ಹುಳಿಯಾರು ಪಟ್ಟಣದಿಂದ ನಸ್ರೀನ್ ತಾಜ್ ಅವರನ್ನು ಬೈಕ್ ಹಿಂಬದಿಯಲ್ಲಿ ಕೂರಿಸಿಕೊಂಡು ಬರುತ್ತಿದ್ದ ನಯಾಜ್ ಉಲ್ಲಾ ಖಾನ್ ಅವರು ತಮ್ಮ ಬೈಕ್ ಅನ್ನು ಪತ್ನಿ ಷಬಾನ್ ಬಾನು, ಮಗ ಶಾಬಜ್ ಖಾನ್, ಅಕ್ಕನ ಮಗ ಅತೀಕ್ ಸ್ಕಾರ್ಪಿಯೊ ವಾಹನದಲ್ಲಿ ಹಿಂಬಾಲಿಸಿದ್ದನ್ನು ಅರಿತು ಬೈಕ್ನ ವೇಗ ಹೆಚ್ಚಿಸಿದ್ದಾರೆ. ಈ ಸಂದರ್ಭ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಲ್ಲು ಕಂಬಕ್ಕೆ ಡಿಕ್ಕಿ ಹೊಡೆದಿದ್ದಾರೆ. ಇದೇ ವೇಳೆ ಅವರನ್ನು ಹಿಂಬಾಲಿಸುತ್ತಿದ್ದ ಸ್ಕಾರ್ಪಿಯೊ ವಾಹನವೂ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದಿದೆ. ಅವರ ಪತ್ನಿ ಸೇರಿ ಇಬ್ಬರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಶ್ರೀರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.