ಮಳೆಯಿಂದಾಗಿ ಸಮೀಪದ ಹನುಮನಕಟ್ಟೆ, ಕೇಶವಾಪುರ, ಚಿಕ್ಕಂದವಾಡಿ, ಚಿಕ್ಕಜಾಜೂರು, ರಂಗವ್ವನಹಳ್ಳಿ, ಕಡೂರು ಮೊದಲಾದ ಗ್ರಾಮಗಳಲ್ಲಿನ ಅಡಿಕೆ, ತೆಂಗಿನ ತೋಟಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ನಿಂತಿದೆ. ಬೆಳೆದು ನಿಂತಿರುವ ರಾಗಿ ತೆನೆಗಳು ಸಂಪೂರ್ಣವಾಗಿ ಮುಳುಗಡೆಯಾಗಿದೆ. ಮೆಕ್ಕೆಜೋಳದ ತೆನೆಗಳು ನೆಲಕ್ಕೆ ಬಿದ್ದಿದ್ದು ಮೊಳಕೆಯೊಡೆಯುವ ಭೀತಿ ಎದುರಾಗಿದೆ.