<p><strong>ಚಿಕ್ಕಜಾಜೂರು:</strong> ‘ತುಳಿತಕ್ಕೆ ಒಳಗಾದವರನ್ನು ಸಮಾಜದ ಮುಖ್ಯ ವಾಹಿನಿಗೆ ತರುವಲ್ಲಿ ಬಿ.ಆರ್. ಅಂಬೇಡ್ಕರ್ ಅವರ ಪಾತ್ರ ಮಹತ್ತರವಾದುದು’ ಎಂದು ದಲಿತ ಸಂಘದ ಅಧ್ಯಕ್ಷ ಪಾಂಡುರಂಗ ಸ್ವಾಮಿ ಅಭಿಪ್ರಾಯಪಟ್ಟರು.</p>.<p>ಸಮೀಪದ ಮುತ್ತುಗದೂರು ಗ್ರಾಮದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬಿ.ಆರ್. ಅಂಬೇಡ್ಕರ್ ಜಯಂತಿ ಹಾಗೂ ಅಂಬೇಡ್ಕರ್ ಪುತ್ಥಳಿಯ ಪ್ರತಿಷ್ಠಾಪನೆಯ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಸಮಾಜದ ಎಲ್ಲಾ ವರ್ಗ, ಜಾತಿಗಳಲ್ಲೂ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಹಿಂದುಳಿದವರಿದ್ದಾರೆ. ಕಡು ಕಷ್ಟದಲ್ಲಿ ಬದುಕುತ್ತಿದ್ದ ಮತ್ತು ಪ್ರಬಲ ವರ್ಗಗಳ ದೌರ್ಜನ್ಯಕ್ಕೆ ಒಳಗಾದ ಎಲ್ಲರಿಗೆ ಸಾಮಾಜಿಕ ಮತ್ತು ಶೈಕ್ಷಣಿಕ ನ್ಯಾಯ ಕೊಡಿಸುವಲ್ಲಿ ಅಂಬೇಡ್ಕರ್ ಯಶಸ್ವಿಯಾಗಿದ್ದರು’ ಎಂದರು.</p>.<p>ಹೊಳಲ್ಕೆರೆ ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷ ಎಂ.ಬಿ. ಸಿದ್ಧೇಶ್ ಭೂಮಿ ಪೂಜೆ ನೆರವೇರಿಸಿದರು. ಕೆಡಿಪಿ ಸದಸ್ಯ ಕಿರಣ್ ಕುಮಾರ್, ದಲಿತ ಸಂಘದ ಜಿಲ್ಲಾ ಸಂಚಾಲಕ ಜಿ. ಶಿವಣ್ಣ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮದನ್ಕುಮಾರ್, ಗ್ರಾಮಸ್ಥರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-44-989357623</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಜಾಜೂರು:</strong> ‘ತುಳಿತಕ್ಕೆ ಒಳಗಾದವರನ್ನು ಸಮಾಜದ ಮುಖ್ಯ ವಾಹಿನಿಗೆ ತರುವಲ್ಲಿ ಬಿ.ಆರ್. ಅಂಬೇಡ್ಕರ್ ಅವರ ಪಾತ್ರ ಮಹತ್ತರವಾದುದು’ ಎಂದು ದಲಿತ ಸಂಘದ ಅಧ್ಯಕ್ಷ ಪಾಂಡುರಂಗ ಸ್ವಾಮಿ ಅಭಿಪ್ರಾಯಪಟ್ಟರು.</p>.<p>ಸಮೀಪದ ಮುತ್ತುಗದೂರು ಗ್ರಾಮದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬಿ.ಆರ್. ಅಂಬೇಡ್ಕರ್ ಜಯಂತಿ ಹಾಗೂ ಅಂಬೇಡ್ಕರ್ ಪುತ್ಥಳಿಯ ಪ್ರತಿಷ್ಠಾಪನೆಯ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಸಮಾಜದ ಎಲ್ಲಾ ವರ್ಗ, ಜಾತಿಗಳಲ್ಲೂ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಹಿಂದುಳಿದವರಿದ್ದಾರೆ. ಕಡು ಕಷ್ಟದಲ್ಲಿ ಬದುಕುತ್ತಿದ್ದ ಮತ್ತು ಪ್ರಬಲ ವರ್ಗಗಳ ದೌರ್ಜನ್ಯಕ್ಕೆ ಒಳಗಾದ ಎಲ್ಲರಿಗೆ ಸಾಮಾಜಿಕ ಮತ್ತು ಶೈಕ್ಷಣಿಕ ನ್ಯಾಯ ಕೊಡಿಸುವಲ್ಲಿ ಅಂಬೇಡ್ಕರ್ ಯಶಸ್ವಿಯಾಗಿದ್ದರು’ ಎಂದರು.</p>.<p>ಹೊಳಲ್ಕೆರೆ ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷ ಎಂ.ಬಿ. ಸಿದ್ಧೇಶ್ ಭೂಮಿ ಪೂಜೆ ನೆರವೇರಿಸಿದರು. ಕೆಡಿಪಿ ಸದಸ್ಯ ಕಿರಣ್ ಕುಮಾರ್, ದಲಿತ ಸಂಘದ ಜಿಲ್ಲಾ ಸಂಚಾಲಕ ಜಿ. ಶಿವಣ್ಣ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮದನ್ಕುಮಾರ್, ಗ್ರಾಮಸ್ಥರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-44-989357623</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>