ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ: ಚನ್ನಕೇಶವ ಸ್ವಾಮಿ ಅದ್ದೂರಿ ರಥೋತ್ಸವ

Last Updated 9 ಫೆಬ್ರುವರಿ 2020, 13:03 IST
ಅಕ್ಷರ ಗಾತ್ರ

ಚಿತ್ರದುರ್ಗ: ಇಲ್ಲಿನ ಕೆಳಗೋಟೆಯ ಸಿ.ಕೆ. ಪುರದ ಚನ್ನಕೇಶವ ಸ್ವಾಮಿ ದೇಗುಲ ಮುಂಭಾಗದಲ್ಲಿ ಭಾನುವಾರ ಶ್ರೀದೇವಿ, ಭೂದೇವಿ ಸಹಿತ ಚನ್ನಕೇಶವ ಸ್ವಾಮಿಯ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು.

ರಥೋತ್ಸವಕ್ಕೆ ಚಾಲನೆ ದೊರೆಯುತ್ತಿದ್ದಂತೆ ಮಂಗಳವಾದ್ಯಗಳು ಮೊಳಗಿದವು. ದಾಸಯ್ಯನವರು ಗಂಟೆ, ಜಾಗಟೆ, ಶಂಖ ಮೊಳಗಿಸಿದರು.

ಭವ್ಯ ರಥವನ್ನು ನೂರಾರು ಭಕ್ತರು ಎಳೆಯುವ ಮೂಲಕ ಭಕ್ತಿ ಸಮರ್ಪಿಸಿದರು. ದೇಗುಲದಿಂದ ಆರಂಭವಾದ ರಥೋತ್ಸವ ಕೆಳಗೋಟೆಯ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಪುನಾ ದೇಗುಲ ತಲುಪಿತು. ಇದೇ ಸಂದರ್ಭದಲ್ಲಿ ಭಕ್ತರಿಗೆ ಪ್ರಸಾದ ವಿತರಿಸಲಾಯಿತು.

ಸಿ.ಕೆ. ಪುರ ಬಡಾವಣೆ, ಕೆಳಗೋಟೆ, ಆಕಾಶವಾಣಿ ಸುತ್ತಲಿನ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ಚನ್ನಕೇಶವ ಸ್ವಾಮಿಯ ಕಲ್ಯಾಣೋತ್ಸವವೂ ಅದ್ದೂರಿಯಾಗಿ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT