ್ಲಿ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ನರ್ಸ್ಗಳು ಜೀವ ಪಣಕ್ಕಿಟ್ಟು ಕೆಲಸ ಮಾಡಿರುವುದು ಶ್ಲಾಘನೀಯ ಎಂದರು.</p>.<p>ಗ್ರಾಮೀಣ ಭಾಗದಲ್ಲಿ ಈಗಲೂ ಯುವತಿಯರು ಪಿಯು ಮುಗಿಸಿದರೆ ಮದುವೆ ಮಾಡಲು ಮುಂದಾಗುತ್ತಾರೆ. ಪೋಷಕರು ಇಂತಹ ನಿರ್ಧಾರವನ್ನು ಬಿಟ್ಟು ಹೆಣ್ಣುಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಿ ಸ್ವಾವಲಂಬಿ ಬದುಕನ್ನು ನಿರ್ಮಿಸಿಕೊಳ್ಳಲು ನೆರವಾಗಬೇಕು ಎಂದು ಹೇಳಿದರು.</p>.<p>ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯೆ ಬಿ.ಟಿ ಲೋಲಾಕ್ಷಮ್ಮ, ಸುವರ್ಣ, ಪ್ರಾಂಶುಪಾಲರಾದ ಸಂದೀಪ್, ಪುಷ್ಪರಾಣಿ , ಸಂಸ್ಥೆಯ ಅಧೀಕ್ಷಕ ವಿರೂಪಾಕ್ಷಪ್ಪ. ಸಿ ಯೋಗೇಶ್ ದಯಾನಂದ್, ಸಾಗರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>