<p><strong>ಚಿತ್ರದುರ್ಗ</strong>: ಹಿಂಗಾರು ಹಂಗಾಮಿನಲ್ಲಿ ಬೆಳೆದಿರುವ ಕಡಲೆ ಕೆಲ ದಿನಗಳಿಂದ ಎಪಿಎಂಸಿಗೆ ಆವಕವಾಗುತ್ತಿದೆ. ಆದರೆ, ಕಳೆದ ಬಾರಿ ಕ್ವಿಂಟಲ್ಗೆ ಸರಾಸರಿ ₹ 7,556 ಬೆಲೆಗೆ ಮಾರಾಟವಾಗಿದ್ದ ಕಡಲೆ ದರ ಇದೀಗ ₹ 3,847ಕ್ಕೆ ಕುಸಿದಿದೆ.</p>.<p>‘ಮುಂಗಾರು ಬೆಳೆ ಕೈಕೊಟ್ಟರೂ ಹಿಂಗಾರು ಹಂಗಾಮಿನಲ್ಲಿ ಬೆಳೆದ ಕಡಲೆ ಕೈಹಿಡಿಯಬಹುದು’ ಎಂಬ ಕೃಷಿಕರ ನಿರೀಕ್ಷೆ ಹುಸಿಯಾಗಿದೆ.</p>.<p>ಸೆಪ್ಟೆಂಬರ್, ಅಕ್ಟೋಬರ್ನಲ್ಲಿ ಮಳೆ ಕೈಕೊಟ್ಟ ಕಾರಣ ಕಡಲೆ ಬೆಳೆ ತೀವ್ರ ಹಾನಿಗೊಳಗಾಗಿದೆ. ಜಿಲ್ಲೆಯಲ್ಲಿ ಅಂದಾಜು 55,000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗುತ್ತಿದ್ದ ಕಡಲೆ ಬೆಳೆ ತೀವ್ರ ನಷ್ಟಕ್ಕೊಳಗಾಗಿ ಕೇವಲ 39,500 ಹೆಕ್ಟೇರ್ ಪ್ರದೇಶದಲ್ಲಿ ರೈತರ ಕೈಗೆಟುಕಿದೆ.</p>.<p>‘ಕಳೆದ ಹಂಗಾಮಿನಲ್ಲಿ ಕನಿಷ್ಠ ಬೆಂಬಲಬೆಲೆ ಯೋಜನೆ ಅಡಿ ಪ್ರತಿ ಕ್ವಿಂಟಲ್ ಕಡಲೆಗೆ ₹ 5,400 ಬೆಲೆ ನಿಗದಿಯಾಗಿತ್ತು. ಆದರೆ, ಮುಕ್ತ ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಕಡಲೆಗೆ, ಕ್ವಿಂಟಲ್ಗೆ ಗರಿಷ್ಠ ₹ 8,800ರವರೆಗೂ ದರ ದೊರೆತಿತ್ತು. ಈ ಬಾರಿ ಅದಕ್ಕೆ ಹೋಲಿಸಿದರೆ ಅರ್ಧದಷ್ಟು ಬೆಲೆಯೂ ಇಲ್ಲದ ಕಾರಣ ನಮ್ಮ ಸಂಕಷ್ಟಕ್ಕೆ ಕೊನೆಯೇ ಇಲ್ಲದಂತಾಗಿದೆ’ ಎಂದು ರೈತರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಪ್ರಸಕ್ತ ಸಾಲಿನಲ್ಲಿ ಈವರೆಗೆ 71,992 ಕ್ವಿಂಟಲ್ ಕಡಲೆ ಸ್ಥಳೀಯ ಎಪಿಎಂಸಿಗೆ ಆವಕವಾಗಿದೆ. ಆಂಧ್ರಪ್ರದೇಶದ ರಾಯದುರ್ಗ, ತುಮಕೂರು ಜಿಲ್ಲೆಯ ಪಾವಗಡ, ಚಿಕ್ಕಮಗಳೂರು ಜಿಲ್ಲೆಯ ಕಡೂರು, ಬೀರೂರು ಕಡೆಯಿಂದಲೂ ರೈತರು ಇದೇ ಮಾರುಕಟ್ಟೆಗೆ ಕಡಲೆ ತರುತ್ತಿರುವ ಕಾರಣ ಆವಕದಲ್ಲಿ ಕೊರತೆಯಾಗಿಲ್ಲ.</p>.<p>ಜಿಲ್ಲೆಯಾದ್ಯಂತ 2024–25ನೇ ಸಾಲಿನಲ್ಲಿ 55 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಕಡಲೆ ಬೆಳೆಯಲಾಗಿತ್ತು. ಬೆಲೆ ಕುಸಿತ ಹಿನ್ನಲೆಯಲ್ಲಿ ಕನಿಷ್ಠ ಬೆಂಬಲಬೆಲೆ ಯೋಜನೆಯಡಿ ಕ್ವಿಂಟಲ್ಗೆ ₹ 7,000 ನಿಗದಿ ಮಾಡಬೇಕು ಎಂದು ರೈತರು ಸರ್ಕಾರವನ್ನು ಒತ್ತಾಯಿಸಿದ್ದಾರೆ.</p>.<p>‘ಈ ವರ್ಷ ಶೇ 50ರಷ್ಟು ಇಳುವರಿ ತಗ್ಗಿದೆ. ಇಳುವರಿ ಕಡಿಮೆಯಾದಾಗ ಬೆಲೆ ಹೆಚ್ಚಾಗುತ್ತದೆ. ಈ ಬಾರಿ ಬೆಲೆಯೂ ಕುಸಿದಿದೆ. ಸರ್ಕಾರ ಸಕಾಲಕ್ಕೆ ಖರೀದಿ ಕೇಂದ್ರ ತೆರೆಯದ ಕಾರಣ ರೈತರು ನಷ್ಟ ಅನುಭವಿಸುವಂತಾಗಿದೆ’ ಎಂದು ತಾಲ್ಲೂಕಿನ ರೈತ ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ ಬೇಸರ ವ್ಯಕ್ತಪಡಿಸಿದರು.</p> .<div><blockquote>ಬೆಂಬಲ ಬೆಲೆ ಯೋಜನೆಯಡಿ ಕಡಲೆಕಾಳು ಕ್ವಿಂಟಲ್ಗೆ ₹ 5845 ಬೆಲೆ ನಿಗದಿ ಮಾಡಲಾಗಿದೆ. 12 ಕಡೆ ಖರೀದಿ ಕೇಂದ್ರ ತೆರೆದು ಕಡಲೆಕಾಳು ಖರೀದಿ ಮಾಡಲಾಗುವುದು</blockquote><span class="attribution"> ಕೆ.ಚೈತ್ರಾ ಕೃಷಿ ಮಾರುಕಟ್ಟೆ ಇಲಾಖೆ ಉಪ ನಿರ್ದೇಶಕಿ</span></div>.<p><strong>ನೋಂದಣಿ ಪ್ರಕ್ರಿಯೆ ಪ್ರಾರಂಭ </strong></p><p>ರಾಜ್ಯ ಸಹಕಾರ ಮಾರಾಟ ಮಂಡಳದಿಂದ ಬೆಂಬಲ ಬೆಲೆ ಯೋಜನೆಯಡಿ ಕಡಲೆಕಾಳು ಖರೀದಿಗೆ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ. ರೈತರು ಆಧಾರ್ ಕಾರ್ಡ್ ಬಳಸಿ ಬಯೋಮೆಟ್ರಿಕ್ ಮೂಲಕ ಹೆಸರು ನೋಂದಣಿ ಮಾಡಿಸಬೇಕು. ಸರ್ಕಾರದ ಆದೇಶದಂತೆ ಪ್ರತಿ ಕ್ವಿಂಟಾಲ್ಗೆ ₹ 5845ರಂತೆ ಪ್ರತಿ ರೈತರಿಂದ ಪ್ರತಿ ಎಕರೆಗೆ 4 ಕ್ವಿಂಟಾಲ್ನಂತೆ ಗರಿಷ್ಟ 40 ಕ್ವಿಂಟಾಲ್ ನಿಗದಿಪಡಿಸಲಾಗಿದೆ ಎಂದು ಕೆಎಸ್ಸಿಎಂಎಫ್ ಶಾಖಾ ವ್ಯವಸ್ಥಾಪಕ ಬಸವೇಶ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ಹಿಂಗಾರು ಹಂಗಾಮಿನಲ್ಲಿ ಬೆಳೆದಿರುವ ಕಡಲೆ ಕೆಲ ದಿನಗಳಿಂದ ಎಪಿಎಂಸಿಗೆ ಆವಕವಾಗುತ್ತಿದೆ. ಆದರೆ, ಕಳೆದ ಬಾರಿ ಕ್ವಿಂಟಲ್ಗೆ ಸರಾಸರಿ ₹ 7,556 ಬೆಲೆಗೆ ಮಾರಾಟವಾಗಿದ್ದ ಕಡಲೆ ದರ ಇದೀಗ ₹ 3,847ಕ್ಕೆ ಕುಸಿದಿದೆ.</p>.<p>‘ಮುಂಗಾರು ಬೆಳೆ ಕೈಕೊಟ್ಟರೂ ಹಿಂಗಾರು ಹಂಗಾಮಿನಲ್ಲಿ ಬೆಳೆದ ಕಡಲೆ ಕೈಹಿಡಿಯಬಹುದು’ ಎಂಬ ಕೃಷಿಕರ ನಿರೀಕ್ಷೆ ಹುಸಿಯಾಗಿದೆ.</p>.<p>ಸೆಪ್ಟೆಂಬರ್, ಅಕ್ಟೋಬರ್ನಲ್ಲಿ ಮಳೆ ಕೈಕೊಟ್ಟ ಕಾರಣ ಕಡಲೆ ಬೆಳೆ ತೀವ್ರ ಹಾನಿಗೊಳಗಾಗಿದೆ. ಜಿಲ್ಲೆಯಲ್ಲಿ ಅಂದಾಜು 55,000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗುತ್ತಿದ್ದ ಕಡಲೆ ಬೆಳೆ ತೀವ್ರ ನಷ್ಟಕ್ಕೊಳಗಾಗಿ ಕೇವಲ 39,500 ಹೆಕ್ಟೇರ್ ಪ್ರದೇಶದಲ್ಲಿ ರೈತರ ಕೈಗೆಟುಕಿದೆ.</p>.<p>‘ಕಳೆದ ಹಂಗಾಮಿನಲ್ಲಿ ಕನಿಷ್ಠ ಬೆಂಬಲಬೆಲೆ ಯೋಜನೆ ಅಡಿ ಪ್ರತಿ ಕ್ವಿಂಟಲ್ ಕಡಲೆಗೆ ₹ 5,400 ಬೆಲೆ ನಿಗದಿಯಾಗಿತ್ತು. ಆದರೆ, ಮುಕ್ತ ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಕಡಲೆಗೆ, ಕ್ವಿಂಟಲ್ಗೆ ಗರಿಷ್ಠ ₹ 8,800ರವರೆಗೂ ದರ ದೊರೆತಿತ್ತು. ಈ ಬಾರಿ ಅದಕ್ಕೆ ಹೋಲಿಸಿದರೆ ಅರ್ಧದಷ್ಟು ಬೆಲೆಯೂ ಇಲ್ಲದ ಕಾರಣ ನಮ್ಮ ಸಂಕಷ್ಟಕ್ಕೆ ಕೊನೆಯೇ ಇಲ್ಲದಂತಾಗಿದೆ’ ಎಂದು ರೈತರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಪ್ರಸಕ್ತ ಸಾಲಿನಲ್ಲಿ ಈವರೆಗೆ 71,992 ಕ್ವಿಂಟಲ್ ಕಡಲೆ ಸ್ಥಳೀಯ ಎಪಿಎಂಸಿಗೆ ಆವಕವಾಗಿದೆ. ಆಂಧ್ರಪ್ರದೇಶದ ರಾಯದುರ್ಗ, ತುಮಕೂರು ಜಿಲ್ಲೆಯ ಪಾವಗಡ, ಚಿಕ್ಕಮಗಳೂರು ಜಿಲ್ಲೆಯ ಕಡೂರು, ಬೀರೂರು ಕಡೆಯಿಂದಲೂ ರೈತರು ಇದೇ ಮಾರುಕಟ್ಟೆಗೆ ಕಡಲೆ ತರುತ್ತಿರುವ ಕಾರಣ ಆವಕದಲ್ಲಿ ಕೊರತೆಯಾಗಿಲ್ಲ.</p>.<p>ಜಿಲ್ಲೆಯಾದ್ಯಂತ 2024–25ನೇ ಸಾಲಿನಲ್ಲಿ 55 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಕಡಲೆ ಬೆಳೆಯಲಾಗಿತ್ತು. ಬೆಲೆ ಕುಸಿತ ಹಿನ್ನಲೆಯಲ್ಲಿ ಕನಿಷ್ಠ ಬೆಂಬಲಬೆಲೆ ಯೋಜನೆಯಡಿ ಕ್ವಿಂಟಲ್ಗೆ ₹ 7,000 ನಿಗದಿ ಮಾಡಬೇಕು ಎಂದು ರೈತರು ಸರ್ಕಾರವನ್ನು ಒತ್ತಾಯಿಸಿದ್ದಾರೆ.</p>.<p>‘ಈ ವರ್ಷ ಶೇ 50ರಷ್ಟು ಇಳುವರಿ ತಗ್ಗಿದೆ. ಇಳುವರಿ ಕಡಿಮೆಯಾದಾಗ ಬೆಲೆ ಹೆಚ್ಚಾಗುತ್ತದೆ. ಈ ಬಾರಿ ಬೆಲೆಯೂ ಕುಸಿದಿದೆ. ಸರ್ಕಾರ ಸಕಾಲಕ್ಕೆ ಖರೀದಿ ಕೇಂದ್ರ ತೆರೆಯದ ಕಾರಣ ರೈತರು ನಷ್ಟ ಅನುಭವಿಸುವಂತಾಗಿದೆ’ ಎಂದು ತಾಲ್ಲೂಕಿನ ರೈತ ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ ಬೇಸರ ವ್ಯಕ್ತಪಡಿಸಿದರು.</p> .<div><blockquote>ಬೆಂಬಲ ಬೆಲೆ ಯೋಜನೆಯಡಿ ಕಡಲೆಕಾಳು ಕ್ವಿಂಟಲ್ಗೆ ₹ 5845 ಬೆಲೆ ನಿಗದಿ ಮಾಡಲಾಗಿದೆ. 12 ಕಡೆ ಖರೀದಿ ಕೇಂದ್ರ ತೆರೆದು ಕಡಲೆಕಾಳು ಖರೀದಿ ಮಾಡಲಾಗುವುದು</blockquote><span class="attribution"> ಕೆ.ಚೈತ್ರಾ ಕೃಷಿ ಮಾರುಕಟ್ಟೆ ಇಲಾಖೆ ಉಪ ನಿರ್ದೇಶಕಿ</span></div>.<p><strong>ನೋಂದಣಿ ಪ್ರಕ್ರಿಯೆ ಪ್ರಾರಂಭ </strong></p><p>ರಾಜ್ಯ ಸಹಕಾರ ಮಾರಾಟ ಮಂಡಳದಿಂದ ಬೆಂಬಲ ಬೆಲೆ ಯೋಜನೆಯಡಿ ಕಡಲೆಕಾಳು ಖರೀದಿಗೆ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ. ರೈತರು ಆಧಾರ್ ಕಾರ್ಡ್ ಬಳಸಿ ಬಯೋಮೆಟ್ರಿಕ್ ಮೂಲಕ ಹೆಸರು ನೋಂದಣಿ ಮಾಡಿಸಬೇಕು. ಸರ್ಕಾರದ ಆದೇಶದಂತೆ ಪ್ರತಿ ಕ್ವಿಂಟಾಲ್ಗೆ ₹ 5845ರಂತೆ ಪ್ರತಿ ರೈತರಿಂದ ಪ್ರತಿ ಎಕರೆಗೆ 4 ಕ್ವಿಂಟಾಲ್ನಂತೆ ಗರಿಷ್ಟ 40 ಕ್ವಿಂಟಾಲ್ ನಿಗದಿಪಡಿಸಲಾಗಿದೆ ಎಂದು ಕೆಎಸ್ಸಿಎಂಎಫ್ ಶಾಖಾ ವ್ಯವಸ್ಥಾಪಕ ಬಸವೇಶ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>