ಮಳೆ ಕೊರತೆ, ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಮೆಕ್ಕೆಜೋಳದ ಫಸಲಿಗೆ ಹಾನಿ ಹಾಗೂ ಸಾಲದಿಂದ ಬೇಸತ್ತಿದ್ದ ಅವರು ತೋಟದಲ್ಲಿ ವಿಷ ಸೇವಿಸಿದ್ದರು. ಹೊಳಲ್ಕೆರೆ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ವೈದ್ಯರ ಸಲಹೆ ಮೇರೆಗೆ ಚಿತ್ರದುರ್ಗ ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು ಎಂದು ಅವರ ಪುತ್ರಿ ಗೀತಾ ದೂರಿನಲ್ಲಿ ತಿಳಿಸಿದ್ದಾರೆ.