<p><strong>ಚಿಕ್ಕಜಾಜೂರು</strong>: ‘ಪರಿಸರದ ಸಂರಕ್ಷಣೆ ಮಾಡುವ ಮೂಲಕ ಭೂಮಿಯ ಫಲವತ್ತತೆ ಮತ್ತು ಭೂಮಿಯ ರಕ್ಷಣೆ ನಮ್ಮೆಲ್ಲರ ಹೊಣೆ’ ಎಂದು ಜ್ಞಾನವಿಕಾಸ ಸಮನ್ವಯಾಧಿಕಾರಿ ರೂಪಾ ತಿಳಿಸಿದರು.</p>.<p>ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನ ವಿಕಾಸ ಕೇಂದ್ರದ ಸಹಯೋಗದಲ್ಲಿ ಚಿಕ್ಕಜಾಜೂರು ಸಮೀಪದ ಬಿ. ದುರ್ಗ ವಲಯದ ಗ್ಯಾರೆಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಜನಜಾಗೃತಿ ಬೀದಿ ನಾಟಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.</p>.<p>ಶೃತಿ ಸಾಂಸ್ಕೃತಿಕ ಕಲಾ ತಂಡದ ಸದಸ್ಯರು ಭೂಮಿ ತಾಯಿಯನ್ನು ರಕ್ಷಿಸಿ, ಸ್ವಚ್ಛ ಪರಿಸರ ನಿರ್ಮಾಣ ಮಾಡುವ ಬಗ್ಗೆ, ನೀರಿನ ಸದ್ಬಳಕೆ, ಬಾಲ್ಯ ವಿವಾಹದ ದುಷ್ಪರಿಣಾಮಗಳ ಬಗ್ಗೆ ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ವಿವಿಧ ಯೋಜನೆಯ ಕಾರ್ಯಕ್ರಮಗಳ ಕುರಿತು ಬೀದಿ ನಾಟಕ ಪ್ರದರ್ಶಿಸಿದರು.</p>.<p>ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷೆ ರೇಖಾ, ಸ್ವಸಹಾಯ ಸಂಘದ ಸದಸ್ಯರು, ಶೃತಿ ಕಲಾ ತಂಡದವರು ಹಾಗೂ ಗ್ರಾಮಸ್ಥರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-44-385674884</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಜಾಜೂರು</strong>: ‘ಪರಿಸರದ ಸಂರಕ್ಷಣೆ ಮಾಡುವ ಮೂಲಕ ಭೂಮಿಯ ಫಲವತ್ತತೆ ಮತ್ತು ಭೂಮಿಯ ರಕ್ಷಣೆ ನಮ್ಮೆಲ್ಲರ ಹೊಣೆ’ ಎಂದು ಜ್ಞಾನವಿಕಾಸ ಸಮನ್ವಯಾಧಿಕಾರಿ ರೂಪಾ ತಿಳಿಸಿದರು.</p>.<p>ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನ ವಿಕಾಸ ಕೇಂದ್ರದ ಸಹಯೋಗದಲ್ಲಿ ಚಿಕ್ಕಜಾಜೂರು ಸಮೀಪದ ಬಿ. ದುರ್ಗ ವಲಯದ ಗ್ಯಾರೆಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಜನಜಾಗೃತಿ ಬೀದಿ ನಾಟಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.</p>.<p>ಶೃತಿ ಸಾಂಸ್ಕೃತಿಕ ಕಲಾ ತಂಡದ ಸದಸ್ಯರು ಭೂಮಿ ತಾಯಿಯನ್ನು ರಕ್ಷಿಸಿ, ಸ್ವಚ್ಛ ಪರಿಸರ ನಿರ್ಮಾಣ ಮಾಡುವ ಬಗ್ಗೆ, ನೀರಿನ ಸದ್ಬಳಕೆ, ಬಾಲ್ಯ ವಿವಾಹದ ದುಷ್ಪರಿಣಾಮಗಳ ಬಗ್ಗೆ ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ವಿವಿಧ ಯೋಜನೆಯ ಕಾರ್ಯಕ್ರಮಗಳ ಕುರಿತು ಬೀದಿ ನಾಟಕ ಪ್ರದರ್ಶಿಸಿದರು.</p>.<p>ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷೆ ರೇಖಾ, ಸ್ವಸಹಾಯ ಸಂಘದ ಸದಸ್ಯರು, ಶೃತಿ ಕಲಾ ತಂಡದವರು ಹಾಗೂ ಗ್ರಾಮಸ್ಥರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-44-385674884</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>